'ನಿಮಗಾದ ಸಂತೋಷ ನನಗೆ ಆಗಿದೆ': ಮುಹಮ್ಮದ್ ಕುಂಞಿ
ಮಂಗಳೂರು, ಡಿಸೆಂಬರ್, 22 : 2016ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ಸಾಹಿತಿ ಬೊಳುವಾರು ಮುಹಮ್ಮದ್ ಕುಂಞಿ ಅವರು ಒನ್ ಇಂಡಿಯಾಗೆ ಪ್ರತಿಕ್ರಿಯೆ ನೀಡಿದ್ದು ಹೀಗೆ.
ಪ್ರಶಸ್ತಿ ಸಿಕ್ಕಿದ ಬಗ್ಗೆ ನಿಮ್ಮ 'ಒನ್ ಇಂಡಿಯಾ' ಬೊಳುವಾರು ಮುಹಮ್ಮದ್ ಕುಂಞಿ ಅವರನ್ನ ಸಂಪರ್ಕಿಸಿ ಪ್ರತಿಕ್ರಿಯೆ ಕೇಳಿದಾಗ 'ನಿಮಗೆ ಎಷ್ಟು ಸಂತೋಷ ಆಗಿದೆಯೋ ಅಷ್ಟೇ ನನಗೂ ಸಂತೋಷ ಆಗಿದೆ' ಎಂದು ಸಂತಸ ವ್ಯಕ್ತಪಡಿಸಿದರು.
ಬೊಳುವಾರು ಇವರ 'ಸ್ವಾತಂತ್ರ್ಯದ ಓಟ' ಎಂಬ ದೀರ್ಘ ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ಒಂದು ಲಕ್ಷ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನ ಬರುವ ಫೆಬ್ರವರಿಯಲ್ಲಿ ನಡೆಯುವ ಪ್ರಶಸ್ತಿ ವಿತರಣಾ ಸಮಾರಂಭದಲ್ಲಿ ಬೊಳುವಾರು ರವರಿಗೆ ವಿತರಿಸಲಾಗುವುದು.[ಬೊಳುವಾರು ಮಹಮ್ಮದ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ]

1951 ರ ಅಕ್ಟೋಬರ್ 21 ರಂದು ದಕ್ಷಿಣ ಕನ್ನಡದ ಪುತ್ತೂರಿನಲ್ಲಿ ಜನಿಸಿದ ಬೊಳುವಾರು ಸಿಂಡಿಕೇಟ್ ಬ್ಯಾಂಕ್ ನಲ್ಲಿ 1972ರ ಡಿಸೆಂಬರ್ ನಿಂದ 2011ರ ಅಕ್ಟೋಬರ್ ರವರೆಗೆ ದೀರ್ಘ ಕಾಲ ಸೇವೆ ಸಲ್ಲಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ನ ಚೀಫ್ ಮ್ಯಾನೇಜರ್ ಆಗಿ ನಿವೃತ್ತಿ ಹೊಂದಿದರು. ವೃತ್ತಿಯಲ್ಲಿ ಬ್ಯಾಂಕ್ ಉದ್ಯೋಗಿಯಾಗಿದ್ದುಕೊಂಡು ಪ್ರವೃತ್ತಿ ಸಾಹಿತ್ಯದಲ್ಲಿತ್ತು. ' ತಟ್ಟು ಚಪ್ಪಾಳೆ ಪುಟ್ಟ ಮಗು', 'ಶಾಂತಮ್ಮನ್ನ', 'ಪಾಪು ಗಾಂಧಿ ಬಾಪು ಗಾಂಧಿ ಆದ ಕತೆ', 'ಒಂದು ತುಂಡು ಗೋಡೆ', 'ಓದಿರಿ' ಇವರ ಪ್ರಮುಖ ಕೃತಿಗಳಾಗಿವೆ
ಇವರ ಸಹೋದರ ಐ.ಕೆ. ಬೊಳುವಾರು ಖ್ಯಾತ ರಂಗ ಕಲಾವಿದರು. ಈಗ ಬೊಳುವಾರು ಮುಹಮ್ಮದ್ ಬೆಂಗಳೂರಲ್ಲಿ ನೆಲೆಸಿದ್ದಾರೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications