ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಸಿಟಿ ರವಿ ಆಗ್ರಹ
ಮಂಗಳೂರು, ಜನವರಿ 3: ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದುರ್ಷರ್ಮಿಗಳಿಂದ ಹತ್ಯೆಗೇಡಾದ ದೀಪಕ್ ರಾವ್ ಅವರ ಕುಟುಂಬಕ್ಕೆ ಪರಿಹಾರವಾಗಿ ರಾಜ್ಯ ಸರಕಾರ 25 ಲಕ್ಷ ರೂಪಾಯಿ ನೀಡಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ.
ದುಷ್ಕರ್ಮಿಗಳ ದಾಳಿಯಲ್ಲಿ ಮೃತಪಟ್ಟ ದೀಪಕ್ ರಾವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಎ.ಜೆ.ಆಸ್ಪತ್ರೆಗ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ದೀಪಕ್ ರಾವ್ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಿರಂತರವಾಗಿ ನಡೆಯುತ್ತಿವೆ. ತರಬೇತಿ ಪಡೆದಿರುವ ದುರ್ಷರ್ಮಿಗಳಿಂದಲೇ ಈ ರೀತಿಯ ಕೊಲೆ ಮಾಡಲು ಸಾಧ್ಯ," ಎಂದು ಹೇಳಿದ ಅವರು, "ಕಾಂಗ್ರೆಸ್ ನ ಓಟ್ ಬ್ಯಾಂಕ್ ನೀತಿಯೇ ಈ ಕೊಲೆಗಳಿಗೆ ಕಾರಣವಾಗುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

ದನಕಳ್ಳತನ ಮಾಡುತ್ತಿದ್ದ ಕಬೀರ್ ನ ಸಾವಾದಾಗ ಆತನ ಮನೆಗೆ ತೆರಳಿ ಪರಿಹಾರ ನೀಡಿದ್ದ ರಾಜ್ಯ ಸರಕಾರ ಹಿಂದೂಗಳ ನಿರಂತರ ಕೊಲೆಯಾದರೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಅವರು ಕಿಡಿಕಾರಿದರು. ದೀಪಕ್ ಹತ್ಯೆಗೆ ಕಾರಣರಾದವರನ್ನು ಶೀಘ್ರ ಬಂಧಿಸಬೇಕು ಎಂದು ಅವರು ಪೋಲೀಸ್ ಇಲಾಖೆಯನ್ನು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications