ಸೂಸೈಡ್ ಸ್ಪಾಟ್ ಆಗುತ್ತಿದೆಯೇ ನೇತ್ರಾವತಿ ಸೇತುವೆ?; ಶೀಘ್ರವೇ ಸಿಸಿ ಟಿವಿ ಕ್ಯಾಮೆರಾ, ಫೈಬರ್ ಗೋಡೆ
ಮಂಗಳೂರು, ಸೆಪ್ಟೆಂಬರ್ 3: ಕೆಫೆ ಕಾಫಿ ಡೇ ಮಾಲೀಕ, ಉದ್ಯಮಿ ಸಿದ್ಧಾರ್ಥ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಳವಾದ ನೇತ್ರಾವತಿ ನದಿ ಸೇತುವೆಗೆ ಇದೀಗ ಭಾರೀ ಭದ್ರತೆ ಕಲ್ಪಿಸಲಾಗುತ್ತಿದೆ.
ಸಿದ್ಧಾರ್ಥ ಅವರು ಆತ್ಮಹತ್ಯೆ ಮಾಡಿಕೊಂಡ ನಂತರ ಇದೇ ಜಾಗದಲ್ಲಿ ನಾಲ್ವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ದಾಖಲಾಗಿದ್ದು, ಇದೀಗ ನೇತ್ರಾವತಿ ಸೇತುವೆ ಬಳಿ ಸಿಸಿ ಟಿ.ವಿ ಕ್ಯಾಮೆರಾಗಳನ್ನು ಹಾಗೂ ಸೇತುವೆಯ ಎರಡೂ ಕಡೆ ಲೋಹದ ಗ್ರಿಲ್ ಗಳನ್ನು ಹೊಂದಿರುವ ಫೈಬರ್ ತಡೆಗೋಡೆಗಳನ್ನು ನಿರ್ಮಿಸುವ ಚಿಂತನೆ ನಡೆಯುತ್ತಿದೆ.
ಜುಲೈ 29ರಂದು ಸಿದ್ಧಾರ್ಥ ಅವರು ಇಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಂತರ ಒಂದೇ ತಿಂಗಳ ಅವಧಿಯಲ್ಲಿ ಇನ್ನೂ ನಾಲ್ವರು ಈ ಸೇತುವೆ ಮೇಲಿಂದ ಜಿಗಿದಿರುವುದು ದಾಖಲಾಗಿದೆ. ಅದರಲ್ಲಿ ಒಬ್ಬರನ್ನು ರಕ್ಷಿಸಲಾಗಿದೆ.

ಈ ಕುರಿತು ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರೊಂದಿಗೆ ಈ ರೀತಿ ಘಟನೆಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸೇತುವೆ ಜಾಗದಲ್ಲಿ ಸಿಸಿ ಟಿವಿ ಕ್ಯಾಮೆರಾ, ಸೇತುವೆಯ ಎರಡೂ ಕಡೆ ಫೈಬರ್ ತಡೆಗೋಡೆಗಳನ್ನು ನಿರ್ಮಿಸುವ ಪ್ರಸ್ರಾವನೆಯನ್ನು ಇಟ್ಟಿರುವುದಾಗಿ ತಿಳಿಸಿದ್ದಾರೆ.
"ಸಿದ್ಧಾರ್ಥ ಅವರು ಸಾವನ್ನಪ್ಪಿದ ನಂತರ ಮೂರು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಇದೇ ರೀತಿ ಮುಂದುವರೆದರೆ ಈ ಜಾಗ ಸೂಸೈಡ್ ಸ್ಪಾಟ್ ಎಂದು ಕರೆಸಿಕೊಳ್ಳುವ ಎಲ್ಲಾ ಸಾಧ್ಯತೆಗಳೂ ಇದೆ. ಹೀಗಾಗಿ ಇಂಥ ಘಟನೆಗಳು ನಡೆಯುವುದನ್ನು ತಡೆಯಲು ಕ್ರಮ ವಹಿಸಲೇಬೇಕಿದೆ. ನಾನು ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿದ್ದೇನೆ. ಇನ್ನು ಕೆಲವೇ ತಿಂಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ. ಈ ಫೈಬರ್ ಗೋಡೆ 6 ಅಡಿ ಎತ್ತರವಿದ್ದು, ಪಾರದರ್ಶಕವಾಗಿರುತ್ತದೆ. ಹೀಗಾಗಿ ನದಿ ವೀಕ್ಷಣೆಗೆ ತೊಂದರೆಯಾಗದು" ಎಂದು ತಿಳಿಸಿದ್ದಾರೆ ವೇದವ್ಯಾಸ ಕಾಮತ್.
ಆಗಸ್ಟ್ 9ರಂದು ಮಹಿಳೆಯೊಬ್ಬರ ಶವ ಇದೇ ಜಾಗದಲ್ಲಿ ಪತ್ತೆಯಾಗಿತ್ತು. ಆಗಸ್ಟ್ 17ರಂದು ಮತ್ತೊಬ್ಬ ಯುವಕ ಇಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಗೊಂಡಿತ್ತು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications