ಸುರತ್ಕಲ್ ಟೋಲ್ ವಿವಾದ: ಕೈಲಾಗದ ಯುಟಿ ಖಾದರ್ ಟೀಕೆ ಹಾಸ್ಯಾಸ್ಪದ ಎಂದ ಶಾಸಕ ಭರತ್ ಶೆಟ್ಟಿ
ಮಂಗಳೂರು, ನವೆಂಬರ್ 17: ಸುರತ್ಕಲ್ ಟೋಲ್ ವಿಚಾರವಾಗಿ ಕಾಂಗ್ರೆಸ್-ಬಿಜೆಪಿ ನಡುವೆ ಮಾತಿನ ಸಮರ ಮುಂದುವರಿದಿದೆ. ಯುಟಿ ಖಾದರ್ ಮಾತಿಗೆ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ತಿರುಗೇಟು ನೀಡಿದ್ದು, ಅಧಿಕಾರದಲ್ಲಿದ್ದಾಗ ಟೋಲ್ ತೆರವು ಮಾಡದ ಖಾದರ್ ಈಗ ಆರೋಪ ಮಾಡುತ್ತಿರುವುದು ಹಾಸ್ಯಾಸ್ಪದ ಹೇಳಿದ್ದಾರೆ.
ಖಾದರ್ ಆರೋಪಕ್ಕೆ ಹೇಳಿಕೆ ಬಿಡುಗಡೆ ಮಾಡಿರುವ ಶಾಸಕ ಭರತ್ ಶೆಟ್ಟಿ,ಅಧಿಕಾರದಲ್ಲಿದ್ದಾಗ ಟೋಲ್ ಗೇಟ್ ತೆರವು ಮಾಡುವ ಮಾತು ನೀಡಿ ಹೋರಾಟಗಾರರ ಜೊತೆ ಭಾಗವಹಿಸಿ, ಪ್ರಚಾರ ಪಡೆದುಕೊಂಡು ಎದ್ದು ಹೋಗಿರುವ ಶಾಸಕ ಯು ಟಿ ಖಾದರ್, ಟೋಲ್ ಗೇಟ್ ತೆರವಿಗೆ ಪ್ರಕ್ರಿಯೆ ಆರಂಭಿಸಲೂ ವಿಫಲರಾಗಿ, ಇದೀಗ ನನ್ನ ವಿರುದ್ಧ ಮಾತನಾಡುತ್ತಿರುವುದು ಹಾಸ್ಯಸ್ಪದ ಎಂದು ತಿರುಗೇಟು ನೀಡಿದ್ದಾರೆ.
ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿ ಅವರೊಂದಿಗೆ ಮಾತುಕತೆ ಮಾಡಿರುವೆ ಎಂದು ಯು.ಟಿ ಖಾದರ್ ಹೇಳಿಕೊಂಡು ಬಂದಿದ್ದರು. ಆದರೆ ರಾಜ್ಯದಿಂದ ಕೇಂದ್ರದ ಹೆದ್ದಾರಿ ಇಲಾಖೆಗೆ ಕಾನೂನಾತ್ಮಕವಾಗಿ ಅಧಿಕೃತ ಪತ್ರವನ್ನು ಕಳಿಸಲು ಕೂಡ ಇವರಿಗೆ ಸಾಧ್ಯವಾಗಿರಲಿಲ್ಲ. ಇದೀಗ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವುದರಿಂದ ವೈಫಲ್ಯವನ್ನು ಮರೆಮಾಚಲು ಯತ್ನಿಸುತ್ತಿದ್ದಾರೆ . ಚುನಾವಣೆ ಹತ್ತಿರ ಬಂದಾಗ ಕಾಂಗ್ರೆಸ್ನಿಂದ ಇಂತಹ ಆರೋಪಗಳು ನಿರೀಕ್ಷಿತ ಎಂದು ಶಾಸಕ ಭರತ್ ಶೆಟ್ಟಿ ತಿಳಿಸಿದ್ದಾರೆ.

ಇರ್ಕಾನ್ ಸಂಸ್ಥೆ ಹಾಗೂ ನವಯುಗ ಖಾಸಗಿ ಸಂಸ್ಥೆಯು ಟೋಲ್ ಗೇಟ್ ಸ್ಥಾಪಿಸಲು ಅವಕಾಶ ನೀಡುವ ಸಲುವಾಗಿ 2013ರ ಮಾರ್ಚ್ನಲ್ಲಿ ಹೆಜಮಾಡಿ ಟೋಲ್ಗೇಟ್, ಜೂನ್ ನಲ್ಲಿ ಸುರತ್ಕಲ್ನಲ್ಲಿ ಟೋಲ್ ಗೇಟ್ ನಿರ್ಮಿಸಲು ಈ ಹಿಂದಿನ ಯುಪಿಎ ಸರಕಾರವೇ ರಾಜ್ಯ ಪತ್ರದಲ್ಲಿ ಅಧಿಕೃತವಾಗಿ ಪ್ರಕಟಿಸಿ ಕೊಡುಗೆ ನೀಡಿದೆ. ಅಂದೇ ಹಿಂಪಡೆಯಲು ಇದ್ದ ಅವಕಾಶವನ್ನು ಕೈ ಚೆಲ್ಲಿರುವ ಕಾಂಗ್ರೆಸ್ ರಾಜಕೀಯಕ್ಕಾಗಿ ಇದೀಗ ಲಾಭ ಪಡೆಯಲು ಮುಂದಾಗಿದೆ ಎಂದು ಭರತ್ ಶೆಟ್ಟಿ ಆರೋಪಿಸಿದ್ದಾರೆ.
ಆಗ 60 ಕಿಲೋಮೀಟರ್ ಒಳಗೆ ಟೋಲ್ ಗೇಟ್ ನಿರ್ಮಾಣ ಕಾನೂನಾತ್ಮಕವಾಗಿ ಸರಿಯಲ್ಲ ಎಂದು ಈ ಹಿಂದೆ ಆಡಳಿತ ನಡೆಸಿದ್ದ ಯುಪಿಎ ಸರಕಾರದ ಹೆದ್ದಾರಿ ಮಂತ್ರಿಗಳಿಗೆ ತಿಳಿದಿರಲಿಲ್ಲವೇ? ಈಗಿನ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸಂಸತ್ತಿನಲ್ಲಿಯೇ 60 ಕಿಲೋ ಮೀಟರ್ ವ್ಯಾಪ್ತಿಗಳಲ್ಲಿ ಒಂದು ಟೋಲ್ ಗೇಟ್ ಇರುವುದು ಸರಿಯಾದ ಕ್ರಮ ಎಂದು ಒಪ್ಪಿಕೊಂಡು ದೇಶದಾದ್ಯಂತ ಇರುವ ಟೋಲ್ ಗೇಟ್ಗಳ ವಿಲೀನಕ್ಕೆ ಮುಂದಾಗಿರುವುದನ್ನು ಶಾಸಕ ಯು ಟಿ ಖಾದರ್ ಅವರು ಮುಕ್ತ ಮನಸ್ಸಿನಿಂದ ಪ್ರಶಂಶಿಸುವ ಮನಸ್ಸು ಮಾಡಬೇಕು ಎಂದು ಸಲಹೆಯನ್ನು ನೀಡಿದ್ದಾರೆ.

ನನಗೆ ಕೇವಲ ಆಶ್ವಾಸನೆ ನೀಡಿ ಹಿಂದೆ ಹೋಗುವುದರಲ್ಲಿ ಆಸಕ್ತಿ ಇಲ್ಲ. ಗಂಭೀರವಾದ ಪ್ರಯತ್ನವನ್ನು ನಡೆಸಿ ಸಂಸದರ ಮುತುವರ್ಜಿಯಲ್ಲಿ ಟೋಲ್ ಗೇಟ್ ತೆರವುಗೊಳಿಸಲು ಯಶಸ್ವಿಯಾಗಿದ್ದೇವೆ ಎಂದು ತಿಳಿಸಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications