ಮಂಗಳೂರಿಗೆ ಬಾಂಬರ್ ಆದಿತ್ಯ ರಾವ್: ವಿವರವಾದ ವಿಚಾರಣೆಗೆ ಪೊಲೀಸ್ ಸಜ್ಜು
ಮಂಗಳೂರು, ಜನವರಿ 22: ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಆರೋಪಿ ಆದಿತ್ಯ ರಾವ್ ಇಂದು ಬೆಂಗಳೂರಿನಲ್ಲಿ ಶರಣಾಗಿದ್ದು ಆತನನ್ನು ಮಂಗಳೂರು ಪೊಲೀಸರು ಒಂದನೇ ಎಸಿಎಂಎಂ ನ್ಯಾಯಾಲಯದ ಅನುಮತಿ ಮೇರೆಗೆ ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದಲ್ಲಿ ಕರೆದುಕೊಂಡು ಬಂದರು.
ರಾತ್ರಿ 9 ರ ಸುಮಾರಿಗೆ ಆದಿತ್ಯ ರಾವ್ ಇದ್ದ ಸ್ಪೈಸ್ ಜೆಟ್ ವಿಮಾನ ಮಂಗಳೂರು ವಿಮಾನ ನಿಲ್ದಾಣ ತಲುಪಿತು. ಆದಿತ್ಯ ರಾವ್ ಅನ್ನು ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಪಣಂಬೂರು ಎಸಿಪಿ ಕಚೇರಿಗೆ ಕರೆತರಲಾಯಿತು.
ಇಂದು ರಾತ್ರಿ ಎಸಿಪಿ ಕಚೇರಿಯಲ್ಲೇ ಆದಿತ್ಯರಾವ್ ಇರಲಿದ್ದಾನೆ. ಅಲ್ಲಿಯೇ ಆತನನ್ನು ವಿಚಾರಣೆ ನಡೆಸಲು ಮಂಗಳೂರು ಪೊಲೀಸರು ಸಜ್ಜಾಗಿದ್ದಾರೆ.

ಆದಿತ್ಯ ರಾವ್ ಮಂಗಳೂರಿಗೆ ತಲುಪಿದ ನಂತರ ಮಾಧ್ಯಮಗಳೊಟ್ಟಿಗೆ ಮಾತನಾಡಿದ ಜಿಲ್ಲಾ ಪೊಲೀಸ್ ಆಯುಕ್ತ ಹರ್ಷ, 'ಆರೋಪಿ ಆದಿತ್ಯ ರಾವ್ ಅನ್ನು ಸವಿವರ ವಿಚಾರಣೆಗೆ ಒಳಪಡಿಸಲಾಗುವುದು' ಎಂದಿದ್ದಾರೆ.
'ಪ್ರಕರಣ ಸಂಬಂಧ ಈಗಾಗಲೇ ಹಲವು ಸಾಕ್ಷ್ಯಗಳನ್ನು ಕಲೆಹಾಕಿದ್ದೇವೆ, ಅವುಗಳ ಆಧಾರದಲ್ಲಿ ವಿಚಾರಣೆ ನಡೆಸಲಿದ್ದೇವೆ, ನಾಳೆ (ಗುರುವಾರ) ಮಧ್ಯಾಹ್ನ 1 ಗಂಟೆ ಒಳಗೆ ಇಲ್ಲಿನ ಸ್ಥಳೀಯ ಕೊರ್ಟ್ ಮುಂದೆ ಹಾಜರುಪಡಿಸಲಿದ್ದೇವೆ' ಎಂದು ಹರ್ಷ ಹೇಳಿದರು.
'ಇಂದಿನ ವಿಚಾರಣೆಯಲ್ಲಿ ಹೆಚ್ಚಿನ ವಿಷಯಗಳು ಗೊತ್ತಾದರೆ ಮಾಹಿತಿ ನೀಡುತ್ತೇವೆ' ಎಂದ ಅವರು ಗುರುವಾರ ಬೆಳಿಗ್ಗೆ 11 ಗಂಟೆಗೆ ಆಯುಕ್ತರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸುವುದಾಗಿ ಹೇಳಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ












Click it and Unblock the Notifications