ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರಿನ ಅಡ್ಯಾರ್ ಚೂರಿ ಇರಿತ ಪ್ರಕರಣದಲ್ಲಿ ಮೂವರ ಬಂಧನ

|
Google Oneindia Kannada News

ಮಂಗಳೂರು, ಜುಲೈ 10: ಶುಕ್ರವಾರ ಅಡ್ಯಾರ್‌ಪದವಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶಕ್ಕೆ ಒದಗಿಸಿದ್ದ ಭಿಗಿ ಭದ್ರತೆಯ ನಡುವೆಯೂ ಚೂರಿ ಇರಿದಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ದ್ವಿಚಕ್ರ ವಾಹನದಲ್ಲಿ ಆಗಮಿಸಿದ್ದ ಮೂವರು ದುಷ್ಕರ್ಮಿಗಳ ತಂಡ "ವಾಹನದ ಪೆಟ್ರೋಲ್ ಖಾಲಿಯಾಗಿದೆ" ಎಂಬ ನೆಪದಲ್ಲಿ ಅನ್ಯಕೋಮಿನ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಗುರಿಯಾಗಿಸಿ ಚೂರಿ ಇರಿದಿತ್ತು. ಇದರಲ್ಲಿ ಇಬ್ಬರಿಗೆ ಗಾಯಗಳಾಗಿತ್ತು. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರುದ್ಧ ಕೋಮಿನ ಮೂವರನ್ನು ಬಂಧಿಸಲಾಗಿದೆ.

CCB Police Arrest 3 In Adyarpaduv Student Assault Case

ಬಂಧಿತರು ಫರಂಗಿಪೇಟೆಯ ನಿವಾಸಿಗಳಾಗಿದ್ದಾರೆ. ಜು.7ರಂದು ಅಡ್ಯಾರ್ ನಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದ ವೇಳೆ ಮಾರಕಾಸ್ತ್ರಗಳಿಂದ ಯುವಕರಿಬ್ಬರ ಮೇಲೆ ದಾಳಿ ನಡೆಸಿದ್ದರು.

ಘಟನೆಯಿಂದ ಓರ್ವ ಯುವಕನ ಕೈ ಹಾಗೂ ಹೊಟ್ಟೆಯ ಬಲಭಾಗಕ್ಕೆ ತೀವ್ರ ಗಾಯವಾಗಿದ್ದು, ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇನ್ನೋರ್ವನಿಗೆ ಸಣ್ಣಪುಟ್ಟ ಗಾಯವಾಗಿತ್ತು. ಇದೀಗ ಈ ಪ್ರಕರಣದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದು ಜನರ ಮೆಚ್ಚುಗೆಗೆ ಕಾರಣವಾಗಿದೆ. ಇದೇ ರೀತಿ ಶರತ್ ಮಡಿವಾಳ ಹಾಗೂ ಉಳಿದ ಪ್ರಮುಖ ಕೊಲೆ ಹಾಗೂ ಹಲ್ಲೆಗಳ ಹಂತಕರನ್ನೂ ಪೊಲೀಸರು ಬಂಧಿಸಬೇಕಾಗಿದೆ.

English summary
The CCB police have arrested three persons in connection with the assault of a youth at Adyarpadav here on July 9. The incident took place during Congress confernce program at Adyar on July 7.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X