ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು: ಬಂಟಸಿರಿ ಕಲಾ ವೈಭವಕ್ಕೆ ಸಿದ್ಧತೆ

|
Google Oneindia Kannada News

ಮಂಗಳೂರು ಫೆ. 6: ಸಾಮಾಜಿಕ ಕಳಕಳಿಯಿಂದ ಸಂಘಟಿತವಾಗಿರುವ ಇಂಟರ್ ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ಫೆ. 7ರಂದು ಉದ್ಘಾಟನೆಗೊಳ್ಳಲಿದೆ. ಉದ್ಘಾಟನೆ ಹಿನ್ನೆಲೆಯಲ್ಲಿ ಬಂಟಸಿರಿ ಕಲಾವೈಭವ ಕಾರ್ಯಕ್ರಮ ಸಹ ನಡೆಯಲಿದೆ.

ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಅಧ್ಯಕ್ಷ ಎ. ಸದಾನಂದ ಶೆಟ್ಟಿ ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಸದಾನಂದ ಶೆಟ್ಟಿ, ಉದ್ಘಾಟನಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗ್ಗೆ 9ರಿಂದ ಸಂಜೆ 9.30ರವರೆಗೆ ಬಂಟಸಿರಿ ಕಲಾವೈಭವ ಕಾರ್ಯಕ್ರಮವನ್ನೂ ಆಯೋಜಿಸಲಾಗಿದೆ. ನಾಡೋಜ ಕೈಯ್ಯಾರ ಕಿಂಞಣ್ಣ ರೈಯವರಿಗೆ ನುಡಿನಮನ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.[ಬೇಸಿಗೆಯಲ್ಲಿ ಮಂಗಳೂರು ನಗರಕ್ಕೆ ನೀರಿನ ಕೊರತೆ ಇಲ್ಲ]

mangaluru

ಇದೇ ವೇಳೆ ಮಾತನಾಡಿದ ಇಂಟರ್ನ್ಯಾಷನಲ್ ಬಂಟ್ಸ್ ವೆಲ್ಫೇರ್ ಟ್ರಸ್ಟ್ ನ ಪದಾಧಿಕಾರಿಗಳಾದ ಭಾಸ್ಕರ್ ರೈ ಕುಕ್ಕುವಳ್ಳಿ, ಪ್ರದೀಪ್ ಆಳ್ವ, ಕದ್ರಿ ನವನೀತ್ ಶೆಟ್ಟಿ, ಬಂಟಸಿರಿ ಕಲಾವೈಭವದಲ್ಲಿ ನಡೆಯಲಿರುವ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಸ್ಪರ್ಧೆಗಳ ಬಗ್ಗೆ ಮಾಹಿತಿ ನೀಡಿದರು.[ಮಂಗಳೂರು : ಕಟೀಲಿನ ಚಿನ್ನದ ರಥ ನೋಡಿದ್ದಿರಾ?]

ಸುದ್ದಿಗೋಷ್ಠಿಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಚಿತ್ತರಂಜನ್ ರೈ, ರಾಜಗೋಪಾಲ್ ರೈ, ದೇವಿಚರಣ್ ಶೆಟ್ಟಿ, ವಸಂತ್ ಕುಮಾರ್ ಶೆಟ್ಟಿ, ಭಾಸ್ಕರ ಅರಸ್, ಇನ್ನಿತರರು ಉಪಸ್ಥಿತರಿದ್ದರು.

English summary
The new ‘International Bunts Welfare Trust' will be launch on Feb 7. Shri Devi Group of Institutions Chairman A. Sadananda Shetty will be the chairman of this new trust.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X