ಬಾಂಬ್ ಅನ್ನು ಸುರಕ್ಷಿತವಾಗಿ ಸ್ಫೋಟಗೊಳಿಸಿದ ಪೊಲೀಸರು
ಮಂಗಳೂರು, ಜನವರಿ 20 : ಮಂಗಳೂರಿನ ಬಜ್ಪೆಯಲ್ಲಿರುವ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯದಳದವಯಸ್ಥಳಕ್ಕೆ ಧಾವಿಸಿದ್ದಾರೆ.
ಸೋಮವಾರ ಬೆಳಗ್ಗೆ ಮಂಗಳೂರಿನ ಬಜ್ಪೆಯಲ್ಲಿರುವ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಪ್ರಯಾಣಿಕರು ಇದರಿಂದಾಗಿ ಆತಂಕಗೊಂಡಿದ್ದಾರೆ. ಪೊಲೀಸರು ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳಿಸಿದ್ದಾರೆ.
ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಪ್ರಯಾಣಿಕರಿಗೆ ಮೀಸಲಾದ ಜಾಗದಲ್ಲಿದ್ದ ಬ್ಯಾಗ್ನಲ್ಲಿ ಬಾಂಬ್ ಪತ್ತೆಯಾಗಿದೆ. ಲ್ಯಾಪ್ ಟಾಪ್ ಬ್ಯಾಗ್ನಲ್ಲಿ ಸಜೀವ ಬಾಂಗ್ ಇದ್ದು, ಬಾಂಬ್ ನಿಷ್ಕ್ರಿಯದಳ ಬ್ಯಾಗ್ ವಶಕ್ಕೆ ಪಡೆದುಕೊಂಡಿದೆ.

ಬೆಳಗ್ಗೆ ಆಟೋದಲ್ಲಿ ಬಂದ ವ್ಯಕ್ತಿ ವಿಮಾನ ನಿಲ್ದಾಣದ ಒಳಗೆ ಬ್ಯಾಗ್ ಇಟ್ಟು ಹೋಗಿದ್ದಾನೆ ಎಂದು ಶಂಕಿಸಲಾಗಿದೆ. ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆ ಬಗ್ಗೆ ಪ್ರಯಾಣಿಕರು ಪ್ರಶ್ನೆ ಮಾಡುತ್ತಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಸ್ಫೋಟ ನಡೆದ ಜಾಗವನ್ನು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಫೋಟದ ತೀವ್ರತೆ ಅಳೆಯಲು ಮತ್ತು ಮುಂದಿನ ತನಿಖೆಗೆ ನೆರವಾಗುವ ಕೆಲವು ವಸ್ತುಗಳನ್ನು ಸ್ಫೋಟ ನಡೆದ ಜಾಗದಲ್ಲಿ ಪೊಲೀಸರು ಸಂಗ್ರಹ ಮಾಡುತ್ತಿದ್ದಾರೆ.
ಬಾಂಬ್ ಅನ್ನು ಸುರಕ್ಷಿತವಾಗಿ ರಿಮೋಟ್ ತಂತ್ರಜ್ಞಾನ ಬಳಸಿ ಪೊಲೀಸರು ಸ್ಫೋಟಗೊಳಿಸಿದ್ದಾರೆ. ಹಲವು ಮರಳು ಮೂಟೆಗಳನ್ನು ಸುತ್ತಲೂ ಇಟ್ಟು ಬಾಂಬ್ ಅನ್ನು ಸ್ಫೋಟಗೊಳಿಸಿದ್ದಾರೆ. ಶಬ್ದದೊಂದಿಗೆ ಬಾಂಬ್ ಸ್ಫೋಟಗೊಂಡು ಅಲ್ಪ ಪ್ರಮಾಣದ ಬೆಂಕಿ ಕಾಣಿಸಿಕೊಂಡಿತು.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರಬಹುದಾದ ಶಂಕಿತ ವ್ಯಕ್ತಿಯ ಚಿತ್ರವನ್ನು ಪೊಲೀಸರು ಬಿಡುಗಡೆ ಮಾಡಿದ್ದಾರೆ. ಶಂಕಿತ ವ್ಯಕ್ತಿ ಮತ್ತು ಆತ ವಿಮಾನ ನಿಲ್ದಾಣಕ್ಕೆ ಬಂದ ಮತ್ತು ಹೋಗಲು ಬಳಸಿದ ಆಟೋದ ಚಿತ್ರವನ್ನೂ ಸಹ ಪೊಲೀಸರು ಬಿಡುಗಡೆ ಮಾಡಿದ್ದಾರೆ.
ವೈಯರ್ ಗಳನ್ನು ಬಳಸಿ ಬಾಂಬ್ ಅನ್ನು ದೂರದಿಂದಲೇ ಸ್ಪೋಟಗೊಳಿಸಲು ಸಿದ್ಧತೆ ನಡೆಯುತ್ತಿದೆ. ಬಾಂಬ್ ನಿಷ್ಕ್ರಿಯ ತಜ್ಞರು ವೈಯರ್ಗಳನ್ನು ಜೋಡಿಸುವ ಕಾರ್ಯ ಮಾಡುತ್ತಿದ್ದಾರೆ.
ಕೆಂಜಾರು ಮೈದಾನದ ಸುತ್ತ ಸೇರಿದ್ದ ಜನರನ್ನು ಪೊಲೀಸರು ದೂರ ಕಳಿಸಿದ್ದಾರೆ. ಬಾಂಬ್ಗಳನ್ನು ಮರಳಿನ ಚೀಲವಿರುವ ಸ್ಥಳದಲ್ಲಿ ಇಟ್ಟು ಬರಲಾಗಿದೆ.
"ಮಂಗಳೂರಿನಲ್ಲಿ ಬಾಂಬ್ ಇಟ್ಟವರು ಯಾರು? ಎಂದು ಪತ್ತೆ ಹಚ್ಚುವುದು ಕಷ್ಟವೇನಲ್ಲ. ಆ ಜಾಗದಲ್ಲಿ ಸಿಸಿಟಿವಿ ಇರುತ್ತದೆ. ದುಷ್ಕರ್ಮಿಗಳನ್ನು ಪತ್ತೆ ಹಚ್ಚಲು ಪೊಲೀಸರು ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು. 15 ದಿನ ಸಮಯ ತೆಗೆದುಕೊಂಡು ಬೇರೆ ಕಥೆ ಸೃಷ್ಟಿಸಬಾರದು. ವಾಸ್ತಾವಾಂಶವನ್ನು ಜನರ ಮುಂದಿಡಬೇಕು" ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಮಂಗಳೂರಿನಿಂದ ಹೈದರಾಬಾದ್ಗೆ ತೆರಳುತ್ತಿದ್ದ ವಿಮಾನದಲ್ಲಿ ಬಾಂಬ್ ಇದೆ ಎಂಬ ಕರೆ ಬಂದಿದೆ. ಇಂಡಿಗೋ ವಿಮಾನದಲ್ಲಿದ್ದ 126 ಪ್ರಯಾಣಿಕರನ್ನು ತಪಾಸಣೆ ನಡೆಸಲಾಗುತ್ತಿದೆ.
ಬಾಂಬ್ ನಿಷ್ಕ್ರಿಯದಳ ಯೋಧ ಗಂಗಯ್ಯ ಬಾಂಬ್ ಇರುವ ಬ್ಯಾಗ್ ಅನ್ನು ಮರಳು ಚೀಲಗಳಿಂದ ಸುತ್ತಿವರೆದಿರುವ ಸ್ಥಳಕ್ಕೆ ತೆಗೆದುಕೊಂಡು ಹೋಗಿದ್ದಾರೆ.
ಲ್ಯಾಪ್ ಟಾಪ್ ಬ್ಯಾಗ್ನಲ್ಲಿ ಸ್ಟೀಲ್ ಬಾಕ್ಸ್ನಲ್ಲಿ ಬಾಂಬ್ಗಳನ್ನು ಇಡಲಾಗಿದೆ. ಎರಡು ಸ್ಟೀಲ್ ಬಾಕ್ಸ್ ಬ್ಯಾಗ್ನಲ್ಲಿದೆ.
ಮೈದಾನದ ನಿರ್ಜನ ಪ್ರದೇಶದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲು ಸಿದ್ಧತೆ. ಆದ್ದರಿಂದ, ಕ್ರೈನ್ ತರಿಸಿದ ಪೊಲೀಸರು. ಮೈದಾನದಕ್ಕೆ ಸಾಗುವ ದಾರಿ ಇಳಿಜಾರಿನಿಂದ ಕೂಡಿದೆ. ಕ್ರೈನ್ ಮೂಲಕ ವಾಹನವನ್ನು ನಿಧಾನವಾಗಿ ಮೈದಾನಕ್ಕೆ ತೆಗೆದುಕೊಂಡು ಹೋಗಲಾಗುತ್ತದೆ.
"ಬೆಂಗಳೂರಿನ ಜನರು ಭಯ ಪಡಬೇಕಾಗಿಲ್ಲ. ವಿಮಾನ ನಿಲ್ದಾಣಕ್ಕೆ ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ ಭ್ರತೆ ಇದೆ" ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಹೇಳಿದ್ದಾರೆ.
ಗೃಹ ಸಚಿವ ಬಸವರಾಜ ಬೊಮ್ಮಾಯಿ ಬಾಂಬ್ ಪತ್ತೆಯಾದ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯೆ ನೀಡಿದ್ದು, "ಬಾಂಬ್ ಜೊತೆಗೆ ಇಂತಹ ಶಕ್ತಿಗಳನ್ನು ನಿಷ್ಕ್ರಿಯಗೊಳಿಸಬೇಕು. ಇದರ ಹಿಂದೆ ದೊಡ್ಡ ಜಾಲವಿರುವ ಶಂಕೆ ಇದೆ. ಇದರ ಹಿಂದಿರುವವರ ಪತ್ತೆಗೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ" ಎಂದು ಹೇಳಿದ್ದಾರೆ.
ಸುಧಾರಿತ ಸ್ಫೋಟಕ ಸಾಧನ (ಐಇಡಿ) ಬಳಸಿ ಬಾಂಬ್ ತಯಾರು ಮಾಡಲಾಗಿದೆ ಎಂಬ ಪ್ರಾಥಮಿಕ ಮಾಹಿತಿಯನ್ನು ಪೊಲೀಸರು ನೀಡಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ವ್ಯಕ್ತಿ ಬೆಳಗ್ಗೆ 8.45ರ ಸುಮಾರಿಗೆ ಬಾಂಬ್ ಇರುವ ಬ್ಯಾಗ್ ಇಟ್ಟಿರುವುದು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ವಿಮಾನ ನಿಲ್ದಾಣದಲ್ಲಿ ಪತ್ತೆಯಾದ ಬಾಂಬ್ನಲ್ಲಿ ಸುಮಾರು 10 ಕೆ. ಜಿ. ಸ್ಫೋಟಕಗಳನ್ನು ತುಂಬಲಾಗಿದೆ. ಒಂದು ವೇಳೆ ಸ್ಫೋಟಗೊಂಡರೆ 500 ಮೀಟರ್ ಪ್ರದೇಶದಲ್ಲಿ ಹಾನಿಯಾಗಲಿದೆ ಎಂದು ಅಂದಾಜಿಸಲಾಗಿದೆ.
ಸುಮಾರು 10 ಎಕರೆ ಪ್ರದೇಶದಲ್ಲಿರುವ ಕೆಂಜಾರು ಮೈದಾನದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಲಾಗುತ್ತದೆ.
ಕೆಂಜಾರು ಮೈದಾನಕ್ಕೆ ಬಾಂಬ್ ಅನ್ನು ತೆಗೆದುಕೊಂಡು ಹೋಗಲಾಗುತ್ತಿದೆ. ಬಾಂಬ್ ನಿಷ್ಕ್ರಿಯದಳ ಅಲ್ಲಿ ಅದನ್ನು ನಿಷ್ಕ್ರಿಯಗೊಳಿಸಲು ಪ್ರಯತ್ನ ನಡೆಸಲಿದೆ.
ಬಾಂಬ್ ನಿಷ್ಕ್ರಿಯಗೊಳಿಸುವ ವಾಹನವನ್ನು ಟ್ರಾಕ್ಟರ್ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದೆ.
ವಿಮಾನ ನಿಲ್ದಾಣದಿಂದ 12 ಕಿ. ಮೀ. ದೂರದಲ್ಲಿ ಪಣಂಬೂರು ಬೀಚ್ ಇದೆ. ಪೊಲೀಸ್ ಭದ್ರತೆಯಲ್ಲಿ ವಾಹನವನ್ನು ತೆಗೆದುಕೊಂಡು ಹೋಗಲಾಗುತ್ತಿದೆ.
ಬಾಂಬ್ ನಿಷ್ಕ್ರಿಯದಳದವರು ಪಣಂಬೂರು ಬೀಚ್ಗೆ ವಾಹನವನ್ನು ತೆಗೆದುಕೊಂಡು ಹೋಗುತ್ತಿದ್ದಾರೆ. ವಿಮಾನ ನಿಲ್ದಾಣದಲ್ಲಿ ಬಾಂಬ್ ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆ ಸಾಧ್ಯವಾಗಿಲ್ಲ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆಯಾದ ಹಿನ್ನಲೆಯಲ್ಲಿ ಬೆಂಗಳೂರು ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ ಸೂಕ್ಷ್ಮ ಪ್ರದೇಶದಲ್ಲಿ ಕಟ್ಟೆಚ್ಚರ ಘೋಷಣೆ ಮಾಡಲಾಗಿದೆ.
ವಿಮಾನ ನಿಲ್ದಾಣಕ್ಕೆ ಆಟೋದಲ್ಲಿ ಬಂದ ಇಬ್ಬರು ಬಾಂಬ್ ಇರುವ ಬ್ಯಾಗ್ ಇಟ್ಟು ಹೋಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಸಿಕ್ಕಿದೆ.
ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾದ ಬಗ್ಗೆ ಎನ್ಐಎಗೆ ಮಾಹಿತಿ ನೀಡಲಾಗಿದೆ. ಎನ್ಐಎ ಅಧಿಕಾರಿಗಳು ಪೊಲೀಸರಿಂದ ಮಾಹಿತಿ ಸಂಗ್ರಹಣೆ ಮಾಡುತ್ತಿದ್ದಾರೆ.
ಬಾಂಬ್ ನಿಷ್ಕ್ರಿಯದಳದ ಅಧಿಕಾರಿಗಳು ಬಾಂಬ್ ನಿಷ್ಕ್ರಿಯಗೊಳಿಸುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮಂಗಳೂರು ವಿಮಾನ ನಿಲ್ದಾಣದ ಭದ್ರತೆಯನ್ನು ನೋಡಿಕೊಳ್ಳುತ್ತದೆ. ಸ್ಥಳೀಯ ಪೊಲೀಸರು, ಶ್ವಾನದಳದವರು ಸಹ ಇರುತ್ತಾರೆ. ಆದರೆ, ವ್ಯಕ್ತಿಯೊಬ್ಬ ನಿಲ್ದಾಣ ಪ್ರವೇಶಿಸಿ ಬ್ಯಾಗ್ ಇಟ್ಟು ಹೋಗಿದ್ದು ಹೇಗೆ? ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತ ಪಿ. ಎಸ್. ಹರ್ಷಾ ಈ ಕುರಿತು ಮಾಹಿತಿ ನೀಡಿದ್ದು, "ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಪತ್ತೆಯಾಗಿದೆ. ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಕಳಿಸಲಾಗಿದೆ. ಬ್ಯಾಗ್ ವಶಕ್ಕೆ ಪಡೆಯಲಾಗಿದೆ. ಪರಿಸ್ಥಿತಿ ಶಾಂತವಾಗಿದೆ" ಎಂದು ಹೇಳಿದರು.
ಕೆಲವು ದಿನಗಳ ಹಿಂದೆ ಮಂಗಳೂರಿನಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಭಾರಿ ಪ್ರತಿಭಟನೆ ನಡೆದಿತ್ತು.ಈ ವೇಳೆ ಹಿಂಸಾಚಾರ ನಡೆದು ಪೊಲೀಸರು ಗೋಲಿಬಾರ್ನಲ್ಲಿ ಇಬ್ಬರು ಮೃತಪಟ್ಟಿದ್ದರು.
READ MORE
More From
-
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ಮಾರ್ಚ್ 10ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅಕ್ಷಯ ತೃತೀಯ 2026: ಏಪ್ರಿಲ್ 19ಕ್ಕೆ ಚಿನ್ನದಂತಹ ಹಬ್ಬ; ಶುಭ ಮುಹೂರ್ತ, ಪೂಜಾ ವಿಧಿವಿಧಾನ, ವಿವರ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
ಪ್ರವಾಸೋದ್ಯಮ ಇಲಾಖೆಯಿಂದ ಎಸ್ಸಿ,ಎಸ್ಟಿ ಅಭ್ಯರ್ಥಿಗಳಿಗೆ ಆತಿಥ್ಯ ಕ್ಷೇತ್ರದಲ್ಲಿ ಉಚಿತ ಕೌಶಲ್ಯಾಭಿವೃದ್ಧಿ ತರಬೇತಿ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications