ಉಸಿರುಗಟ್ಟಿ ಸಾವಿಗೀಡಾದರೇ ಸಿದ್ಧಾರ್ಥ?; ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ
Recommended Video
ಮಂಗಳೂರು, ಆಗಸ್ಟ್ 3: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ ಅವರ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ನೆನ್ನೆಯಷ್ಟೆ ಬಂದಿದ್ದು, ಸಿದ್ಧಾರ್ಥ ಉಸಿರುಗಟ್ಟಿ ಸಾವಿಗೀಡಾದ ಬಗ್ಗೆ ಅದರಲ್ಲಿ ಉಲ್ಲೇಖಿಸಲಾಗಿದೆ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ಕೆಎಂಸಿ ಆಸ್ಪತ್ರೆಯ ಫೊರೆನ್ಸಿಕ್ ತಜ್ಞ ಡಾ. ಪ್ರತೀಕ್ ರಸ್ತೋಗಿ ಹಾಗೂ ವೆನ್ಲಾಕ್ ಆಸ್ಪತ್ರೆಯ ಫೊರೆನ್ಸಿಕ್ ವಿಭಾಗದ ಡಾ.ರಶ್ಮಿ ಅವರು ಪ್ರಾಥಮಿಕ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕಿ ಡಾ.ರಾಜೇಶ್ವರಿ ದೇವಿ ಅವರಿಗೆ ಸಲ್ಲಿಸಿದ್ದಾರೆ.
ಸಿದ್ಧಾರ್ಥ ಅವರ ಪ್ರಕರಣದ ತನಿಖಾಧಿಕಾರಿ ಎಸಿಪಿ ಕೋದಂಡರಾಮ ಅವರಿಗೆ ಈ ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ನೀಡಲಾಗಿದೆ. ಈ ವರದಿಯಲ್ಲಿ ಸಿದ್ಧಾರ್ಥಅವರು ನೀರಿಗೆ ಬಿದ್ದು ಉಸಿರು ಗಟ್ಟಿ ಸಾವಿಗೀಡಾದ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.
ಬೆಂಗಳೂರಿನಿಂದ ಮಂಗಳೂರಿಗೆ ಕಾರಿನಲ್ಲಿ ಬಂದ ಸಿದ್ಧಾರ್ಥ ಅವರು ಜುಲೈ 29ರಂದು ರಾತ್ರಿ ಜಪ್ಪಿನಮೊಗರು ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿದ್ದರು. ಆನಂತರ ಜುಲೈ 31ರಂದು ಮುಂಜಾನೆ ಸಿದ್ಧಾರ್ಥ ಅವರ ಮೃತದೇಹ ಹೊಯ್ಗೆ ಬಜಾರ್ ಹಿನ್ನೀರಿನಲ್ಲಿ ಪತ್ತೆಯಾಗಿತ್ತು.

ಸಿದ್ದಾರ್ಥ ಅವರ ಮರಣೋತ್ತರ ಪರೀಕ್ಷೆಯನ್ನು ವೆನ್ಲಾಕ್ ಆಸ್ಪತ್ರೆಯ ಶವಾಗಾರದಲ್ಲಿ ನಡೆಸಲಾಗಿತ್ತು. ಸಿದ್ದಾರ್ಥ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಲಾದ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಅವರ ಮೃತದೇಹದ ಭಾಗಗಳನ್ನು ಹೆಚ್ಚಿನ ಪರೀಕ್ಷೆಗೆ ದಾವಣಗೆರೆಯ ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು.
ಪ್ರಯೋಗಾಲಯದ ಅಂತಿಮ ವರದಿ ಬರಲು ಸುಮಾರು 15 ದಿನಗಳ ಕಾಲಾವಧಿ ಬೇಕಾಗಬಹುದು. ಆ ಬಳಿಕ ಸಾವಿಗೆ ಸಂಬಂಧಿಸಿದ ಎಲ್ಲಾ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ. ಈ ನಡುವೆ ಮಂಗಳೂರು ನಗರ ಅಪರಾಧ ಪತ್ತೆದಳದ ಪಿಎಸ್ ಐ ಕಬ್ಬಳ್ರಾಜ್ ನೇತೃತ್ವದ ತಂಡ ತನಿಖೆಗೆ ಬೆಂಗಳೂರಿಗೆ ತೆರಳಿತ್ತು. ಅಲ್ಲಿ ಕುಟುಂಬಸ್ಥರು, ಸ್ನೇಹಿತರು, ಅವರ ಕಂಪೆನಿ ಸಿಬ್ಬಂದಿ ಹೇಳಿಕೆ ಪಡೆದುಕೊಂಡು ಮಂಗಳೂರಿಗೆ ಮರಳಿದ್ದು. ತನಿಖಾಧಿಕಾರಿ ಸೂಚನೆಯಂತೆ ಇಂದು ಮತ್ತೆ ಬೆಂಗಳೂರಿಗೆ ತೆರಳಿದೆ.
-
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral












Click it and Unblock the Notifications