Get Updates
Get notified of breaking news, exclusive insights, and must-see stories!

ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಸಿಟಿ ರವಿ ಆಗ್ರಹ

ಮಂಗಳೂರು, ಜನವರಿ 3: ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದುರ್ಷರ್ಮಿಗಳಿಂದ ಹತ್ಯೆಗೇಡಾದ ದೀಪಕ್ ರಾವ್ ಅವರ ಕುಟುಂಬಕ್ಕೆ ಪರಿಹಾರವಾಗಿ ರಾಜ್ಯ ಸರಕಾರ 25 ಲಕ್ಷ ರೂಪಾಯಿ ನೀಡಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ದುಷ್ಕರ್ಮಿಗಳ ದಾಳಿಯಲ್ಲಿ ಮೃತಪಟ್ಟ ದೀಪಕ್ ರಾವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಎ.ಜೆ.ಆಸ್ಪತ್ರೆಗ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ದೀಪಕ್ ರಾವ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

BJP leader CT Ravi demands Rs 25 lakh compensation for Deepak family

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಿರಂತರವಾಗಿ ನಡೆಯುತ್ತಿವೆ. ತರಬೇತಿ ಪಡೆದಿರುವ ದುರ್ಷರ್ಮಿಗಳಿಂದಲೇ ಈ ರೀತಿಯ ಕೊಲೆ ಮಾಡಲು ಸಾಧ್ಯ," ಎಂದು ಹೇಳಿದ ಅವರು, "ಕಾಂಗ್ರೆಸ್ ನ ಓಟ್ ಬ್ಯಾಂಕ್ ನೀತಿಯೇ ಈ ಕೊಲೆಗಳಿಗೆ ಕಾರಣವಾಗುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP leader CT Ravi demands Rs 25 lakh compensation for Deepak family

ದನಕಳ್ಳತನ ಮಾಡುತ್ತಿದ್ದ ಕಬೀರ್ ನ ಸಾವಾದಾಗ ಆತನ ಮನೆಗೆ ತೆರಳಿ ಪರಿಹಾರ ನೀಡಿದ್ದ ರಾಜ್ಯ ಸರಕಾರ ಹಿಂದೂಗಳ ನಿರಂತರ ಕೊಲೆಯಾದರೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಅವರು ಕಿಡಿಕಾರಿದರು. ದೀಪಕ್ ಹತ್ಯೆಗೆ ಕಾರಣರಾದವರನ್ನು ಶೀಘ್ರ ಬಂಧಿಸಬೇಕು ಎಂದು ಅವರು ಪೋಲೀಸ್ ಇಲಾಖೆಯನ್ನು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+