ಕರಾವಳಿ ಕ್ರೈಸ್ತರ ಕುರಲ್ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಣೆಗೆ ಒತ್ತಾಯ
ಮಂಗಳೂರು, ಜುಲೈ 11: ಕರಾವಳಿಯ ಕ್ರೈಸ್ತರಿಗೆ ಮರಿಯಮ್ಮ ಜಯಂತಿ ಅಥವಾ ಕುರಲ್ ಹಬ್ಬ ವಿಶೇಷವಾಗಿದ್ದು, ಅಂದು ಕರಾವಳಿ ಜಿಲ್ಲೆಗಳಲ್ಲಿ ಸಾರ್ವತ್ರಿಕ ರಜಾ ಘೋಷಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.
ಸೆಪ್ಟೆಂಬರ್ 8ರಂದು ಮರಿಯಮ್ಮ ಜಯಂತಿ ಕರಾವಳಿಯಲ್ಲಿ ಆಚರಿಸುವ ಹಿನ್ನೆಲೆಯಲ್ಲಿ ಅಂದು ಸಾರ್ವತ್ರಿಕ ರಜೆ ಘೋಷಿಸುವಂತೆ ಕೆಥೊಲಿಕ್ ಸಭಾದಿಂದ ರಾಜ್ಯ ಸರಕಾರವನ್ನು ಒತ್ತಾಯಿಸಲಾಗಿದೆ.
ಮರಿಯಮ್ಮ ಜಯಂತಿ ಕನ್ನಯಾ ಮರಿಯಮ್ಮನವರ ಜನ್ಮದಿನವಾಗಿದ್ದು, ಆ ದಿನವನ್ನು ಕರಾವಳಿಯ ಕ್ರೈಸ್ತರು ಕೊಯ್ಲು ಹಬ್ಬವಾಗಿ ಆಚರಿಸುತ್ತಾರೆ. ರೈತರು ಬೆಳೆದ ಹೊಸ ಫಸಲನ್ನು ದೇವರಿಗೆ ಅರ್ಪಿಸಿ, ಪ್ರಾರ್ಥನಾ ಮಂದಿರಗಳಲ್ಲಿ ಪೂಜಾ ವಿಧಿಗಳೊಂದಿಗೆ ತಮ್ಮ ಮನೆಗಳಲ್ಲಿ ಸಹಭೋಜನ ಮಾಡುತ್ತಾರೆ.

4 ಲಕ್ಷದಷ್ಟು ಕ್ರೈಸ್ತರು ಕರಾವಳಿಯಲ್ಲಿಇದ್ದಾರೆ. ಕ್ರೈಸ್ತ ಸಮುದಾಯದವರ ಈ ಮರಿಯಮ್ಮ ಜಯಂತಿ ವಿಶೇಷ ಹಬ್ಬಕ್ಕೆ ಕರಾವಳಿ ಜಿಲ್ಲೆಗಳನ್ನು ಸೀಮಿತಗೊಳಿಸಿ, ಸೆಪ್ಟೆಂಬರ್ 8ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆಯಾಗಿ ಘೋಷಿಸಬೇಕೆಂದು ಕೆಥೊಲಿಕ್ ಸಭಾದ ಮಂಗಳೂರು ಪ್ರದೇಶದ ಅಧ್ಯಕ್ಷ ರೋಲ್ಫಿ ಡಿಕೋಸ್ತಾ ಒತ್ತಾಯಿಸಿದ್ದಾರೆ.
ಕ್ರೈಸ್ತ ಸಮುದಾಯದ ಬಡ, ಮದ್ಯಮ ಮತ್ತು ಆರ್ಥಿಕ ಸಂಕಷ್ಟದಲ್ಲಿರುವ ಕುಟುಂಬಗಳ ಸರ್ವತೋಮುಖ ಅಬಿವೃದ್ಧಿಗೆ ಪ್ರತ್ಯೇಕ ಕ್ರೈಸ್ತ ನಿಗಮ ಸ್ಥಾಪಿಸಬೇಕಂದು ಒತ್ತಾಯಿಸಲಾಗುತ್ತಿದೆ. ಈ ಬೇಡಿಕೆಗಳನ್ನು ಮುಂದಿಟ್ಟು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶಶಿಕಾಂತ ಸೆಂಥಿಲ್ ಹಾಗೂ ಸಚಿವ ಯು.ಟಿ.ಖಾದರ್ ಅವರಿಗೆ ಮನವಿ ಸಲ್ಲಿಸಲಾಗಿದೆ.
ಈ ಬೇಡಿಕೆಗಳ ಮಹತ್ವ ಮನವರಿಕೆ ಮಾಡಿಸುವ ದೃಷ್ಠಿಯಿಂದ ಕೆಥೊಲಿಕ್ ಸಭಾದ ಪದಾಧಿಕಾರಿಗಳು ಹಾಗೂ ಕ್ರೈಸ್ತ ಧರ್ಮಗುರುಗಳು ಸದ್ಯದಲ್ಲೇ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications