ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೀಪಕ್ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡುವಂತೆ ಸಿಟಿ ರವಿ ಆಗ್ರಹ

|
Google Oneindia Kannada News

ಮಂಗಳೂರು, ಜನವರಿ 3: ಮಂಗಳೂರು ಹೊರವಲಯದ ಸುರತ್ಕಲ್ ನ ಕಾಟಿಪಳ್ಳದಲ್ಲಿ ದುರ್ಷರ್ಮಿಗಳಿಂದ ಹತ್ಯೆಗೇಡಾದ ದೀಪಕ್ ರಾವ್ ಅವರ ಕುಟುಂಬಕ್ಕೆ ಪರಿಹಾರವಾಗಿ ರಾಜ್ಯ ಸರಕಾರ 25 ಲಕ್ಷ ರೂಪಾಯಿ ನೀಡಬೇಕೆಂದು ಬಿಜೆಪಿ ಮುಖಂಡ ಸಿ.ಟಿ.ರವಿ ಒತ್ತಾಯಿಸಿದ್ದಾರೆ.

ದೀಪಕ್ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ 4 ಶಂಕಿತರ ಬಂಧನದೀಪಕ್ ಕೊಲೆ ಪ್ರಕರಣ, ಸಿನಿಮೀಯ ರೀತಿಯಲ್ಲಿ 4 ಶಂಕಿತರ ಬಂಧನ

ದುಷ್ಕರ್ಮಿಗಳ ದಾಳಿಯಲ್ಲಿ ಮೃತಪಟ್ಟ ದೀಪಕ್ ರಾವ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ನಗರದ ಎ.ಜೆ.ಆಸ್ಪತ್ರೆಗ ತರಲಾಗಿತ್ತು. ಈ ಹಿನ್ನೆಲೆಯಲ್ಲಿ ಎ.ಜೆ. ಆಸ್ಪತ್ರೆಗೆ ಭೇಟಿ ನೀಡಿದ ಚಿಕ್ಕಮಗಳೂರು ಶಾಸಕ ಹಾಗೂ ಬಿಜೆಪಿ ಮುಖಂಡ ಸಿ.ಟಿ.ರವಿ ದೀಪಕ್ ರಾವ್ ಕುಟುಂಬಕ್ಕೆ ಸಾಂತ್ವನ ಹೇಳಿದರು.

ಮಂಗಳೂರಲ್ಲಿ ದೀಪಕ್ ಹತ್ಯೆ: ಚಿತ್ರಗಳಲ್ಲಿ ಪ್ರಕ್ಷುಬ್ಧ ಕರಾವಳಿ

BJP leader CT Ravi demands Rs 25 lakh compensation for Deepak family

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಕೊಲೆಗಳು ನಿರಂತರವಾಗಿ ನಡೆಯುತ್ತಿವೆ. ತರಬೇತಿ ಪಡೆದಿರುವ ದುರ್ಷರ್ಮಿಗಳಿಂದಲೇ ಈ ರೀತಿಯ ಕೊಲೆ ಮಾಡಲು ಸಾಧ್ಯ," ಎಂದು ಹೇಳಿದ ಅವರು, "ಕಾಂಗ್ರೆಸ್ ನ ಓಟ್ ಬ್ಯಾಂಕ್ ನೀತಿಯೇ ಈ ಕೊಲೆಗಳಿಗೆ ಕಾರಣವಾಗುತ್ತಿದೆ," ಎಂದು ಆಕ್ರೋಶ ವ್ಯಕ್ತಪಡಿಸಿದರು.

BJP leader CT Ravi demands Rs 25 lakh compensation for Deepak family

ದನಕಳ್ಳತನ ಮಾಡುತ್ತಿದ್ದ ಕಬೀರ್ ನ ಸಾವಾದಾಗ ಆತನ ಮನೆಗೆ ತೆರಳಿ ಪರಿಹಾರ ನೀಡಿದ್ದ ರಾಜ್ಯ ಸರಕಾರ ಹಿಂದೂಗಳ ನಿರಂತರ ಕೊಲೆಯಾದರೂ ಈ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಎಂದು ಅವರು ಕಿಡಿಕಾರಿದರು. ದೀಪಕ್ ಹತ್ಯೆಗೆ ಕಾರಣರಾದವರನ್ನು ಶೀಘ್ರ ಬಂಧಿಸಬೇಕು ಎಂದು ಅವರು ಪೋಲೀಸ್ ಇಲಾಖೆಯನ್ನು ಇದೇ ಸಂದರ್ಭದಲ್ಲಿ ಒತ್ತಾಯಿಸಿದರು.

English summary
BJP leader CT Ravi has urged the state government to pay Rs 25 lakh as compensation to Deepak Rao's family. Deepak Rao was murdered in Katipalla in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X