Mangaluru Murder: ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ: ನಾಲ್ವರ ಬಂಧನ
ಮಂಗಳೂರು, ಏಪ್ರಿಲ್. 19: ಮಂಗಳೂರಿನ ನೆಹರೂ ಮೈದಾನದ ಬಳಿಯ ಫುಟ್ಬಾಲ್ ಮೈದಾನದಲ್ಲಿ ಮಂಗಳವಾರ ಬಿಜೆಪಿ ಕಾರ್ಯಕರ್ತನ ಮೃತದೇಹ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತ ವ್ಯಕ್ತಿಯನ್ನು 45 ವರ್ಷದ ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ಜನಾರ್ದನ ಬರಿಂಜ ಎಂದು ಗುರುತಿಸಲಾಗಿದೆ. ಆತನನ್ನು ಮಂಗಳೂರಿನಲ್ಲಿ ಕೊಲೆ ಮಾಡಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಜನಾರ್ದನ ಬರಿಂಜ ನೆಹರೂ ಮೈದಾನದಲ್ಲಿ ಕುಳಿತಿದ್ದಾಗಲೇ ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಈವರೆಗೆ ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ದರೋಡೆ ಮಾಡಲು ಬಂದವರೇ ಜನಾರ್ದನ ಬರಿಂಜ ಅವರನ್ನು ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ಮೃತ ಜನಾರ್ದನ ಬರಿಂಜ ಬಂಟ್ವಾಳ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು. ವೃತ್ತಿಯಲ್ಲಿ ಚಾಲಕರಾಗಿದ್ದ ಇವರು ಮಂಗಳವಾರ ಮಧ್ಯಾಹ್ನ ಮಂಗಳೂರಿನ ನೆಹರು ಮೈದಾನದಲ್ಲಿ ಕುಳಿತಿದ್ದರು ಎನ್ನಲಾಗಿದೆ.
ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ನಾಲ್ವರು ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಡಿಸಿಪಿ ಪ್ರಕಾರ ಅವಘಡ ಸಂಭವಿಸಿದ ಸ್ಥಳ ಹಗಲಿನಲ್ಲಿ ಜನದಟ್ಟಣೆಯಿಂದ ಕೂಡಿರುತ್ತದೆ. ಆದರೂ ಹತ್ಯೆ ನಡೆದಿರುವ ಬಗ್ಗೆ ಆಶ್ಚರ್ಯ ಸೂಚಿಸಿದ್ದಾರೆ. ಇನ್ನು, ಖಜೂರಿ ಖಾಸ್ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಶಂಕಿತರನ್ನು ಗುರುತಿಸಲು ಮತ್ತು ಮತ್ತಷ್ಟು ಮಂದಿಯನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ.
ಇನ್ನೊಂದು ಘಟನೆಯಲ್ಲಿ ಮಂಗಳೂರು ನಗರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು ಮನೆ ಒಡೆದು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ರಾಜ್ಯಾದ್ಯಂತ ಸುಮಾರು 13 ಪ್ರಕರಣಗಳು ದಾಖಲಾಗಿದೆ ಎಂದು ತಿಳಿದು ಬಂದಿದೆ. ಆರೋಪಿ 2006 ರಿಂದ ತಲೆಮರೆಸಿಕೊಂಡಿದ್ದನು ಎಂದು ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಆರ್ ಜೈನ್ ತಿಳಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications