ಮಂಗಳೂರು ಹಳೆ ಬಂದರಿನಿಂದ ಲಕ್ಷದ್ವೀಪಕ್ಕೆ ಹಡಗು ಯಾನ ಆರಂಭ
ಮಂಗಳೂರು, ನವೆಂಬರ್. 22: ಮಂಗಳೂರು ಹಳೆ ಬಂದರಿನಿಂದ ಲಕ್ಷದ್ವೀಪಕ್ಕೆ ಹಡಗು ಯಾನ ಆರಂಭವಾಗಿದೆ. ಗಜ ಚಂಡಮಾರುತದ ಭೀತಿಯ ಹಿನ್ನೆಲೆಯಲ್ಲಿ ಲಕ್ಷದ್ವೀಪಕ್ಕೆ ಹಡಗು ಯಾನ ವನ್ನು ಸ್ಥಗಿತಗೊಳಿಸಲಾಗಿತ್ತು. ಇದೀಗ ಲಕ್ಷ ದ್ವೀಪಕ್ಕೆ ಮತ್ತೆ ಸರಕು ಹಾಗೂ ಪ್ಯಾಸೆಂಜರ್ ಹಡಗು ಯಾನ ಮಂಗಳೂರು ಹಳೆ ಬಂದರಿನಿಂದ ಆರಂಭಗೊಂಡಿದೆ.
ಹಡಗುಗಳಲ್ಲಿ ಪ್ರತಿದಿನ ದಿನಬಳಕೆಯ ಆಹಾರ ವಸ್ತುಗಳು, ಕಾಫಿ , ಸಾಂಬಾರು ಪದಾರ್ಥ, ಮನೆ ಹಾಗೂ ಕಟ್ಟಡ ನಿರ್ಮಾಣ ಸಾಮಗ್ರಿಗಳ ಸರಕು ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಸಾಗಾಟ ಮಾಡಲಾಗುತ್ತದೆ. ಅಷ್ಟೇ ಅಲ್ಲ ಪ್ರವಾಸಿಗರನ್ನು ಹೊತ್ತ ಪ್ಯಾಸೆಂಜರ್ ಹಡಗು ಕೂಡ ಲಕ್ಷ ದ್ವೀಪಕ್ಕೆ ತೆರಳುತ್ತದೆ.
ಕಳೆದ ಎರಡು ದಿನಗಳಿಂದ ಮಂಗಳೂರಿನ ಹಳೆ ಬಂದರಿನಿಂದ ಆರು ಸಣ್ಣ ಸರಕು ಹಡಗುಗಳು ಹಾಗೂ ಒಂದು ಪ್ಯಾಸೆಂಜರ್ ಹಡಗು ಲಕ್ಷ ದ್ವೀಪಕ್ಕೆ ಪ್ರಯಾಣ ಬೆಳೆಸಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತ ಅರಬ್ಬಿ ಸಮುದ್ರ ಕಡೆಗೆ ತಿರುಗಿದ ಹಿನ್ನೆಲೆಯಲ್ಲಿ ಮಂಗಳೂರು ಹಳೆ ಬಂದರಿನಿಂದ ಲಕ್ಷದ್ವೀಪಕ್ಕೆ ತೆರಳಬೇಕಿದ್ದ ಸರಕು ಹಾಗೂ ಪ್ರಯಾಣಿಕರ ಹಡಗುಗಳ ಸಂಚಾರ ಕಳೆದ ಒಂದು ವಾರದ ಹಿಂದೆ ಸ್ಥಗಿತಗೊಂಡಿತ್ತು.
ಹವಮಾನ ಇಲಾಖೆ ಒಪ್ಪಿಗೆ ಸೂಚಿಸಿದ ಬಳಿಕ ಮತ್ತೆ ಈಗ ಹಳೆ ಬಂದರಿನಿಂದ ಸರಕು ಹಾಗೂ ಪ್ಯಾಸೆಂಜರ್ ಹಡಗು ಲಕ್ಷದ್ವೀಪದತ್ತ ಯಾನ ಬೆಳೆಸಿದೆ.

ಲಕ್ಷದ್ವೀಪದಲ್ಲಿ ದಿನಬಳಕೆಯ ಹಾಗೂ ಗೃಹ ನಿರ್ಮಾಣ ಸಾಮಗ್ರಿಗಳ ಬೇಡಿಕೆ ಹೆಚ್ಚಾದ ಸಂದರ್ಭದಲ್ಲಿ ಕೆಲವೊಮ್ಮೆ ಮಂಗಳೂರು ಹಳೆ ಬಂದರಿನಿಂದ 10ಕ್ಕೂ ಹೆಚ್ಚು ಹಡಗುಗಳು ಲಕ್ಷದ್ವೀಪಕ್ಕೆ ತೆರಳುತ್ತವೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications