ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 'ಹಕ್ಕಿ ಜ್ವರ'ದ ಭೀತಿ, ಕಟ್ಟೆಚ್ಚರ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದೆ. ಜಿಲ್ಲೆಯಾದ್ಯಂತ ಇರುವ ಕೋಳಿ ಫಾರ್ಮ್ ಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದು, ಪಿಲಿಕುಳ ನಿಸರ್ಗಧಾಮದಲ್ಲಿ ಅಗತ್ಯ ಎಚ್ಚರಿಕೆಯನ್ನು ತೆಗೆದುಕೊಳ್ಳಲಾಗುತ್ತಿದೆ
ಮಂಗಳೂರು, ಜನವರಿ 6: ಕೇರಳ ಮತ್ತು ಮೈಸೂರು ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿದೆ. ಇದೇ ಬೆನ್ನಲ್ಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ 'ಹಕ್ಕಿ ಜ್ವರ' ದ ಭೀತಿ ಆವರಿಸಿದೆ. ಹೀಗಾಗಿ ಕರಾವಳಿ ಜಿಲ್ಲೆಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ.
ಜಿಲ್ಲೆಯಾದ್ಯಂತ ಕೋಳಿ ಫಾರ್ಮ್ಗಳಿಂದ ನಿಯಮಿತ ವಾಗಿ ಮಾದರಿಗಳನ್ನು ಸಂಗ್ರಹಿಸಿ, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಕುರಿತು ಮಾತನಾಡಿದ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ.ಟಿ.ತಿಪ್ಪೇಸ್ವಾಮಿ, 'ಈಗಾಗಲೇ ಪಿಲಿಕುಳ ನಿಸರ್ಗಧಾಮದ ಅಧಿಕಾರಿಗಳು ಹಾಗೂ ಜಿಲ್ಲೆಯ ಕೋಳಿ ಸಾಕಾಣಿಕೆದಾರರ ಸಭೆ ಕರೆದು ಚರ್ಚೆ ನಡೆಸಲಾಗಿದೆ. ಕೇರಳದಲ್ಲಿ ಹಕ್ಕಿಜ್ವರ ಕಾಣಿಸಿಕೊಂಡಿರುವುದರಿಂದ ಕೋಳಿ ಫಾರ್ಮ್ ಗಳಲ್ಲಿ ಹೆಚ್ಚಿನ ನಿಗಾ ವಹಿಸುವಂತೆ ಸೂಚಿಸಲಾಗಿದೆ' ಎಂದು ತಿಳಿಸಿದ್ದಾರೆ.[ಮೈಸೂರು ಮೃಗಾಲಯದಲ್ಲಿ ಮತ್ತೊಂದು ಪಕ್ಷಿ ಸಾವು]
ಜಾಗೃತಿ ಹೇಗೆ?: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1,500ರಿಂದ 2 ಸಾವಿರ ಕೋಳಿ ಸಾಕಾಣಿಕೆದಾರರಿದ್ದಾರೆ. ನಿಯಮಿತವಾಗಿ ಈ ಫಾರ್ಮ್ಗಳಲ್ಲಿ ಮಾದರಿ ಸಂಗ್ರಹಿಸಿ ತಪಾಸಣೆ ನಡೆಸಲು ಪಶು ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹಕ್ಕಿಗಳ ಅಸಹಜ ಸಾವು ಸಂಭವಿಸಿದರೆ, ಕೂಡಲೇ ಇಲಾಖೆಯ ಗಮನಕ್ಕೆ ತರುವಂತೆ ಜಿಲ್ಲೆಯಾದ್ಯಂತ ಜಾಗೃತಿ ಮೂಡಿಸಲಾಗುತ್ತಿದೆ.

ಹಕ್ಕಿ ಜ್ವರಕ್ಕೆ ಸಂಬಂಧಿಸಿದಂತೆ ಇಲಾಖೆಯು ಎಲ್ಲ ರೀತಿ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಅಗತ್ಯ ಔಷಧಿ, ಇತರ ಸಲಕರಣೆಗಳೊಂದಿಗೆ ಸನ್ನದ್ಧವಾಗಿದೆ.
ಪಿಲಿಕುಳದಲ್ಲೂ ಕಟ್ಟೆಚ್ಚರ: ಪಿಲಿಕುಳ ನಿಸರ್ಗಧಾಮದಲ್ಲಿಯೂ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ನಿಸರ್ಗಧಾಮದ ಕೆಲಸಗಾರರಿಗೂ ಹಕ್ಕಿ ಜ್ವರದ ಕುರಿತು ಮಾಹಿತಿ ನೀಡಲಾಗಿದೆ. ಸದ್ಯ ಪಿಲಿಕುಳ ನಿಸರ್ಗಧಾಮದಲ್ಲಿ 200ಕ್ಕೂ ಅಧಿಕ ಜಾತಿಯ ಹಕ್ಕಿಗಳಿವೆ. ಜತೆಗೆ ಸುಮಾರು 10 ಎಕರೆ ವಿಸ್ತಾರದ ಕೆರೆ ಇದ್ದು, ವಲಸೆ ಹಕ್ಕಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿವೆ. ಹೀಗಾಗಿ ನಿಸರ್ಗಧಾಮದಲ್ಲಿ ತೀವ್ರ ನಿಗಾ ವಹಿಸಲಾಗಿದೆ.[125 ವರ್ಷದಲ್ಲಿ ಇದೇ ಮೊದಲ ಬಾರಿಗೆ ಮೈಸೂರು ಝೂ ಕ್ಲೋಸ್..!]
20 ದಿನಗಳ ಹಿಂದೆ ಬಾತುಕೋಳಿ ಮೃತಪಟ್ಟಿದ್ದು, ಇದರ ಮಾದರಿಯನ್ನು ಪಶು ಸಂಗೋಪನಾ ಇಲಾಖೆ ಪ್ರಯೋಗಾಲಯಕ್ಕೆ ಕಳುಹಿಸಿ ಪರೀಕ್ಷಿಸಿದಾಗ ಹಕ್ಕಿಜ್ವರ ಇಲ್ಲ ಎಂಬುದು ಖಚಿತವಾಗಿದೆ. ಹೀಗಾಗಿ ಸದ್ಯಕ್ಕೆ ನಿಸರ್ಗಧಾಮದಲ್ಲಿ ಹಕ್ಕಿ ಜ್ವರದ ಸಮಸ್ಯೆ ಇಲ್ಲ. ಆದರೂ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ನಿಸರ್ಗಧಾಮದ ಅಧಿಕಾರಿ ಎಚ್.ಜಯಪ್ರಕಾಶ ಭಂಡಾರಿ 'ಒನ್ಇಂಡಿಯಾ' ಕ್ಕೆ ಮಾಹಿತಿ ನೀಡಿದ್ದಾರೆ.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications