ಸೆ.2ರಂದು ದಕ್ಷಿಣ ಕನ್ನಡದಲ್ಲಿ ಸ್ವಯಂ ಪ್ರೇರಿತ ಬಂದ್

ಮಂಗಳೂರು, ಸೆಪ್ಟೆಂಬರ್ 01 : ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಸೆಪ್ಟೆಂಬರ್ 2ರ ಭಾರತ್‌ ಬಂದ್‌ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಬೆಂಬಲ ನೀಡಲಾಗಿದೆ. ಜಿಲ್ಲಾದ್ಯಂತ ಸ್ವಯಂ ಪ್ರೇರಿತ ಬಂದ್ ಆಚರಿಸಲಾಗುತ್ತದೆ ಎಂದು ಕಾರ್ಮಿಕ ಸಂಘಟನೆಗಳು ಹೇಳಿವೆ.[ದಕ್ಷಿಣ ಕನ್ನಡದಲ್ಲಿ ಶಾಲಾ-ಕಾಲೇಜಿಗೆ ರಜೆ ಇಲ್ಲ]

ಭಾರತ್ ಬಂದ್‌ನಿಂದಾಗಿ ಜನಜೀವನ ಅಸ್ತವ್ಯಸ್ತವಾಗುವ ಸಂಭವವಿದೆ. ಎಲ್ಲಾ ಕಾರ್ಮಿಕ ವಿಭಾಗಗಳ 17 ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬಂದ್ ಕರೆ ನೀಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.[ಮುಷ್ಕರ:ಯಾವ ಸೇವೆ ಲಭ್ಯ? ಯಾವುದು ಅಲಭ್ಯ?]

Bharat Bandh on September 2 : Holiday for schools in Mangaluru

ಅಂಗಡಿ ಮುಂಗಟ್ಟುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗ್ಗೆ 6 ರಿಂದ ಸಂಜೆ 6 ರವರೆಗೆ ಮುಷ್ಕರ ನಡೆಯಲಿದ್ದು ಟ್ಯಾಕ್ಸಿ, ಆಟೋ ಬಸ್ ಯಾವುದೇ ವಾಹನಗಳು ರಸ್ತೆಗೆ ಇಳಿಯುವುದಿಲ್ಲ. ಆದ್ದರಿಂದ, ದೂರದ ಊರಿಗೆ ಪ್ರಯಾಣ ಬೆಳೆಸುವವರು ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳುವುದು ಒಳಿತು. [ಸೆ. 2ರ ಕಾರ್ಮಿಕ ಸಂಘಟನೆಗಳ ಮುಷ್ಕರ ಯಾಕೆ?]

ತುರ್ತು ಸೇವೆಗಳಾದ ಆಂಬ್ಯುಲೆನ್ಸ್, ಔಷಧ, ಹಾಲು ಪೂರೈಕೆಯಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ.

ಪರೀಕ್ಷೆ ಮುಂದೂಡಿಕೆ : ಮುಷ್ಕರದ ಹಿನ್ನಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಸೆ. 2 ರಂದು ನಿಗದಿಪಡಿಸಿದ್ದ ಬಿಎ/ ಬಿಕಾಂ ಪರೀಕ್ಷೆಗಳನ್ನು ಸೆ. 27ಕ್ಕೆ ಮುಂದೂಡಲಾಗಿದೆ ಎಂದು ಕರ್ನಾಟಕ ರಾಜ್ಯಮುಕ್ತ ವಿಶ್ವವಿದ್ಯಾಲಯ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+