ಬೆಂಗಳೂರಲ್ಲಿ ಶೀಘ್ರ ಬೈಕ್, ಏರ್ ಆ್ಯಂಬುಲೆನ್ಸ್ ಸೇವೆ
ಮಂಗಳೂರು, ಜ. 1: ಚೆನ್ನೈ ಹಾಗೂ ಬೆಂಗಳೂರಿನಲ್ಲಿ ಅಂಗಾಂಗ ಸ್ಥಳಾಂತರಿಸಲು ರಸ್ತೆಗಳಲ್ಲಿ ಶೂನ್ಯ ಟ್ರಾಫಿಕ್ ವ್ಯವಸ್ಥೆ ಮಾಡಿದ್ದು ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ, ಶೂನ್ಯ ಟ್ರಾಫಿಕ್ ವ್ಯವಸ್ಥೆ ಜಾರಿ ಮಾಡಿದ್ದಾಗ ಸಾಕಷ್ಟು ಪ್ರಯಾಣಿಕರು ಸಂಚಾರ ಸ್ಥಗಿತಗೊಳಿಸಿ ತೊಂದರೆ ಎದುರಿಸಬೇಕಾಯಿತು.
ಆದ್ದರಿಂದ ಕರ್ನಾಟಕ ಸರ್ಕಾರವು ಹೆಲಿಕಾಪ್ಟರ್ ಉಪಯೋಗಿಸಿ ಏರ್ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡಲು ಯೋಚಿಸಿತ್ತು. ಅದರಲ್ಲಿ ಚಿಕ್ಕ ಆಸ್ಪತ್ರೆಯಲ್ಲಿರುವಂತಹ ಸೌಲಭ್ಯಗಳನ್ನು ಅಳವಡಿಸುವುದು ಹಾಗೂ ಅಪಘಾತ, ಅಂಗಾಂಗ ಸಾಗಿಸುವ ಸಂದರ್ಭ ಇದನ್ನು ಉಪಯೋಗಿಸಲು ರಾಜ್ಯ ಸರ್ಕಾರದ ಉದ್ದೇಶವಾಗಿತ್ತು. [ಕಾಲು ಕಳೆದುಕೊಂಡರೂ ಆಂಬುಲೆನ್ಸ್ ಗೆ ಕರೆ ಮಾಡಿದ]
"ಕರ್ನಾಟಕದಲ್ಲಿ ಏರ್ ಆ್ಯಂಬುಲೆನ್ಸ್ ಸೇವೆ ಒದಗಿಸಲು ಕರ್ನಾಟಕ ಮೂಲದ ಅನಿವಾಸಿ ಭಾರತೀಯರು ನಡೆಸುತ್ತಿರುವ ಮೂರು ಸಂಸ್ಥೆಗಳು ಆಸಕ್ತಿ ತೋರಿಸಿವೆ" ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವ ಯು.ಟಿ. ಖಾದರ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.

"ಮೊದಲು ಮೂರು ತಿಂಗಳ ಪರೀಕ್ಷಾರ್ಥ ಸೇವೆ ಆರಂಭಿಸಲಾಗುವುದು. ಈ ಸೇವೆಗೆ ಅಗತ್ಯ ಬೀಳುವ ಹಣ ಹಾಗೂ ಇತರ ಅಂಶಗಳನ್ನು ಪರಿಗಣಿಸಿ ರಾಜ್ಯಾದ್ಯಂತ ವಿಸ್ತರಿಸಲು ಚಿಂತಿಸಲಾಗುವುದು. ಇದೇ ವರ್ಷ ನವೆಂಬರ್ ತಿಂಗಳ ಅಂತ್ಯದೊಳಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಖಾದರ್ ತಿಳಿಸಿದ್ದಾರೆ. [ಬೆಂಗಳೂರಿಗೆ ಬರಲಿದೆ ಬೈಕ್ ಆ್ಯಂಬುಲೆನ್ಸ್]
ಬೈಕ್ ಆ್ಯಂಬುಲೆನ್ಸ್ : "ಇದೇ ವರ್ಷ ಜನವರಿ ಅಂತ್ಯದೊಳಗೆ ಬೆಂಗಳೂರಿನಲ್ಲಿ ಬೈಕ್ ಆ್ಯಂಬುಲೆನ್ಸ್ಗಳು ಕಾರ್ಯ ಆರಂಭಿಸಲಿವೆ. 30 ಬೈಕ್ ಆ್ಯಂಬುಲೆನ್ಸ್ಗಳಲ್ಲಿ ಮೊದಲ ಹಂತದಲ್ಲಿ 10 ಕಾರ್ಯ ಆರಂಭಿಸಲಿವೆ. ಇವುಗಳಿಂದ ಉಂಟಾಗುವ ಪ್ರಯೋಜನ ನೋಡಿಕೊಂಡು ನಂತರ ಮೈಸೂರು, ಮಂಗಳೂರು, ಹುಬ್ಬಳ್ಳಿ ಹಾಗೂ ಬೆಳಗಾವಿಯಲ್ಲಿಯೂ ಆರಂಭಿಸಲಾಗುವುದು" ಎಂದು ಖಾದರ್ ಹೇಳಿದರು.
ಎಚ್ಐವಿ ಬಾಧಿತರ ಚಿಕಿತ್ಸೆಗಾಗಿ ಮೂರು ತಿಂಗಳುಗಳ ಅವಧಿಗೆ ಔಷಧಿಗಳನ್ನು ಸಂಗ್ರಹಿಸಿಡಲು ನಿರ್ಧರಿಸಲಾಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ 5 ಕೋಟಿ ರೂ.ಗಳನ್ನು ತೆಗೆದಿರಿಸಿದೆ ಎಂದು ಖಾದರ್ ಹೇಳಿದರು.
-
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
ರೈತರ ಹಿತಾಸಕ್ತಿಗೆ ಧಕ್ಕೆಯಿಲ್ಲ: 1 ರೂಪಾಯಿಗೆ ಲೀಟರ್ ಹಾಲು ವಿವಾದಕ್ಕೆ ಸ್ಪಷ್ಟನೆ ಕೊಟ್ಟ FlipKart -
Yash: ಯಶ್ ಡಿಪ್ರೆಶನ್ನಲ್ಲಿದ್ದಾರೆ, ಕೆಜಿಎಫ್ ರೀತಿಯ ಸಿನಿಮಾ ನೀಡಲು ಆಗ್ತಿಲ್ಲ: ಜ್ಯೋತಿಷಿ ವೇಣುಸ್ವಾಮಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
ವೈಭವ್ ಸೂರ್ಯವಂಶಿ ಅದೃಷ್ಟದ ಮೇಲೆ ಸವಾರಿ ಮಾಡುತ್ತಿದ್ದಾರೆ: ಕೊಡಗಿನ ರಾಬಿನ್ ಉತ್ತಪ್ಪ ಎಚ್ಚರಿಕೆಯ ಸಲಹೆ -
Double-Decker Flyover: ಸಿಲ್ಕ್ ಬೋರ್ಡ್ ಟ್ರಾಫಿಕ್ಗೆ ಮುಕ್ತಿ: ಇದೇ ತಿಂಗಳಲ್ಲಿ ಡಬಲ್ ಡೆಕ್ಕರ್ ಫ್ಲೈಓವರ್ ಸಂಚಾರಕ್ಕೆ ಮುಕ್ತ -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಪುನೀತ್ ನಟನೆಯ "ಆಕಾಶ್" ರೀರಿಲೀಸ್: ಅಭಿಮಾನಿಗಳ ಜತೆ ಸಿನಿಮಾ ವೀಕ್ಷಿಸಿ ಕುಣಿದು ಕುಪ್ಪಳಿಸಿದ ನಟಿ ರಮ್ಯಾ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
Ajith Kumar: ನಟ ಅಜಿತ್ ಕುಮಾರ್ಗೆ ಮಹೀಂದ್ರಾದಿಂದ ರೇಸಿಂಗ್ ಕಾರ್ ಗಿಫ್ಟ್; ಇದರ ಫೀಚರ್ಸ್ ಕೇಳಿದ್ರೆ ಫಿದಾ ಆಗ್ತೀರಿ












Click it and Unblock the Notifications