ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವಸ್ಥಾನದ ಕೊಳಕ್ಕೆ ಬಿದ್ದ ಕಾಡುಕೋಣವನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

|
Google Oneindia Kannada News

ಮಂಗಳೂರು, ಮೇ 05:ದಕ್ಷಿಣ ಕನ್ನಡ ಜಿಲ್ಲೆಯ ಕಾಡಂಚಿನಲ್ಲಿ ಕಾಡುಕೋಣಗಳ ಹಾವಳಿ ಹೆಚ್ಚಿದೆ. ಕಾಡುಕೋಣಗಳ ಹಿಂಡು ಕಾಡಂಚಿನ ಊರುಗಳಿಗೆ ನುಗ್ಗುತ್ತಿವೆ.ರಾತ್ರಿ ಹೊತ್ತಿನಲ್ಲಿ ಆ ಭಾಗದಲ್ಲಿ ಕಾಡುಕೋಣಗಳ ಓಡಾಟ ಹೆಚ್ಚಾಗಿದೆ. ಆದರೆ ಕಾಡುಕೋಣದ ಮರಿಯೊಂದು ದೇವಸ್ಥಾನದ ಕೊಳಕ್ಕೆ ಬಿದ್ದ ಘಟನೆ ಸುಳ್ಯದಲ್ಲಿ ನಡೆದಿದೆ.

ಸುಳ್ಯ ತಾಲೂಕಿನ ಗುತ್ತಿಗಾರು ಸಮೀಪದ ವಳಲಂಬೆ ಮಹಾವಿಷ್ಣು ದೇವಸ್ಥಾನದ ಬಳಿ ಇರುವ ತೆರೆದ ಕೊಳಕ್ಕೆ ಕಾಡುಕೋಣ ಆಕಸ್ಮಿಕವಾಗಿ ಬಿದ್ದಿದೆ. ಈ ವಿಚಾರ ತಿಳಿಯುತ್ತಿದ್ದಂತೆಯೇ ಗ್ರಾಮಸ್ಥರು ಕೊಳದ ಸುತ್ತ ಕಾಡುಕೋಣ ನೋಡಲು ಜಮಾಯಿಸಿದ್ದರು.

Bison falls into pond near Sullia

ಕಾಡಾನೆಗಳ ಬಳಿಕ ಸುಳ್ಯದಲ್ಲಿ ಈಗ ಕಾಡು ಕೋಣಗಳ ಹಾವಳಿಕಾಡಾನೆಗಳ ಬಳಿಕ ಸುಳ್ಯದಲ್ಲಿ ಈಗ ಕಾಡು ಕೋಣಗಳ ಹಾವಳಿ

ರಾತ್ರಿ ಹೊತ್ತಿನಲ್ಲಿ ಆ ಭಾಗದಲ್ಲಿ ಕಾಡುಕೋಣಗಳ ಹಿಂಡಿನ ಜೊತೆ ಸಾಗುವಾಗ ಆಕಸ್ಮಿಕವಾಗಿ ಕೊಳಕ್ಕೆ ಬಿದ್ದಿರಬಹುದು ಹೇಳಲಾಗಿದೆ.ಕೊಳಕ್ಕೆ ಕಾಡುಕೋಣ ಬಿದ್ದ ವಿಷಯವನ್ನು ಕೂಡಲೇ ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಕಾಡುಕೋಣವನ್ನು ಕೊಳದಿಂದ ಮೇಲೆಕ್ಕೆತ್ತಿದ್ದಾರೆ.

English summary
A Bison was found fallen in temple pond near Sullia. Forest department officials rescued the Bison.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X