ಕಾಡಿಗೆ ಸಾಗಿಸುವ ವೇಳೆ ಕಾಡುಕೋಣ ಸಾವು: ಪೊಲೀಸ್ ದೂರು

ಮಂಗಳೂರು, ಮೇ 6: ಮಂಗಳೂರಿನ ಹೃದಯ ಭಾಗದಲ್ಲಿ ಕಾಡುಕೋಣ ಓಡಾಟ ನಡೆಸಿ ಬಳಿಕ ಸೆರೆಯಾಗಿ ಕಾಡಿಗೆ ಸಾಗಿಸುವ ಮಧ್ಯೆ ಸಾವನ್ನಪ್ಪಿದೆ.

ಅರಣ್ಯ ಇಲಾಖೆಯ ನಿರ್ಲಕ್ಷ್ಯದಿಂದ ಕಾಡುಕೋಣ ಅಸುನೀಗಿದೆ ಎಂದು ಆರೋಪಿಸಿ, ಈ ಬಗ್ಗೆ ತನಿಖೆಗೆ ಒತ್ತಾಯಿಸಿ ನಗರದ ಬರ್ಕೆ ಠಾಣೆಗೆ ಸಾಮಾಜಿಕ ಹೋರಾಟಗಾರ ಜರಾಲ್ಡ್ ಟವರ್ಸ್ ದೂರು ನೀಡಿದ್ದಾರೆ.

ಮಂಗಳವಾರ ಬೆಳಿಗ್ಗೆ ಮಂಗಳೂರು ನಗರದ ಕುದ್ರೋಳಿ, ಮಣ್ಣಗುಡ್ಡ ವ್ಯಾಪ್ತಿಯ ಜನನಿಬಿಡ ರಸ್ತೆಯಲ್ಲಿ ಈ ಕಾಡುಕೋಣ ದಿಢೀರ್ ಪ್ರತ್ಯಕ್ಷವಾಗಿ ಅಚ್ಚರಿ ಮತ್ತು ಆತಂಕ ಮೂಡಿಸಿತ್ತು.

Bison Death On Transported To Forest: Police Complaint

ಜನ ಮತ್ತು ವಾಹನದ ಗದ್ದಲ ಕಂಡು ದಿಕ್ಕಾಪಾಲಾಗಿ ಓಡಾಡುತ್ತಿದ್ದ ಕಾಡಕೋಣದ ಸೆರೆಗೆ ಅರಣ್ಯ ಇಲಾಖೆ ಆಗಮಿಸಿತ್ತು. ನಂತರ ಪಿಲಿಕುಳ ವನ್ಯಜೀವಿ ಧಾಮದ ತಜ್ಞರ ತಂಡ ಆಗಮಿಸಿ ಅರಿವಳಿಕೆ ಇಂಜೆಕ್ಷನ್ ಪ್ರಯೋಗಿಸಿ ಸೆರೆ ಹಿಡಿದು ಕ್ರೇನ್ ಸಹಾಯದಿಂದ ಲಾರಿಗೇರಿಸಿ ರಕ್ಷಿತಾರಣ್ಯಕ್ಕೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದೆ.

ಕಾಡುಕೋಣ ಹಿಡಿಯುವಲ್ಲಿ ಅರಣ್ಯ ಇಲಾಖೆಯವರು ಬೇಜವಾಬ್ದಾರಿತನದಿಂದ ನಡೆದುಕೊಂಡಿದೆ. ಸೆರೆ ಹಿಡಿಯಲು ಉಪಯೋಗಿಸಿದ ಅವೈಜ್ಞಾನಿಕ ರೀತಿ ಹಾಗೂ ಅರಿವಳಿಕೆ ಮದ್ದು ಮತ್ತು ಮೈ ಮೇಲಿನ ಗಾಯಗಳು ಕಾಡುಕೋಣ ಅಸುನೀಗಲು ಕಾರಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಜರಾಲ್ಡ್ ಟವರ್ಸ್ ಆರೋಪಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+