ಮಂಗಳೂರು : ಅ.25ರಿಂದ ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ
ಮಂಗಳೂರು, ಅ.22 : ಬಂಟ್ಸ್ ಹಾಸ್ಟೆಲ್ ಓಂಕಾರ ನಗರದಲ್ಲಿ ಶ್ರೀ ಸಿದ್ಧಿ ವಿನಾಯಕ ಪ್ರತಿಷ್ಠಾನದಿಂದ ನಡೆಯುವ 14ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಗಸ್ಟ್ 25 ರಿಂದ 27ರ ತನಕ ನಡೆಯಲಿದೆ.
ಪ್ರತಿಷ್ಠಾನದ ಟ್ರಸ್ಟಿ ಡಾ.ಆಶಾ ಜ್ಯೋತಿ ರೈ ಬಂಬ್ರಾಣ ಮಂಗಳವಾರ ಈ ಕುರಿತು ಮಾಹಿತಿ ನೀಡಿದರು. 'ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ತಾಲೂಕು ಸಮಿತಿ, ತಾಲೂಕು ಬಂಟರ ಸಂಘ ಮಂಗಳೂರು ಇದರ ಪ್ರಾಯೋಜಕತ್ವದಲ್ಲಿ ದ.ಕ, ಉಡುಪಿ, ಕಾಸರಗೋಡು ಜಿಲ್ಲೆಗಳ ಬಂಟರ ಸಂಘಗಳ, ಇತರ ಸಂಘ ಸಂಸ್ಥೆಗಳ ಹಾಗೂ ಜಾತಿ ಮತ ಭಾಂಧವರ ಸಹಕಾರದೊಂದಿಗೆ ಈ ಕಾರ್ಯಕ್ರಮ ನಡೆಯಲಿದೆ' ಎಂದರು.

ಆ. 24 ರಂದು ಸಂಜೆ 5 ಗಂಟೆಗೆ ಶರವು ಮಹಾಗಣಪತಿ ದೇವಸ್ಥಾನದ ಬಳಿ ಇರುವ ರಾಧಕೃಷ್ಣ ಮಂದಿರದಿಂದ ಗಣಪತಿ ವಿಗ್ರಹವನ್ನು ಮೆರವಣಿಗೆಯ ಮೂಲಕ ಬಂಟ್ಸ್ ಹಾಸ್ಟೆಲ್ ನಲ್ಲಿರುವ ಓಂಕಾರನಗರಕ್ಕೆ ತರಲಾಗುವುದು. ಆ. 25 ರಂದು ಬೆಳಗ್ಗೆ 8.45 ಕ್ಕೆ ಸಾಮೂಹಿಕ ಪ್ರಾರ್ಥನೆ, 9.15 ಕ್ಕೆ ಧ್ವಜಾರೋಹಣ, 9.30 ಕ್ಕೆ ಗಣೇಶೋತ್ಸವ ಕಾರ್ಯಕ್ರಮಗಳ ಉದ್ಘಾಟನೆ ನಡೆಯಲಿದೆ.
ಬೆಳಗ್ಗೆ 9.40 ಕ್ಕೆ ತೆನೆಹಬ್ಬ, 9.45 ಕ್ಕೆ ಮೂರ್ತಿ ಪ್ರತಿಷ್ಠೆ, ಗಣಹೋಮ, 10.30 ರಿಂದ ಭಜನಾ ಸೇವೆ ನಡೆಯಲಿದೆ. ಮಧ್ಯಾಹ್ನ 12 ಗಂಟೆಗೆ ಮಹಾಪೂಜೆ, ಅಪರಾಹ್ನ 3 ರಿಂದ "ಶಿವಭಕ್ತ ಮಾರ್ಕಂಡೇಯ" ಹರಿಕಥಾ ಭಾಗವತವು ಹರಿದಾಸ್ ಶರತ್ ಶೆಟ್ಟಿ ಪಡುಪಳ್ಳಿ ಇವರಿಂದ ನಡೆಯಲಿದೆ. ಸಾಯಂಕಾಲ 5 ರಿಂದ 7 ರತನಕ ಧಾರ್ಮಿಕ ಸಭೆ, 7.30 ರಿಂದ ರಂಗಪೂಜೆ , ಹೂವಿನ ಪೂಜೆ, ಪ್ರಸಾದ ವಿತರಣೆ, ನಂತರ ಮೂಡಬಿದ್ರೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.
ಆ. 26 ರಂದು ಬೆಳಗ್ಗೆ 9ಕ್ಕೆ ದುರ್ಗಾದಾಸ್ ಶೆಟ್ಟಿ ತಂಡದಿಂದ ಭಕ್ತಿಗಾನ ಸುಧೆ, ನಂತರ ಭಜನೆ 11 ಗಂಟೆಗೆ ದೇವರಿಗೆ ಮೂಡಪ್ಪ ಸೇವೆ ನಡೆಯಲಿದೆ. 12 ಗಂಟೆಗೆ ಮಹಾಪೂಜೆ ನಡೆದು ಪ್ರಸಾದ ವಿತರಣೆ 3 ಗಂಟೆಡಗೆ ರಾಮಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.
ಸಂಜೆ 4 ಗಂಟೆಗೆ ಸಹಸ್ರ ನಾರಿಕೇಲ ಮಹಾಗಣಯಾಗದ ಅಂಗವಾಗಿ ಋತ್ವಿಜರಿಂದ ಯಾಗಶಾಲ ಪ್ರವೇಶ, ಗಣಪತಿ ಪೂಜೆ, ಪುಣ್ಯಾಹ, ಭೂಶುದ್ದಿ, ವಾಸ್ತುರಕ್ಷೋಘ್ನ ಹವನ, ಕಲಶ ಸ್ಥಾಪನೆ, ಅರಣಿ ಮಥನ ನಡೆಯಲಿದೆ . 7.30 ರಿಂದ ರಂಗ ಪೂಜೆ ನಡೆದು ಅಜಯ್ ವಾರಿಯರ್ ತಂಡದ ಭಕ್ತಿ ಸಿಂಚನ ಕಾರ್ಯಕ್ರಮ ನಡೆಯಲಿದೆ. ಆ. 27 ರಂದು 8.30 ರಿಂದ ಅಷ್ಟೋತ್ತರ ಸಹಸ್ರ ನಾರಿಕೇಲ ಮಹಾಗಣಯಾಗ 12. 30ಕ್ಕೆ ಅನ್ನ ಸಂತರ್ಪಣೆ, 1 ಗಂಟೆಗೆ ಬಂಟರ ಯಾನೆ ನಾಡವರ ಮಾತೃ ಸಂಘದ ಮಹಿಳಾ ಭಜನಾ ಮಂಡಳಿಯ ವತಿಯಿಂದ ಭಜನಾಸೇವೆ ನಡೆಯಲಿದೆ.
ಅಪರಾಹ್ನ 3.30ಕ್ಕೆ ವಿಸರ್ಜ ಪೂರ್ವ ಪೂಜೆ ನಡೆದು ಭಜನಾ ತಂಡಗಳ ಸಂಕೀರ್ತನೆಯೊಂದಿಗೆ ಶೋಭಯಾತ್ರೆಯು ಓಂಕಾರನಗರದಿಂದ ಬಂಟ್ಸ್ ಹಾಸ್ಟೆಲ್ ವೃತ್ತ, ಪಿ ವಿ ಎಸ್, ಡೊಂಗರಕೇರಿ, ನ್ಯೂಚಿತ್ರ ಟಾಕೀಸ್, ರಥಬೀದಿ, ಶ್ರೀ ವೆಂಕಟರಮಣ ದೇವಸ್ಥಾನವಾಗಿ ಮೂಲಕ ಸಾಗಲಿದ್ದು, ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ದೇವರ ವಿಗ್ರಹವನ್ನು ವಿಸರ್ಜಿಸಲಾಗುತ್ತದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications