ಮಂಗಳೂರು ಹೋಂಸ್ಟೇ ದಾಳಿ : ಪತ್ರಕರ್ತ ನವೀನ್ ಸೂರಿಂಜೆ ಖುಲಾಸೆ
ಮಂಗಳೂರು, ಡಿಸೆಂಬರ್ 06: 2012ರ ಹೋಂಸ್ಟೇ ಮೇಲಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯಾಗಿದ್ದ ಪತ್ರಕರ್ತ, ಕಾರ್ಯಕರ್ತ ನವೀನ್ ಸೂರಿಂಜೆ ಅವರಿಗೆ 6ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯವು ಶುಭ ಸುದ್ದಿ ಕೊಟ್ಟಿದೆ. ಈ ಪ್ರಕರಣದಿಂದ ನವೀನ್ ಅವರು ಖುಲಾಸೆಗೊಂಡಿದ್ದಾರೆ.
ಈ ಪ್ರಕರಣದಲ್ಲಿ ಆರೋಪಿ ನಂ.44ರಲ್ಲಿದ್ದ ನವೀನ್ ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಈ ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದ್ದರು. ಆದರೆ, ತಡವಾಗಿಯಾದರೂ ನ್ಯಾಯ ಲಭಿಸಿದೆ.
ಈ ಬಗ್ಗೆ ಒನ್ಇಂಡಿಯಾ ಪ್ರತಿನಿಧಿ ಜತೆ ಮಾತನಾಡಿದ ನವೀನ್ ಅವರು, ಇದೇನು ಖುಷಿಯ ವಿಷಯ ಎನ್ನಲಾರೆ, ನಮ್ಮ ವರದಿಗೆ ಬೆಲೆ ಸಿಗಬೇಕಿದೆ. ಆರೋಪಿಗಳಿಗೆ ಶಿಕ್ಷೆಯಾದಾಗ ಖುಷಿ ಎನ್ನಬಹುದು. ಸುದ್ದಿ ಮಾಡುವ ಮೂಲಕ ಸಮಾಜದಲ್ಲಿ ಅಶಾಂತಿ ಮೂಡಿಸಿದ್ದಾರೆ ಎಂದು ಆರೋಪಿಸಲಾಗಿತ್ತು. ಆದರೆ, ಪತ್ರಿಕಾ ಸ್ವಾತಂತ್ರ್ಯಕ್ಕೆ ಹರಣ ಎಂದು ಪ್ರತಿಭಟನೆಗಳು ನಡೆದ ಬಳಿಕ, ಸರ್ಕಾರ ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಆದೇಶಿಸಿತ್ತು.

2012ರ ಜುಲೈ 28ರಂದು ಹಿಂದೂ ಜಾಗರಣ ವೇದಿಕೆ ಸದಸ್ಯರು, ಪಡೀಲ್ ನಲ್ಲಿದ್ದ ಮಾರ್ನಿಂಗ್ ಮಿಸ್ಟ್ ಹೋಂಸ್ಟೇ ಮೇಲೆ ದಾಳಿ ನಡೆಸಿದ್ದರು. ಹೋಂಸ್ಟೇನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿವೆ ಎಂದು ಆರೋಪಿಸಿದ್ದರು. ಈ ಘಟನೆಯನ್ನು ವರದಿ ಮಾಡಲು ಟಿವಿ ವರದಿಗಾರರಾಗಿ ಸೂರಿಂಜೆ ತೆರಳಿದ್ದರು.
ಮಾರ್ನಿಂಗ್ ಮಿಸ್ಟ್ ಹೋಂ ಸ್ಟೇ ಮೇಲೆ ನಡೆದ ದಾಳಿ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡದೆ, ಅದನ್ನೆಲ್ಲ ಸ್ವತಃ ಚಿತ್ರೀಕರಿಸಿದ್ದರ ವಿರುದ್ಧ ಜಿಲ್ಲಾ ಪೊಲೀಸರು ಗರಂ ಆಗಿದ್ದರು. ಹಾಗಾಗಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು.
ಸಂತ್ರಸ್ತರ ದೂರಿನ ಮೇರೆಗೆ ಸೂರಿಂಜೆ ಹಾಗೂ ಶರಣ್ ಅವರನ್ನು ಬಂಧಿಸಿ ಕೆಲ ಕಾಲ ಜೈಲಿನಲ್ಲಿರಿಸಲಾಗಿತ್ತು. ಕೋರ್ಟಿನಲ್ಲಿ ಸಂತ್ರಸ್ತರು ಸೂರಿಂಜೆ ಪರ ಹೇಳಿಕೆ ನೀಡಿದ್ದರು, ಸೂರಿಂಜೆ ಇದ್ದಿದ್ದರಿಂದ ನಮಗೆ ರಕ್ಷಣೆ ಸಿಕ್ಕಿತು ಎಂದಿದ್ದರು. ಜನವರಿ 04, 2018ಕ್ಕೆ ಅನ್ವಯವಾಗುವಂತೆ ಸೂರಿಂಜೆ ಅವರ ಮೇಲಿನ ಪ್ರಕರಣವನ್ನು ರದ್ದುಗೊಳಿಸಲಾಗಿತ್ತು. ಆದರೆ, ಅಂತಿಮ ಆದೇಶ ಡಿಸೆಂಬರ್ 05, 2018ರಂದು ಪ್ರಕಟಿಸಲಾಗಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications