ಗೋಹತ್ಯೆ ನಿಷೇಧ ನೀತಿಯಲ್ಲಿ ಗೊಂದಲವಿದೆ: ಸಚಿವ ಖಾದರ್
ಮಂಗಳೂರು, ಜೂನ್ 02 : ಕೇಂದ್ರ ಸರಕಾರ ಜಾರಿ ಮಾಡಲು ಹೊರಟಿರುವ ಗೋಹತ್ಯೆ ನಿಷೇಧ ನೀತಿಯಲ್ಲಿ ಗೊಂದಲವಿದೆ ಎಂದು ರಾಜ್ಯ ಆಹಾರ ಖಾತೆ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.
ಅವರು ನಗರದಲ್ಲಿ ಗುರುವಾರ ಸುದ್ದಿಗೋಷ್ಟಿಯನ್ನು ಉದ್ದೇಶಿಸಿ ಮಾತನಾಡಿ, "ಗೋಹತ್ಯೆ ನಿಷೇಧದ ವಿಚಾರದಲ್ಲಿ ಸರಕಾರ ಎಲ್ಲಾ ಜನರ ಭಾವನೆಯನ್ನು ಗೌರವಿಸುತ್ತದೆ. ಈ ಹಿಂದಿನ 1960ರ ಪ್ರಾಣಿ ಹಿಂಸಾ ತಡೆ ಕಾಯಿದೆಯಲ್ಲಿ ಪ್ರಾಣಿಗಳಿಗೆ ಹಿಂಸೆ ನೀಡಿ ಕೊಲ್ಲಲು ಅವಕಾಶವಿರಲಿಲ್ಲ ಎಂದರು. [ಗೋ ಹತ್ಯೆ ನಿಷೇಧ: ಕೇರಳ ಸರ್ಕಾರದ ನಿಲುವು ಸಮರ್ಥಿಸಿದ ಸಿಎಂ ಸಿದ್ದರಾಮಯ್ಯ]

ಪ್ರಸಕ್ತ ಗೋಹತ್ಯೆ ನಿಷೇಧ ನೀತಿಯಲ್ಲಿ ಗೋಮಾಂಸ ಸೇವನೆಗೆ ನಿಷೇಧ ಹೇರಲಾಗಿಲ್ಲ. ನಿರುಪಯುಕ್ತ ದನಗಳನ್ನು ಏನು ಮಾಡಬೇಕೆಂದು ತಿಳಿಸಿಲ್ಲ, ಇನ್ನೊಂದು ಕಡೆ ದನದ ಮಾಂಸವನ್ನು ವಿದೇಶಕ್ಕೆ ರಫ್ತು ಮಾಡುವ ಕಂಪೆನಿಗಳಿಗೆ ವಿನಾಯತಿ, ಅವಕಾಶವನ್ನು ಬಿಜೆಪಿ ನೀಡಿದೆ.
ದೇಶದಲ್ಲಿ ಬಿಜೆಪಿ ಈ ರೀತಿಯಲ್ಲಿ ನಿಲುವಿನಿಂದ ಗೊಂದಲ ಸೃಷ್ಟಿಸುತ್ತದೆ. ಈ ನೀತಿಯ ಹಿಂದೆ ಬಿಜೆಪಿಯ ರಾಜಕೀಯ ಇದ್ದು, ರಾಜ್ಯದಲ್ಲಿ ಈ ಕಾಯಿದೆಯನ್ನು ಅನುಷ್ಠಾನದ ಕುರಿತು ಸರಕಾರ ಅಡ್ವಕೇಟ್ ಜನರಲ್ ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.
ಕೇಂದ್ರ ಸರಕಾರ ಮೂರು ವರ್ಷವಾದರೂ ಉಜ್ವಲ ಯೋಜನೆಯನ್ನು ಕರ್ನಾಟಕದಲ್ಲಿ ಜಾರಿ ಮಾಡಲು ಆಸಕ್ತಿ ವಹಿಸದೆ ಇರುವ ಕಾರಣ ಕರ್ನಾಟಕ ಬಡವರಿಗೆ ಉಚಿತವಾಗಿ ಅಡುಗೆ ಅನಿಲ ಸಂಪರ್ಕ ಕಲ್ಪಿಸುವ ಅನಿಲ ಭಾಗ್ಯ ಯೋಜನೆಯನ್ನು ಜಾರಿಗೆ ತರಲಿದೆ.
ಇದರಿಂದ ಅಡುಗೆ ಅನಿಲ ಸಂಪರ್ಕ ಇಲ್ಲದ ಬಳಕೆದಾರರಿಗೆ ಉಚಿತವಾಗಿ ಅಡುಗೆ ಅನಿಲದ ಸಂಪರ್ಕ ಠೇವಣಿ,ಗ್ಯಾಸ್ ಸ್ಟೌವ್,ಗ್ಯಾಸ್ ಸಿಲಿಂಡರ್ ಸೇರಿದಂತೆ ಸುಮಾರು 3,500 ರು. ಮೊತ್ತದ ಸೌಲಭ್ಯ ದೊರಕಲಿದೆ ಎಂದು ಖಾದರ್ ತಿಳಿಸಿದ್ದಾರೆ.
ಬಿಪಿಎಲ್ ಪಡಿತರ ಚೀಟಿ ಪಡೆಯಲು ಮಾಸಿಕ 150ವಿದ್ಯುತ್ ಯೂನಿಟ್ ಒಳಗಿನ ಬಳಕೆದಾರರಿಗೆ ಮಾತ್ರ ಸೀಮಿತವಾಗಿತ್ತು.ಉಳಿದವರನ್ನು ಎಪಿಲ್ಗೆ ಸೇರಿಸಲಾಗಿತ್ತು.
ಆದರೆ ಮನೆಯಲ್ಲಿ ಸಮಾರಂಭದ ಸಂದರ್ಭದಲ್ಲಿ ಹೆಚ್ಚು ವಿದ್ಯುತ್ ಬಳಕೆ ಮಾಡಿದ ತಕ್ಷಣ ಈ ಮಾನದಂಡದ ಪ್ರಕಾರ ಬಿಪಿಎಲ್ ಕಾರ್ಡ್ ಪಡೆಯಲು ಸಮಸ್ಯೆಯಾಗುತ್ತಿದೆ.
ಈ ಹಿನ್ನೆಲೆಯಲ್ಲಿ ಮುಂದೆ ಬಿಪಿಎಲ್ ಪಡಿತರ ಚೀಟಿ ಪಡೆಯಲು ಈ ವಿದ್ಯುತ್ ಬಳಕೆಯ ಆಧಾರವನ್ನು ಸಂಪೂರ್ಣ ಕೈ ಬಿಡಲಾಗುವುದು ಎಂದು ಸಚಿವ ಖಾದರ್ ತಿಳಿಸಿದ್ದಾರೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications