ಮಂಗಳೂರು : ಬಂಟ್ಸ್ ಹಾಸ್ಟೆಲ್ ವೃತ್ತ ಲೋಕಾರ್ಪಣೆ
ಮಂಗಳೂರು, ಮೇ 12 : ಬಂಟರ ಯಾನೆ ನಾಡವರ ಮಾತೃ ಸಂಘದ ಶತಮಾನೋತ್ಸವ ಆರಂಭದ ಅಂಗವಾಗಿ ಪುನರ್ ನಿರ್ಮಾಣಗೊಂಡಿರುವ ಬಂಟ್ಸ್ ಹಾಸ್ಟೆಲ್ ನೂತನ ವೃತವನ್ನು ಮಂಗಳೂರು ಮಹಾನಗರ ಪಾಲಿಕೆಗೆ ಹಸ್ತಾಂತರಿಸಲಾಗಿದೆ. ರಸ್ತೆಯ ಕಾಂಕ್ರೀಟ್ ಕಾಮಗಾರಿ ಸಂದರ್ಭದಲ್ಲಿ ವೃತ್ತವನ್ನು ತೆಗೆಯಲಾಗಿತ್ತು. ಸದ್ಯ ಅದನ್ನು ಪುನರ್ ಪ್ರತಿಷ್ಠಾಪಿಸಿ ಪಾಲಿಕೆಗೆ ನೀಡಲಾಗಿದೆ.
ನಗರಾಭಿವೃದ್ಧಿ ಸಚಿವ ವಿನಯ ಕುಮಾರ್ ಸೊರಕೆಯವರು ನೂತನ ವೃತ್ತದಲ್ಲಿ ರಾಷ್ಟ್ರಧ್ವಜಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ವೃತ್ತವನ್ನು ಉದ್ಘಾಟಿಸಿದರು. ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ಮಾಲಾಡಿ ಅವರು ಎಲೆ ಅಡಕೆಯನ್ನು ಮೇಯರ್ ಮಹಾಬಲ ಮಾರ್ಲ ಅವರಿಗೆ ನೀಡುವ ಮೂಲಕ ವೃತ್ತವನ್ನು ಮಂಗಳೂರು ಪಾಲಿಕೆಗೆ ಹಸ್ತಾಂತರಿಸಿದರು.

ನೂರು ವರ್ಷದ ಹಿಂದೆ ನಿರ್ಮಾಣ ಮಾಡಿದ ಬಂಟ್ಸ್ ಹಾಸ್ಟೆಲ್ ವೃತ್ತವು ಜೀರ್ಣಾವಸ್ಥೆಯಲ್ಲಿದ್ದ ಕಾರಣ ಇಪ್ಪತ್ತು ವರ್ಷಗಳ ಹಿಂದೆ ಬಂಟರ ಮಾತೃಸಂಘವು ಈ ವೃತ್ತವನ್ನು ಪುನರ್ ನಿರ್ಮಾಣ ಮಾಡಿತ್ತು. ಆದರೆ, ರಸ್ತೆಯ ಕಾಂಕ್ರಿಟೀಕರಣ ಸಂದರ್ಭ ಈ ವೃತ್ತವನ್ನು ತೆಗೆಯಲಾಗಿತ್ತು. ಸದ್ಯ ವೃತ್ತವನ್ನು ಪುನರ್ ನಿರ್ಮಾಣ ಮಾಡಲಾಗಿದೆ.
ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಸಂಸದ ನಳಿನ್ ಕುಮಾರ್ ಕಟೀಲ್ , ಶಾಸಕರಾದ ಜೆ. ಆರ್. ಲೋಬೋ, ಶಕುಂತಳಾ ಶೆಟ್ಟಿ, ವಿಧಾನ ಪರಿಷತ್ ಸದಸ್ಯ ಮೋನಪ್ಪ ಭಂಡಾರಿ, ಜಿಲ್ಲಾಧಿಕಾರಿ ಎ. ಬಿ. ಇಬ್ರಾಹಿಂ ಮುಂತಾದವರು ಪಾಲ್ಗೊಂಡಿದ್ದರು.
ಬಂಟರ ಯಾನೆ ನಾಡವರ ಮಾತೃ ಸಂಘದ ಪರವಾಗಿ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಮೇಘನಾಥ ಶೆಟ್ಟಿ, ಕೋಶಾಧಿಕಾರಿ ಸಿಎ. ಕೆ. ಮನಮೋಹನ ಶೆಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾದ ಕಷ್ಣಪ್ರಸಾದ್ ರೈ, ಜಗನ್ನಾಥ ಶೆಟ್ಟಿ ಬಾಳ, ಜಯರಾಮ ಸಾಂತ, ಉಮೇಶ್ ರೈ ಮುಂತಾದವರು ಉಪಸ್ಥಿತರಿದ್ದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications