ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕೆಂದು ದೇವರ ಮೊರೆ ಹೋದ ಉಡುಪಿ ಬಿಜೆಪಿ ಕಾರ್ಯಕರ್ತರು
ಉಡುಪಿ, ಮಾರ್ಚ್ 14:ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಸ್ವಪಕ್ಷೀಯರ ಧ್ವನಿ ಗಟ್ಟಿಗೊಳ್ಳುತ್ತಿದೆ. ಬಿಜೆಪಿ ಕಾರ್ಯಕರ್ತರಲ್ಲಿ ದಿನದಿಂದ ದಿನಕ್ಕೆ ಅಸಮಾಧಾನ ಹೆಚ್ಚುತ್ತಿದೆ. ಈ ಮೊದಲು ಶೋಭಾ ಗೋ ಬ್ಯಾಕ್ ಅಭಿಯಾನ ನಡೆಸಿದ್ದ ಬಿಜೆಪಿ ಕಾರ್ಯಕರ್ತರು ಈಗ ದೇವರ ಮೊರೆ ಹೋಗಿದ್ದಾರೆ.
'ಕೈ' ತಪ್ಪಿದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ:ಬಿಜೆಪಿ ಪಾಳಯದಲ್ಲಿ ಹರ್ಷ
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಬೇಕು ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರಕ್ಕೆ ಜಯಪ್ರಕಾಶ್ ಹೆಗ್ಡೆ ಅಭ್ಯರ್ಥಿಯಾಗಬೇಕು ಎಂದು ಕೃಷ್ಣಮಠದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಇಂದು ವಿಶೇಷ ಪೂಜೆ ಸಲ್ಲಿಸಲಾಯಿತು. ಜಯಪ್ರಕಾಶ್ ಹೆಗ್ಡೆ ಬೆಂಬಲಿಗರು ಮತ್ತು ಬಿಜೆಪಿ ಕಾರ್ಯಕರ್ತರು ಶ್ರೀಕೃಷ್ಣ ಮುಖ್ಯಪ್ರಾಣ ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದರು.
ಪತ್ತೆಯಾಗದ ಮೀನುಗಾರರು:ಚುನಾವಣೆ ಬಹಿಷ್ಕರಿಸಲು ತೀರ್ಮಾನ
ಹಾಲಿ ಸಂಸದೆಯ ವಿರುದ್ಧ ಆಕ್ರೋಶಗೊಂಡಿರುವ ಬಿಜೆಪಿಯ ಕಾರ್ಯಕರ್ತರು, ದೇವರ ಮೊರೆ ಹೋಗಿದ್ದು ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ನೀಡಿದ್ರೆ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾಗಲು ಅನುಕೂಲ. ಜನರ ಜೊತೆಯಿರುವ ನಾಯಕ ಜಯಪ್ರಕಾಶ್ ಹೆಗ್ಡೆಗೆ ಟಿಕೆಟ್ ಸಿಗಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶೋಭಾ ಕರಂದ್ಲಾಜೆ ಸಂಭವನೀಯ ಅಭ್ಯರ್ಥಿಯಾಗಿರುವುದರಿಂದ ಪಕ್ಷೀಯರಿಂದಲೇ ವಿರೋಧವಾಗುತ್ತಿರುವುದು ಶೋಭಾ ಕರದ್ಲಾಜೆ ಅವರಿಗೆ ನುಂಗಲಾರದ ತುತ್ತಾಗಿದೆ.
ಮೋದಿ ವಿಶ್ವವಿದ್ಯಾಲಯದಲ್ಲಿ ಶೋಭಾ ಕರಂದ್ಲಾಜೆ ಫೇಲ್!
ಪಕ್ಷದ ಟಿಕೆಟ್ ಜಯಪ್ರಕಾಶ್ ಹೆಗ್ಡೆಗೆ ನೀಡುವಂತೆ ಹೈಕಮಾಂಡ್ ಗೆ ಆಗ್ರಹಿಸಿರುವ ಬಿಜೆಪಿ ಕಾರ್ಯಕರ್ತರು, ಜನರ ಕೈಗೆ ಸಿಗದೇ ಇರುವ ಸಂಸದೆ ಶೋಭಾ ಕರದ್ಲಾಜೆ ಅವರಿಗೆ ಟಿಕೆಟ್ ನೀಡಬಾರದು ಎಂದು ಒತ್ತಾಯಿಸಿದ್ದಾರೆ.