ಮಂಗಳೂರಿನಲ್ಲಿ ಲಿಫ್ಟ್ ಬಾಗಿಲಿಗೆ ಸಿಲುಕಿ 8 ವರ್ಷದ ಬಾಲಕ ಸಾವು
ಮಂಗಳೂರು, ಮಾರ್ಚ್ 28:ಬಾಲಕನೋರ್ವ ಲಿಫ್ಟ್ ನ ಬಾಗಿಲಿಗೆ ಸಿಲುಕಿ ಮೃತಪಟ್ಟ ಘಟನೆ ನಗರದ ಚಿಲಿಂಬಿ ಎಂಬಲ್ಲಿ ಸಂಭವಿಸಿದೆ.ಇಲ್ಲಿಗೆ ಸಮೀಪದ ಭಾರತೀ ಹೈಟ್ಸ್ ವಸತಿ ಸಮುಚ್ಚಯದಲ್ಲಿ ಈ ಘಟನೆ ನಡೆದಿದ್ದು, ವಸತಿ ಸಮುಚ್ಚಯದ ಲಿಫ್ಟ್ನಲ್ಲಿ ಸಿಲುಕಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ.
ಮೃತಪಟ್ಟ ಬಾಲಕನನ್ನು ಭಾರತೀ ಹೈಟ್ಸ್ ವಸತಿ ಸಮುಚ್ಚಯದ ಸೆಕ್ಯೂರಿಟಿ ಗಾರ್ಡ್ನ ಮಗ ಮಂಜುನಾಥ್ ಎಂದು ಗುರುತಿಸಲಾಗಿದೆ. ಬಾಲಕ ಮಂಜುನಾಥ್ ನಿನ್ನೆ (ಮಾ.28) ಮಧ್ಯಾಹ್ನ ಲಿಫ್ಟ್ ಓಪನ್ ಆದಾಗ ಅದರೊಳಗೆ ಹೋಗಿದ್ದಾನೆ. ಒಳ ಹೋಗುವ ಸಂದರ್ಭ ಏಕಾಏಕಿ ಲಿಫ್ಟ್ ಚಾಲನೆ ಆಗಿರುವುದೇ ಈ ದುರ್ಘಟನೆಗೆ ಕಾರಣ ಎಂದು ಹೇಳಲಾಗಿದೆ.
ಆದರೆ ಈ ವಸತಿ ಸಮುಚ್ಚಯದ ಲಿಫ್ಟ್ ಹೇಗೆ ಚಾಲನೆ ಆಯಿತು ಎಂಬ ಬಗ್ಗೆ ಯಾರಿಗೂ ಸ್ಪಷ್ಟ ಮಾಹಿತಿ ಇಲ್ಲ. ಈ ಕುರಿತು ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸೆಕ್ಯೂರಿಟಿ ಗಾರ್ಡ್ ಮಂಜುನಾಥ್ ಮೂಲತಃ ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ನಿವಾಸಿ ಎಂದು ತಿಳಿದು ಬಂದಿದೆ.
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications