ಮಂಗಳೂರಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರುತ್ತಿದ್ದವರು ಅಂದರ್
ಮಂಗಳೂರು, ಆಗಸ್ಟ್ 4: ನಗರದ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕೊಂಚಾಡಿ ನಿವಾಸಿ ಲಯನ್ ವೇಗಸ್, ಪಳ್ನೀರ್ ನ ಆಲ್ಮಂಡ್ ಕಾರ್ಕಡ, ಕದ್ರಿ ಕಂಬಳ ನಿವಾಸಿ ಪ್ರದೀಪ್ ಬಂಧಿತ ಆರೋಪಿಗಳು.
ಆರೋಪಿಗಳಿಂದ 1ಕೆಜಿ 200 ಗ್ರಾಂ ಗಾಂಜಾ, ದ್ವಿಚಕ್ರ ವಾಹನ ಹಾಗೂ ಮೂರು ಮೊಬೈಲ್ ಫೋನ್ ಸೇರಿದಂತೆ ಒಟ್ಟು 68,500 ರೂಪಾಯಿ ಮೌಲ್ಯದ ಸ್ವತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಆರೋಪಿಗಳು ಗುರುವಾರ ರಾತ್ರಿ ರಸ್ತೆಯಲ್ಲಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಸಹಿತ ಆರೋಪಿಗಳನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಗಾಂಜಾವನ್ನು ಶಿಕಾರಿಪುರದಿಂದ ಖರೀದಿ ಮಾಡಿ ತಂದಿರುವುದಾಗಿ ಹೇಳಿದ್ದಾರೆ.
ಆರೋಪಿಗಳ ಪೈಕಿ ಲಯನ್ ವೇಗಸ್ ಎಂಬಾತನ ವಿರುದ್ಧ ಹಿಂದೆ ಕಾವೂರು, ಮಂಗಳೂರು ಉತ್ತರ, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗಳಲ್ಲಿ ದ್ವಿಚಕ್ರ ವಾಹನ ಕಳವು, ಹಲ್ಲೆ ಪ್ರಕರಣ ಮುಂತಾದ 9 ಪ್ರಕರಣಗಳು ದಾಖಲಾಗಿದೆ.
ನಗರ ಪೊಲೀಸ್ ಕಮಿಷನರ್ ಟಿಆರ್ ಸುರೇಶ್ ಆದೇಶದಂತೆ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಶಾಂತರಾಜು ಹಾಗೂ ಅಪರಾಧ ಹಾಗೂ ಸಂಚಾರ ವಿಭಾಗದ ಡಿಸಿಪಿ ಹನುಮಂತರಾಯ ಮತ್ತು ಎಸಿಪಿ ಸಿಸಿಬಿಯ ವ್ಯಾಲೆಂಟೈನ್ ಡಿಸೋಜಾ ಮಾರ್ಗದರ್ಶನದಲ್ಲಿ ಸಿಸಿಬಿ ಘಟಕದ ಇನ್ಸ್ಪೆಕ್ಟರ್ ಸುನೀಲ್ ವೈ ನಾಯಕ್ ಮತ್ತು ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications