ಬಂಟರ ಸಂಘದ ಶತಮಾನೋತ್ಸವ ಕಟ್ಟಡಕ್ಕೆ ಮೇ 12ರಂದು ಶಿಲಾನ್ಯಾಸ
ಮಂಗಳೂರು, ಮೇ 10 : ಬಂಟರ ಯಾನೆ ನಾಡವರ ಮಾತೃಸಂಘ ಇದರ ಶತಮಾನೋತ್ಸವ ಕಟ್ಟಡಗಳ ಸಂಕೀರ್ಣ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಮೇ 12ರ ಗುರುವಾರ ನಡೆಯಲಿದೆ. 4 ಮಹಡಿಗಳ ಕಟ್ಟಡ ನಿರ್ಮಾಣಕ್ಕೆ ತಗಲುವ ವೆಚ್ಚ ಸುಮಾರು 230 ಕೋಟಿ ರೂ..
ನೂತನ ಕಟ್ಟಡ ನಿರ್ಮಾಣದ ಶಿಲಾನ್ಯಾಸ ಸಮಾರಂಭ ಮಂಗಳೂರಿನ ಬಂಟ್ಸ್ ಹಾಸ್ಟೆಲ್ ವಠಾರದಲ್ಲಿ ಮೇ 12ರ ಗುರುವಾರ ಸಂಜೆ 4 ಗಂಟೆಗೆ ನಡೆಯಲಿದೆ. ಮಾತೃಸಂಘದ ಶತಮಾನೋತ್ಸವ ಕಟ್ಟಡಗಳ ಸಂಕೀರ್ಣವನ್ನು ಸಮಾಜ ಬಾಂಧವರ ಸಹಕಾರದೊಂದಿಗೆ ನಿರ್ಮಾಣ ಮಾಡಲಾಗುತ್ತಿದೆ. ರೂ. 230 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲಾಗುವುದು. [ಮಂಗಳೂರು : ಬಂಟ್ಸ್ ಹಾಸ್ಟೆಲ್ ವೃತ್ತ ಲೋಕಾರ್ಪಣೆ]

ಈ ಸಮಾರಂಭಕ್ಕೆ ಉದ್ಯಮಿ ಡಾ.ಆರ್.ಎನ್.ಶೆಟ್ಟಿ, ನಿಟ್ಟೆ ವಿವಿ ಕುಲಪತಿ ಡಾ.ಎನ್.ವಿನಯ ಹೆಗ್ಡೆ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ್ ರೈ, ಸಂಸದ ನಳೀನ್ ಕುಮಾರ್ ಕಟೀಲ್, ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ, ಪುತ್ತೂರು ಶಾಸಕಿ ಶಕುಂತಳಾ ಶೆಟ್ಟಿ, ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥ ಎಮ್. ಮೋಹನ್ ಆಳ್ವ ಮುಂತಾದವರು ಪಾಲ್ಗೊಳ್ಳಲಿದ್ದಾರೆ. [ಜಾತಿ ಆಧಾರಿತ ಜನಗಣತಿ: ಬಂಟರು ಏನ್ನಂತಾರೆ?]
ಸಂಘವು ಶತಮಾನೋತ್ಸವ ಪೂರೈಸಿದ ಸವಿನೆನಪಿಗಾಗಿ ನಿರ್ಮಿಸುವ ಶತಮಾನೋತ್ಸವ ಕಟ್ಟಡಗಳಲ್ಲಿ 2000 ಆಸನ ವ್ಯವಸ್ಥೆ ಇರುವ ಸುಸಜ್ಜಿತ ಸಭಾಭವನ, ಸಭೆ, ಸಮಾರಂಭಗಳನ್ನು ಏರ್ಪಡಿಸಲು ಎರಡು ಸಭಾಭವನಗಳು ಇರುತ್ತವೆ.
1,250 ರಷ್ಟು ವಾಹನ ನಿಲುಗಡೆಗೆ ವಿಸ್ತಾರವಾದ ಅವಕಾಶ, 4ನೇ ಮಹಡಿಯಲ್ಲಿ 50,000 ಚದರ ಅಡಿಯಷ್ಟು ಓಪನ್ ಟೆರೆಸ್, ಸುಮಾರು 6 ಲಕ್ಷ ಚದರ ಅಡಿ ವಾಣಿಜ್ಯ ಸಂಕೀರ್ಣ ಹಾಗೂ ವಿಶ್ವ ದರ್ಜೆಯ ಜಿಮ್ ಮತ್ತು ಕ್ಲಬ್ ಮೊದಲಾದವುಗಳನ್ನು ಭವನ ಒಳಗೊಂಡಿರುತ್ತದೆ.
ವಾಹನ ಪಾರ್ಕಿಂಗ್ ವ್ಯವಸ್ಥೆ : ಸಮಾರಂಭಕ್ಕೆ ಆಗಮಿಸುವವರ ಅನುಕೂಲಕ್ಕಾಗಿ ಬಂಟ್ಸ್ ಹಾಸ್ಟೆಲ್ ಬಳಿಯಿರುವ ಸಿ.ವಿ. ನಾಯಕ್ ಸಭಾಭವನ, ಪಿಂಟೋಸ್ ಲೇನ್ ಬಳಿ ಇರುವ ಹೆಗ್ಡೆ ಕಾಂಪೌಂಡ್, ಶ್ರೀ ರಾಮಕೃಷ್ಣ ವಿದ್ಯಸಂಸ್ಥೆಗಳ ಆವರಣದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದೆ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications