ಟಿ.ಪಿ.ರಮೇಶ್ ವಿರುದ್ಧ ಮಹಿಳಾ ಮೋರ್ಚಾದಿಂದ ಪ್ರತಿಭಟನೆ

ಮಂಗಳೂರು, ಆ.21 : ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರೇಷ್ಮೆ ಮಂಡಳಿ ಅಧ್ಯಕ್ಷ ಡಿ.ಪಿ.ರಮೇಶ್ ಅವರ ಅಸಭ್ಯ ನಡವಳಿಕೆಯನ್ನು ಖಂಡಿಸಿ ಬಿಜೆಪಿ ಮಹಿಳಾ ಮೋರ್ಚಾ ದಕ್ಷಿಣ ಕನ್ನಡ ಜಿಲ್ಲಾ ಘಟಕ ಇಂದು ಬೃಹತ್ ಪ್ರತಿಭಟನೆ ನಡೆಸಿತು.

ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ, 'ಭಾರತಿ ಶೆಟ್ಟಿ ಕಾಂಗ್ರೆಸ್ ಆಡಳಿತಕ್ಕೆ ಬಂದ ದಿನದಿಂದ ರಾಜ್ಯದಲ್ಲಿ ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ'. ಎಂದು ದೂರಿದರು.

BJP Mahila Morcha protest's against Congress leader T P Ramesh

'ಮಹಿಳಾ ಉದ್ಯೋಗಿಗಳು ಭಯದ ವಾತಾವರಣದಲ್ಲಿ ಕೆಲಸ ನಿರ್ವಹಿಸಬೇಕಾಗಿದೆ. ಭ್ರಷ್ಟಚಾರ ಮತ್ತು ಅನೈತಿಕತೆ ಮಿತಿ ಮೀರಿದೆ. ಕಾಂಗ್ರೆಸ್ ಮುಖಂಡರು ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರೊಂದಿಗೆ ಅಸಭ್ಯವಾಗಿ ವರ್ತಿಸಿರುವುದಕ್ಕೆ ಮಡಿಕೇರಿ ಪ್ರಕರಣವೇ ಸಾಕ್ಷಿ' ಎಂದರು.

'ಸ್ವಾತಂತ್ರ್ಯದಿನಾಚರಣೆ ಕಾರ್ಯಕ್ರಮದಲ್ಲಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಹಾಗೂ ಹಾಲಿ ರೇಷ್ಮೆ ಮಂಡಳಿ ಅಧ್ಯಕ್ಷ ಡಿ.ಪಿ.ರಮೆಶ್ ಅವರನ್ನು ಕೂಡಲೇ ಪಕ್ಷ ಹಾಗೂ ರೇಷ್ಮೆ ಮಡಳಿಯಿಂದ ವಜಾ ಮಾಡಬೇಕು ಇಲ್ಲದೇ ಹೋದಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ಮುಂದುವರೆಸಲಾಗುವುದು' ಎಂದು ಎಚ್ಚರಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಟಂದೂರು, ರಾಜ್ಯ ಉಪಾಧ್ಯಕ್ಷೆ ಜಿ.ಕೆ.ಸುಲೋಚನಾ ಭಟ್, ಮೋನಪ್ಪ ಭಂಡಾರಿ. ರೂಪಾ ಡಿ ಬಂಗೇರಾ ಮತ್ತಿತರ ಮಹಿಳಾ ಘಟಕದ ಪ್ರಮುಖರು ಪಾಲ್ಗೊಂಡಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+