ಕುಳೂರು ಬಳಿ ಓವರ್ ಟೇಕ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕರು
ಮಂಗಳೂರು, ನವೆಂಬರ್.23: ಅತಿ ವೇಗವಾಗಿ ಬಂದ ಬೈಕ್ ಸವಾರರಿಬ್ಬರು ಓವರ್ ಟೇಕ್ ಮಾಡುವ ಭರದಲ್ಲಿ ನದಿಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಹೊರವಲಯದ ಕುಳೂರಿನಲ್ಲಿ ನಡೆದಿದೆ.
ಇಲ್ಲಿನ ಪಲ್ಗುಣಿ ನದಿ ಬಳಿ ಎರಡು ಬೈಕ್ ಗಳು ಅತಿ ವೇಗವಾಗಿ ಬಂದು ಡಿಕ್ಕಿ ಹೊಡೆದುಕೊಂಡ ಪರಿಣಾಮ ಬೈಕ್ ಸವಾರರು ನದಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತ ಬೈಕ್ ಸವಾರರನ್ನು ವಿಜೇಷ್ (22) ಹಾಗು ನಿಖಿಲ್ (22) ಎಂದು ಗುರುತಿಸಲಾಗಿದೆ.
ಬ್ಲ್ಯಾಕ್ಮೇಲ್ಗೆ ಹೆದರಿ ಆತ್ಮಹತ್ಯೆ: ಯುವಕ ಸಾವು, ಯುವತಿ ಸ್ಥಿತಿ ಗಂಭೀರ
ಘಟನೆಯ ವಿವರ
ಬಂಗ್ರ ಕೂಳೂರಿನಿಂದ ಬಜಾಜ್ ಅವೆಂಜರ್ ಬೈಕ್ ನಲ್ಲಿ ಅತಿ ವೇಗವಾಗಿ ಬೈಕ್ ಚಲಾಯಿಸಿಕೊಂಡು ಬಂದ ನಿತಿನ್ ಹಾಗೂ ವಿಜೇಷ್ ಅದೇ ರಸ್ತೆಯಲ್ಲಿ ಬರುತ್ತಿದ್ದ ಮತ್ತೊಂದು ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಆಗ ಡಿಕ್ಕಿ ಹೊಡೆದ ರಭಸಕ್ಕೆ ನಿಯಂತ್ರಣ ತಪ್ಪಿ ವಿಜೇಷ್, ನಿಖಿಲ್ ನದಿಗೆ ಬಿದ್ದರೆ, ಮತ್ತೊಂದು ಬೈಕ್ ನಲ್ಲಿದ್ದ ಹಿತೇಶ್ ಹಾಗೂ ನಿತಿನ್ ಕುಮಾರ್ ನದಿ ಪಕ್ಕಕ್ಕೆ ಬಿದ್ದಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಕಾವೂರು ಠಾಣಾ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.