"ಮೂರು ಉಪಮುಖ್ಯಮಂತ್ರಿಗಳು; ಇದು 3ಡಿ ಎಫೆಕ್ಟ್ ಸರ್ಕಾರನಾ?": ಐವನ್ ಡಿಸೋಜಾ
ಮಂಗಳೂರು, ಆಗಸ್ಟ್ 27: "ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಬಿಜೆಪಿ ಸರಕಾರದ ಸಂಪುಟ ಪ್ರಾತಿನಿಧ್ಯ ಹಾಗೂ ಖಾತೆ ಹಂಚಿಕೆ ಗೊಂದಲದ ಗೂಡಾಗಿದ್ದು, ಇದು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಕ್ಕೆ ಕಾರಣವಾಗಿದೆ" ಎಂದು ಹೇಳಿದ್ದಾರೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಬಿಜೆಪಿ ಹೈಕಮಾಂಡ್ ಹಾಗೂ ಆರ್ ಎಸ್ ಎಸ್ ವಿಶ್ವಾಸ ಕಳೆದುಕೊಂಡಿದೆ. ಅತೃಪ್ತ ಸಚಿವರು ಸ್ವಾಭಿಮಾನವಿದ್ದರೆ ಈ ಕೂಡಲೇ ರಾಜೀನಾಮೆ ನೀಡಲಿ" ಎಂದು ಸವಾಲು ಹಾಕಿದರು. "ಈಗ ಬಿಜೆಪಿಯಲ್ಲಿ ಲಕೋಟೆ ಆಡಳಿತ ನಡೆಯುತ್ತಿದೆ. ದೆಹಲಿ ಮತ್ತು ನಾಗಪುರದ ಸೂಚನೆಯನ್ನಷ್ಟೆ ಯಡಿಯೂರಪ್ಪ ಪಾಲಿಸಬೇಕಾಗಿದೆ. 2008ರ ಬಿಜೆಪಿ ಆಡಳಿತ ಪರಿಸ್ಥಿತಿಯೇ ಈಗಲೂ ಮುಂದುವರಿಯುತ್ತಿದೆ" ಎಂದು ವ್ಯಂಗ್ಯವಾಡಿದರು.
"ಆಗ ಇಬ್ಬರು ಉಪ ಮುಖ್ಯಮಂತ್ರಿಗಳು ಇದ್ದರೆ, ಈಗ ಮೂರು ಮಂದಿ ಇದ್ದಾರೆ. ಇದು ತ್ರಿಡಿ ಆಯಾಮದ ಸರ್ಕಾರ. ಖಾತೆ ಹಂಚಿಕೆ ಬಳಿಕ ಸಿ.ಟಿ.ರವಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಅಶೋಕ್, ಸಚಿವ ಸ್ಥಾನ ಸಿಗದ ಅಂಗಾರ, ರೇಣುಕಾಚಾರ್ಯ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆ ಉಪ ಮುಖ್ಯಮಂತ್ರಿ ಸ್ಥಾನ ಕೂಡ ಸಿಕ್ಕಿಲ್ಲ. ಬಿಜೆಪಿ ಸಚಿವರಿಗೆ ಸ್ವಾಭಿಮಾನ ಇದ್ದರೆ ರಾಜಿನಾಮೆ ನೀಡಲಿ" ಎಂದು ಅವರು ಹೇಳಿದರು.

"ಇದು ಅಲ್ಪಮತದ ಸರ್ಕಾರ. ಕನಿಷ್ಠ 6 ತಿಂಗಳಿಗಿಂತ ಹೆಚ್ಚಿಗೆ ಬಾಳಿಕೆ ಬರುವುದಿಲ್ಲ. ಜನತೆಯ ತೆರಿಗೆ ದುಡ್ಡನ್ನು ಲೂಟಿ ಮಾಡಲು ಸರ್ಕಾರ ಹೊರಟಿದೆ" ಎಂದು ಆರೋಪಿಸಿದರು.
"ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ತಂಡ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರೂ ಕಾರಿನಿಂದ ಇಳಿಯದೆ ನೆಪ ಮಾತ್ರ ಪರಿಶೀಲನೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಹಾನಿ ಸಂಭವಿಸಿದರೂ ಇಲ್ಲಿಗೆ ಕೇಂದ್ರ ತಂಡ ಆಗಮಿಸುತ್ತಿಲ್ಲ. ಇದು ಕರಾವಳಿ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಇರುವ ನಿರ್ಲಕ್ಷ್ಯವನ್ನು ಸಾಬೀತುಪಡಿಸಿದೆ" ಎಂದು ಅವರು ಕಿಡಿಕಾರಿದರು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications