ಭಾರತ್ ಬಂದ್: ದಕ್ಷಿಣ ಕನ್ನಡದಲ್ಲಿ ಕೆಲವೆಡೆ ಬೆಂಬಲ, ಹಲವೆಡೆ ವಿರೋಧ
ಮಂಗಳೂರು, ಸೆಪ್ಟೆಂಬರ್ 09: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ಕರೆ ನೀಡಿರುವ ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಬೆಂಬಲ ವ್ಯಕ್ತವಾಗುವ ಸೂಚನೆ ದೊರಕಿದೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಾಳೆ ಸೋಮವಾರ (ಸೆ.10) ಖಾಸಗಿ ಬಸ್
ಸೇವೆ, ಆಟೋರಿಕ್ಷಾ ಸೇರಿದಂತೆ ಕೆಎಸ್ ಆರ್ ಟಿಸಿ ಬಸ್ ಸೇವೆ ಬಂದ್ ಆಗಲಿದೆ.
ಟ್ಯಾಕ್ಸಿ ಅಸೋಸಿಯೇಷನ್ ಕೂಡ ಬೆಂಬಲ ಘೋಷಿಸಿದ್ದು, ಈ ನಡುವೆ ಮಂಗಳೂರು ನಗರದಲ್ಲಿ ಕೆಲವೆಡೆ ಬಂದ್ ಗೆ ಬೆಂಬಲ ನೀಡದಿರಲು ತೀರ್ಮಾನಿಸಲಾಗಿದೆ.

ನಗರದ ಹಂಪನಕಟ್ಟೆ, ರಥ ಬೀದಿ, ಬಂದರ್ ನ ಕೆಲಭಾಗ ಸೇರಿದಂತೆ ಇನ್ನಿತರ ಕಡೆ ಬಂದ್ ಗೆ ಬೆಂಬಲವಿಲ್ಲ ಎನ್ನುವ ಬರಹಗಳು ಪೋಸ್ಟರ್ ನಲ್ಲಿ ರಾರಾಜಿಸ ತೊಡಗಿವೆ. ನಾಳೆಯ ಭಾರತ್ ಬಂದ್ ಗೆ ನಮ್ಮ ಬೆಂಬಲವಿಲ್ಲ. ಸೆಪ್ಟೆಂಬರ್ 10 ರಂದು ನಮ್ಮ ಅಂಗಡಿ ಎಂದಿಗಿಂತಲೂ ಒಂದು ಗಂಟೆ ಹೆಚ್ಚು ತೆರೆದಿರುತ್ತದೆ ಎಂದು ಬರೆದ ಪೋಸ್ಟರ್ ಗಳನ್ನು ಅಂಗಡಿಗಳ ಮುಂದೆ ಅಂಟಿಸಲಾಗಿದೆ.
ಭಾರತ ಬಂದ್ ಸಂದರ್ಭದಲ್ಲಿ ನಾವು ಅಂಗಡಿ ಮುಂಗಟ್ಟು ತೆರೆದಿಟ್ಟು ವ್ಯಾಪಾರ ನಡೆಸಲು ನಿರ್ಧರಿಸಿದ್ದೇವೆ ಎಂದು ಓಲ್ಡ್ ಬಂದರ್ ಹೋಲ್ ಸೇಲ್ ಕಿರಾಣಿ ಅಂಡ್ ಅಲೈಟ್ ಮಾರ್ಚೆಂಟ್ಸ್ ಅಸೋಸಿಯೇಷನ್ ಘೋಷಿಸಿದೆ.

ನಾಳೆಯ ಭಾರತ್ ಬಂದ್ ರಾಜಕೀಯ ಪ್ರೇರಿತ ಎಂದು ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಘಟಕ ಆರೋಪಿಸಿದ್ದು, ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ರಾಜ್ಯದ ಕಾಂಗ್ರೆಸ್, ಜನತಾದಳ ಮೈತ್ರಿ ಸರ್ಕಾರ ಇಂಧನ ಬೆಲೆಯಲ್ಲಿ ಕಳೆದ ಬಾರಿ 2 ರೂಪಾಯಿ ಹೆಚ್ಚಿಸಿ ಗ್ರಾಹಕರಿಗೆ ಗಾಯದ ಮೇಲೆ ಬರೆ ಎಳೆದಿದೆ.
ಈ ಕುರಿತು ಕಣ್ಣು ಮುಚ್ಚಿ ಕುಳಿತ ಕಾಂಗ್ರೆಸ್ ಮುಖಂಡರು ನಾಳೆ ಬಂದ್ ಕರೆ ನೀಡಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿದೆ.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications