ಕಾಸರಗೋಡಿನ ಶಿಕ್ಷಕಿಗೆ ಲೋಕಸಭಾ ಟಿಕೆಟ್: ಹೈಕಮಾಂಡ್ ಮಣೆ ಹಾಕಿದ ಈ ಮಹಿಳೆ ಯಾರು ಗೊತ್ತಾ?
ಮಂಗಳೂರು, ಮಾರ್ಚ್ 03: ಜಿದ್ದಾಜಿದ್ದಿನ ಲೋಕಸಭಾ ಕ್ಷೇತ್ರದ ಚುನಾವಣೆಗೆ ಬಿಜೆಪಿ ತನ್ನ ಮೊದಲ ಹುರಿಯಾಳುಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿಶೇಷ ಎಂಬಂತೆ ಮೊದಲ ಪಟ್ಟಿಯ ಆ ಒಂದು ಹೆಸರೇ ಸೆನ್ಸೇಷನಲ್ ಸೃಷ್ಠಿ ಮಾಡಿದೆ.
ಮಲೆಯಾಳಿಗಳ ನಾಡಿನಲ್ಲಿ ಭಾಜಪಾ ಧ್ವಜ ಹಾರಿಸಿದ ಮಹಿಳೆಯೋರ್ವರಿಗೆ ಬಿಜೆಪಿ ಲೋಕಸಭಾ ಟಿಕೆಟ್ ನೀಡಿದೆ. ಕೇರಳ ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗವಾದ ಕಾಸರಗೋಡು ಲೋಕಸಭಾ ಕ್ಷೇತ್ರದಿಂದ ಅಶ್ವಿನಿ ಎಂ.ಎಲ್ ಎನ್ನುವವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

ಬಿಜೆಪಿ ಲೋಕಸಭಾ ಸ್ಪರ್ಧಿ ಅಶ್ವಿನಿ ಎಂ.ಎಲ್ ಯಾರು ಗೊತ್ತಾ?
ಮೂಲತಃ ಬೆಂಗಳೂರಿನವರಾದ ಅಶ್ವಿನಿ ಎಂ.ಎಲ್, ಮಂಜೇಶ್ವರ ಮೂಲದ ವ್ಯಕ್ತಿಯನ್ನು ಮದುವೆಯಾಗಿ ಮಂಜೇಶ್ವರಕ್ಕೆ ಆಗಮಿಸಿದರು. ಮಂಜೇಶ್ವರ ವರ್ಕಾಡಿಯ ಖಾಸಗಿ ಶಾಲೆಯಲ್ಲಿ ಅಧ್ಯಾಪಕಿ ವೃತ್ತಿಯಲ್ಲಿ ತೊಡಗಿಸಿಕೊಂಡು ಬಳಿಕ ಮಂಜೇಶ್ವರದ ಹಿಂದುಳಿದ ಸಾಮಾಜಿಕ ಸ್ಥಿತಿಗತಿಗಳನ್ನು ಮನಗಂಡು ಸಮಾಜಸೇವೆಗೆ ಇಳಿದಿದ್ದಾರೆ.
ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯತ್ವ ಪಡೆದು ಸಾರ್ವಜನಿಕ ಜೀವನದಲ್ಲಿ ತೊಡಗಿಸಿದ ಅವರು ಮಂಜೇಶ್ವರ ತಾಲೂಕು ಪಂಚಾಯತ್ನ ಕಡಂಬಾರ್ ಡಿವಿಷನ್ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದರು. ಪಕ್ಷದ ನಿರೀಕ್ಷೆಯನ್ನು ಹುಸಿಗೊಳಿಸದ ಅಶ್ವಿನಿ ಎಂ.ಎಲ್ ಕ್ಷೇತ್ರದ ಜನರ ನಂಬಿಕೆಯನ್ನು ಗಳಿಸಿಕೊಂಡು ಮೊದಲ ಪ್ರಯತ್ನದಲ್ಲೇ ವಿಜಯ ಪತಾಕೆ ಹಾರಿಸಿ ಭರ್ಜರಿ ಜಯದೊಂದಿಗೆ ತಾಲೂಕು ಪಂಚಾಯತ್ ಜನಪ್ರತಿನಿಧಿಯಾಗಿ ಆಯ್ಕೆಯಾಗಿದ್ದಾರೆ.
ಕಮ್ಯುನಿಸ್ಟ್ ಪಕ್ಷದ ಭಧ್ರಕೋಟೆಯಲ್ಲಿ ಭಾಜಪಾ ಧ್ವಜ ಹಾರಿಸಿದ ಅಶ್ವಿನಿ ಅವರ ಪಕ್ಷ ಸಂಘಟನಾ ಚಾತುರ್ಯವನ್ನು ಗಮನಿಸಿದ ಬಿಜೆಪಿ ಮತ್ತೆ ಗುರುತಿಸಿದೆ. ಜನಪ್ರತಿನಿಧಿಯಾಗಿ ಆಯ್ಕೆಯಾದ ನಂತರವೂ ಪಕ್ಷದ ಕೆಲಸದಲ್ಲಿ ತೊಡಗಿಸಿಕೊಂಡಿರುವ ಅಶ್ವಿನಿ ಎಂ.ಎಲ್ ಸಂಘಟನಾ ಕಾರ್ಯಾ ಶೈಲಿಯನ್ನು ಕಂಡ ಪಕ್ಷದ ನೇತೃತ್ವ ಇವರಿಗೆ ಮಹಿಳಾ ಮೋರ್ಚಾ ರಾಷ್ಟ್ರೀಯ ಕಾರ್ಯಕಾರಣಿ ಸದಸ್ಯೆಯ ಜವಾಬ್ದಾರಿಯನ್ನು ಹೆಗಲಲ್ಲಿ ಇರಿಸಿದೆ. ಇದೀಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮೊದಲ ಪಟ್ಟಿಯಲ್ಲೇ ಅಶ್ವಿನಿ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ












Click it and Unblock the Notifications