ಮಂಗಳೂರು: ಬಂಟಸಿರಿ ಕಲಾ ವೈಭವಕ್ಕೆ ಸಿದ್ಧತೆ

ಮಂಗಳೂರು ಫೆ. 6: ಸಾಮಾಜಿಕ ಕಳಕಳಿಯಿಂದ ಸಂಘಟಿತವಾಗಿರುವ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಫೆ. 7ರಂದು ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆ ಹಿನ್ನೆಲೆಯಲ್ಲಿ ಬಂಟಸಿರಿ ಕಲಾವೈಭವ ಕಾರ್ಯಕ್ರಮ ಸಹ ನಡೆಯಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸದಾನಂದ ಶೆಟ್ಟಿ, ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 9ರಿಂದ ಸಂಜೆ 9.30ರವರೆಗೆ ಬಂಟಸಿರಿ ಕಲಾವೈಭವ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ನಾಡೋಜ ಕೈಯ್ಯಾರ ಕಿಂಞಣ್ಣ ರೈಯವರಿಗೆ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.[ಬೇಸಿಗೆಯಲ್ಲಿ ಮಂಗಳೂರು ನಗರಕ್ಕೆ ನೀರಿನ ಕೊರತೆ ಇಲ್ಲ]

mangaluru

ಇದೇ ವೇಳೆ ಮಾತನಾಡಿದ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳಾದ ಭಾಸ್ಕರ್ ರೈ ಕುಕ್ಕುವಳ್ಳಿ, ಪ್ರದೀಪ್ ಆಳ್ವ, ಕದ್ರಿ ನವನೀತ್ ಶೆಟ್ಟಿ, ಬಂಟಸಿರಿ ಕಲಾವೈಭವದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಿದರು.[ಮಂಗಳೂರು : ಕಟೀಲಿನ ಚಿನ್ನದ ರಥ ನೋಡಿದ್ದಿರಾ?]

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಚಿತ್ತರಂಜನ್ ರೈ, ರಾಜಗೋಪಾಲ್ ರೈ, ದೇವಿಚರಣ್ ಶೆಟ್ಟಿ, ವಸಂತ್ ಕುಮಾರ್ ಶೆಟ್ಟಿ, ಭಾಸ್ಕರ ಅರಸ್, ಇನ್ನಿತರರು ಉಪಸ್ಥಿತರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+