ಭಾರತ್ ಬಂದ್: ರಾಜ್ಯ ಸರಕಾರವನ್ನು ಹುರಿದು ಮುಕ್ಕಿದ ಹಿರಿಯ ಕಾಂಗ್ರೆಸ್ ಮುಖಂಡ
ಭಾರತ್ ಬಂದ್: ರಾಜ್ಯ ಸರಕಾರವನ್ನು ಹುರಿದು ಮುಕ್ಕಿದ ಹಿರಿಯ ಕಾಂಗ್ರೆಸ್ ಮುಖಂಡ
Recommended Video

ಮಂಗಳೂರು, ಸೆ 9: ಭಾರತ್ ಬಂದ್ ಕರೆದು ದೇಶಕ್ಕೆ ನಷ್ಟ ಮಾಡುವುದೇ ಮೊದಲು ಅಪರಾಧ, ಅದರಲ್ಲೂ ಆಡಳಿತ ಪಕ್ಷದವರೇ ಬಂದ್ ಗೆ ಕರೆನೀಡುವುದೆಂದರೆ ಏನರ್ಥ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಲೋಕಸಭಾ ಸದಸ್ಯ ಜನಾರ್ಧನ ಪೂಜಾರಿ, ಕಾಂಗ್ರೆಸ್ ಪಕ್ಷವನ್ನು ಬೆಂಡೆತ್ತಿದ್ದಾರೆ.
ನಗರದ ಕುದ್ರೋಳಿ ದೇವಾಲಯದಲ್ಲಿ ಇಂದು (ಸೆ 9) ಮಾತನಾಡುತ್ತಿದ್ದ ಜನಾರ್ಧನ ಪೂಜಾರಿ, ಬಂದ್ ಗೆ ಕರೆನೀಡುವ ಪಕ್ಷದವರೇ, ಇದರಿಂದಾಗುವ ನಷ್ಟವನ್ನು ಭರಿಸಬೇಕೆಂದು ಸರ್ವೋಚ್ಚ ನ್ಯಾಯಾಲಯ ಹಿಂದೆಯೇ ಆದೇಶಿಸಿದೆ.

ಆದರೂ, ಕಾಂಗ್ರೆಸ್ ಪಕ್ಷ ಬಂದ್ ಕರೆನೀಡುವ ಮೂಲಕ, ನಮ್ಮ ನ್ಯಾಯಾಲಯ ವ್ಯವಸ್ಥೆಯನ್ನು ಅಣಕವಾಡಿದೆ ಎಂದು ಪೂಜಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್=ಜೆಡಿಎಸ್ ಸಮ್ಮಿಶ್ರ ಸರಕಾರದ ವಿರುದ್ದ ಯಾರಾದರೂ ಕೇಸ್ ಹೂಡಿದರೆ ಅದರಿಂದ ಪಾರಾಗಲು ಸಾಧ್ಯವೇ ಎಂದು ಪ್ರಶ್ನಿಸಿರುವ ಪೂಜಾರಿ, ಬಂದ್ ಕರೆ ಕೊಟ್ಟ ನಂತರ ದೇಶದಲ್ಲಿ ಆಗುವ ಸಾವಿರಾರು ಕೋಟಿ ನಷ್ಟಕ್ಕೆ ಪಕ್ಷ ಮತ್ತು ಬಂದ್ ಗೆ ಕರೆ ಕೊಟ್ಟವರೇ ಹೊಣೆಯಾಗುತ್ತಾರೆಂದು, ಪೂಜಾರಿ ಸ್ವಪಕ್ಷೀಯರನ್ನೇ ಎಚ್ಚರಿಸಿದ್ದಾರೆ.
ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಅಥವಾ ಜನಾರ್ಧನ ಪೂಜಾರಿ ಬಂದ್ ಗೆ ಕರೆನೀಡಿದರೆ ಅದು ಕಾನೂನು ವಿರೋಧಿ ನಿಲುವಾಗುತ್ತದೆ. ದೇಶ ಮತ್ತು ರಾಜ್ಯ ಸರಕಾರ ಸೆಸ್ ಕಮ್ಮಿ ಮಾಡಿದರೆ, ಅದರ ಲಾಭ ಜನರಿಗೆ ಸಿಗುತ್ತದೆ ಅನ್ನೋದು ತಪ್ಪು. ಹಿಂದೆ ನಾನೂ ಹಣಕಾಸು ಸಚಿವನಾಗಿದ್ದವನು, ಸೆಸ್ ಕಮ್ಮಿ ಮಾಡಿದರೆ ಸರಕಾರ ನಡೆಯುವುದು ಹೇಗೆ ಎಂದು ಪೂಜಾರಿ ಹೇಳಿದ್ದಾರೆ.
ಬೆಲೆ ಏರಿಕೆ ನಿಯಂತ್ರಣಕ್ಕೆ ಮೊದಲು ಕೇಂದ್ರ ಸರಕಾರ ಮುಂದಾಗಬೇಕು. ಅಕ್ರಮ ದಾಸ್ತಾನುದಾರರನ್ನು ಯಾವುದೇ ಮುಲಾಜಿಲ್ಲದೇ, ಜೈಲಿಗೆ ಕಳುಹಿಸಬೇಕು. ಆ ಧೈರ್ಯ ಇರುವವರು ಯಾರು ಎನ್ನುವುದೇ ದೊಡ್ಡ ಪ್ರಶ್ನೆ.
ಸದ್ಯ ಅಂತಹ ಕಠಿಣ ನಿರ್ಧಾರ ತೆಗೆದುಕೊಳ್ಳಲು ಸಾಧ್ಯ ಇರುವವರು ಪ್ರಧಾನಿ ಮೋದಿ ಮಾತ್ರ, ಆದರೆ ಅವರು ಅದಕ್ಕೆ ಮುಂದಾಗುತ್ತಾರೋ ಇಲ್ಲವೋ ಯಾರಿಗೆ ಗೊತ್ತು ಎಂದು ಪೂಜಾರಿ ಹೇಳಿದರು.
-
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು












Click it and Unblock the Notifications