"ಮೂರು ಉಪಮುಖ್ಯಮಂತ್ರಿಗಳು; ಇದು 3ಡಿ ಎಫೆಕ್ಟ್ ಸರ್ಕಾರನಾ?": ಐವನ್ ಡಿಸೋಜಾ
ಮಂಗಳೂರು, ಆಗಸ್ಟ್ 27: "ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ನೂತನ ಬಿಜೆಪಿ ಸರಕಾರದ ಸಂಪುಟ ಪ್ರಾತಿನಿಧ್ಯ ಹಾಗೂ ಖಾತೆ ಹಂಚಿಕೆ ಗೊಂದಲದ ಗೂಡಾಗಿದ್ದು, ಇದು ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಕ್ಕೆ ಕಾರಣವಾಗಿದೆ" ಎಂದು ಹೇಳಿದ್ದಾರೆ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, "ಮುಖ್ಯಮಂತ್ರಿ ಯಡಿಯೂರಪ್ಪ ಮೇಲೆ ಬಿಜೆಪಿ ಹೈಕಮಾಂಡ್ ಹಾಗೂ ಆರ್ ಎಸ್ ಎಸ್ ವಿಶ್ವಾಸ ಕಳೆದುಕೊಂಡಿದೆ. ಅತೃಪ್ತ ಸಚಿವರು ಸ್ವಾಭಿಮಾನವಿದ್ದರೆ ಈ ಕೂಡಲೇ ರಾಜೀನಾಮೆ ನೀಡಲಿ" ಎಂದು ಸವಾಲು ಹಾಕಿದರು. "ಈಗ ಬಿಜೆಪಿಯಲ್ಲಿ ಲಕೋಟೆ ಆಡಳಿತ ನಡೆಯುತ್ತಿದೆ. ದೆಹಲಿ ಮತ್ತು ನಾಗಪುರದ ಸೂಚನೆಯನ್ನಷ್ಟೆ ಯಡಿಯೂರಪ್ಪ ಪಾಲಿಸಬೇಕಾಗಿದೆ. 2008ರ ಬಿಜೆಪಿ ಆಡಳಿತ ಪರಿಸ್ಥಿತಿಯೇ ಈಗಲೂ ಮುಂದುವರಿಯುತ್ತಿದೆ" ಎಂದು ವ್ಯಂಗ್ಯವಾಡಿದರು.
"ಆಗ ಇಬ್ಬರು ಉಪ ಮುಖ್ಯಮಂತ್ರಿಗಳು ಇದ್ದರೆ, ಈಗ ಮೂರು ಮಂದಿ ಇದ್ದಾರೆ. ಇದು ತ್ರಿಡಿ ಆಯಾಮದ ಸರ್ಕಾರ. ಖಾತೆ ಹಂಚಿಕೆ ಬಳಿಕ ಸಿ.ಟಿ.ರವಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಅಶೋಕ್, ಸಚಿವ ಸ್ಥಾನ ಸಿಗದ ಅಂಗಾರ, ರೇಣುಕಾಚಾರ್ಯ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಮಾಜಿ ಸಿಎಂ ಜಗದೀಶ ಶೆಟ್ಟರ್ ಗೆ ಉಪ ಮುಖ್ಯಮಂತ್ರಿ ಸ್ಥಾನ ಕೂಡ ಸಿಕ್ಕಿಲ್ಲ. ಬಿಜೆಪಿ ಸಚಿವರಿಗೆ ಸ್ವಾಭಿಮಾನ ಇದ್ದರೆ ರಾಜಿನಾಮೆ ನೀಡಲಿ" ಎಂದು ಅವರು ಹೇಳಿದರು.

"ಇದು ಅಲ್ಪಮತದ ಸರ್ಕಾರ. ಕನಿಷ್ಠ 6 ತಿಂಗಳಿಗಿಂತ ಹೆಚ್ಚಿಗೆ ಬಾಳಿಕೆ ಬರುವುದಿಲ್ಲ. ಜನತೆಯ ತೆರಿಗೆ ದುಡ್ಡನ್ನು ಲೂಟಿ ಮಾಡಲು ಸರ್ಕಾರ ಹೊರಟಿದೆ" ಎಂದು ಆರೋಪಿಸಿದರು.
"ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ತಂಡ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರೂ ಕಾರಿನಿಂದ ಇಳಿಯದೆ ನೆಪ ಮಾತ್ರ ಪರಿಶೀಲನೆ ನಡೆಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಹ ಹಾನಿ ಸಂಭವಿಸಿದರೂ ಇಲ್ಲಿಗೆ ಕೇಂದ್ರ ತಂಡ ಆಗಮಿಸುತ್ತಿಲ್ಲ. ಇದು ಕರಾವಳಿ ಬಗ್ಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಇರುವ ನಿರ್ಲಕ್ಷ್ಯವನ್ನು ಸಾಬೀತುಪಡಿಸಿದೆ" ಎಂದು ಅವರು ಕಿಡಿಕಾರಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications