ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ಸಂಭ್ರಮ
ಮಂಗಳೂರು, ಮಾರ್ಚ್ 13:ತುಳುನಾಡಿನ ಶಕ್ತಿ ಪೀಠಗಳಲ್ಲಿ ಒಂದಾಗಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಇಂದು ಬ್ರಹ್ಮಕಲಶೋತ್ಸವದ ಸಂಭ್ರಮ. ಮುಂಜಾನೆಯಿಂದಲೇ ಮಂಗಳೂರು ಹೊರವಲಯದ ಪೊಳಲಿ ದೇವಾಲಯದಲ್ಲಿ ಬ್ರಹ್ಮಕಲಶಾಭಿಷೇಕ ನಡೆಯುತ್ತಿದೆ.
ಈ ಸಂಭ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದಾರೆ. ಮುಂಜಾನೆಯಿಂದಲೇ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವದ ವೈದಿಕ ವಿಧಿ ವಿಧಾನಗಳು ಆರಂಭವಾಗಿವೆ. ವೈಧಿಕ ವಿಧಿ ವಿಧಾನಗಳು ನಡೆಯುತ್ತಿರುವುದರಿಂದ ಬೆಳಗ್ಗೆ 10 ಗಂಟೆಯವರೆಗೆ ಭಕ್ತರಿಗೆ ದೇಗುಲ ಪ್ರವೇಶಾವಕಾಶ ನೀಡಲಾಗಿರಲಿಲ್ಲ. ಸಂಜೆ 5.30ರಿಂದ 8.30ರ ತನಕವೂ ಭಕ್ತರ ದೇಗುಲ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ.
ಪೊಳಲಿ ರಾಜರಾಜೇಶ್ವರಿ ದೇವಾಲಯದ ಧ್ವಜಸ್ತಂಭ ಪ್ರತಿಷ್ಠೆ ವೇಳೆ ಪವಾಡ!
ಇಂದು ಬುಧವಾರ ಬೆಳಗ್ಗೆ ಮೀನ ಲಗ್ನ ಸುಮುಹೂರ್ತದಲ್ಲಿ ಬ್ರಹ್ಮಕಲಶಾಭಿಷೇಕ. ಮಹಾಪೂಜೆ, ಮಧ್ಯಾಹ್ನ 12 ಗಂಟೆಗೆ ಪಲ್ಲಪೂಜೆ, ಬ್ರಾಹ್ಮಣ ಸುವಾಸಿನಿ ಆರಾಧನೆ ನಡೆಯಿತು. ಬ್ರಹ್ಮಕಲಶೋತ್ಸವದ ಪವಿತ್ರ ಅನ್ನಪ್ರಸಾದ ವಿತರಣೆ ಕೂಡ ನಡೆಯಲಿದೆ.
ಶಿವರಾತ್ರಿಯಂದೇ ಪುತ್ತೂರು ಮಹಾಲಿಂಗೇಶ್ವರ ದೇವಾಲಯದಲ್ಲಿ ಭಾರೀ ಅಪಚಾರ
ಕ್ಷೇತ್ರದ ತಂತ್ರಿಗಳಾದ ವೇ ಮೂ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ಪೊಳಲಿ ರಾಜರಾಜೇಶ್ವರಿ ದೇವಿಗೆ 501 ಕಲಶಾಭಿಷೇಕ, ದುರ್ಗಾಪರಮೇಶ್ವರಿ ದೇವಿಗೆ 501 ಕಲಶಾಭಿಷೇಕ ಹಾಗೂ ಪರಿವಾರ ದೇವರುಗಳಿಗೆ 108 ಕಲಶಗಳ ಅಭಿಷೇಕ ನಡೆಯಲಿದೆ. ಭಕ್ತರಿಗೆ ನಿರಂತರ ಊಟೋಪಚಾರದ ವ್ಯವಸ್ಥೆ ಇದೆ.
ಇಂದು ರಾತ್ರಿ ಶ್ರೀ ಕ್ಷೇತ್ರದಲ್ಲಿ ಶ್ರೀ ಕೊಡಮಣಿತ್ತಾಯ ಮತ್ತು ಅರ್ಕುಳ ಶ್ರೀ ಉಳ್ಳಾಕ್ಲು ದೈವಗಳ ನೇಮ ನಡೆಯಲಿದೆ. ಜತೆಗೆ ಅರ್ಧ ಶತಮಾನಕ್ಕೂ ಅಧಿಕ ಕಾಲದ ಬಳಿಕ ಇದೇ ಮೊದಲ ಬಾರಿಗೆ ನಡೆಯುವ ಮಗೃಂತಾಯಿ ದೈವದ ನೇಮವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ.