ಕಾಡಿಗೆ ಸಾಗಿಸುವ ವೇಳೆ ಕಾಡುಕೋಣ ಸಾವು: ಪೊಲೀಸ್ ದೂರು
ಮಂಗಳೂರು, ಮೇ 6: ಮಂಗಳೂರಿನ ಹೃದಯ ಭಾಗದಲ್ಲಿ ಕಾಡುಕೋಣ ಓಡಾಟ ನಡೆಸಿ ಬಳಿಕ ಸೆರೆಯಾಗಿ ಕಾಡಿಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದೆ.
ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡುಕೋಣ ಅಸುನೀಗಿದೆ ಎಂದು ಆರೋಪಿಸಿ, ಈ ಬಗ್ಗೆ ತನಿಖೆಗೆ ಒತ್ತಾಯಿಸಿ ನಗರದ ಬರ್ಕೆ ಠಾಣೆಗೆ ಸಾಮಾಜಿಕ ಹೋರಾಟಗಾರ ಜರಾಲ್ಡ್ ಟವರ್ಸ್ ದೂರು ನೀಡಿದ್ದಾರೆ.
ಮಂಗಳವಾರ ಬೆಳಿಗ್ಗೆ ಮಂಗಳೂರು ನಗರದ ಕುದ್ರೋಳಿ, ಮಣ್ಣಗುಡ್ಡ ವ್ಯಾಪ್ತಿಯ ಜನನಿಬಿಡ ರಸ್ತೆಯಲ್ಲಿ ಈ ಕಾಡುಕೋಣ ದಿಢೀರ್ ಪ್ರತ್ಯಕ್ಷವಾಗಿ ಅಚ್ಚರಿ ಮತ್ತು ಆತಂಕ ಮೂಡಿಸಿತ್ತು.

ಜನ ಮತ್ತು ವಾಹನದ ಗದ್ದಲ ಕಂಡು ದಿಕ್ಕಾಪಾಲಾಗಿ ಓಡಾಡುತ್ತಿದ್ದ ಕಾಡಕೋಣದ ಸೆರೆಗೆ ಅರಣ್ಯ ಇಲಾಖೆ ಆಗಮಿಸಿತ್ತು. ನಂತರ ಪಿಲಿಕುಳ ವನ್ಯಜೀವಿ ಧಾಮದ ತಜ್ಞರ ತಂಡ ಆಗಮಿಸಿ ಅರಿವಳಿಕೆ ಇಂಜೆಕ್ಷನ್ ಪ್ರಯೋಗಿಸಿ ಸೆರೆ ಹಿಡಿದು ಕ್ರೇನ್ ಸಹಾಯದಿಂದ ಲಾರಿಗೇರಿಸಿ ರಕ್ಷಿತಾರಣ್ಯಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದೆ.
ಕಾಡುಕೋಣ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಸೆರೆ ಹಿಡಿಯಲು ಉಪಯೋಗಿಸಿದ ಅವೈಜ್ಞಾನಿಕ ರೀತಿ ಹಾಗೂ ಅರಿವಳಿಕೆ ಮದ್ದು ಮತ್ತು ಮೈ ಮೇಲಿನ ಗಾಯಗಳು ಕಾಡುಕೋಣ ಅಸುನೀಗಲು ಕಾರಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಜರಾಲ್ಡ್ ಟವರ್ಸ್ ಆರೋಪಿಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ












Click it and Unblock the Notifications