SSLC Result: ತೋಚಿದ್ದು ಗೀಚಿ..ಜಸ್ಟ್ ಪಾಸಾದ ಗೆಳೆಯನ ಬ್ಯಾನರ್ ಹಾಕಿ ಸಂಭ್ರಮಿಸಿದ ಸ್ನೇಹಿತರು
ಮಂಗಳೂರು, ಮೇ 11: 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿ ನಾಲ್ಕು ದಿನಗಳಾಗುತ್ತಿದ್ದು, ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದವರಿಗೆ ಎಲ್ಲಡೆ ಶುಭಾಶಯ ಕೋರಲಾಗುತ್ತಿದೆ. ರಾಜಕೀಯ ಗಣ್ಯರ ಶುಭಾಶಯ, ಬ್ಯಾನರ್, ಸನ್ಮಾನ ಹೀಗೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಸಾಧನೆಗೈದವರಿಗೆ ಅಭಿನಂದಿಸಲಾಗುತ್ತಿದೆ. ಈ ನಡುವೆ ವಿಶೇಷವಾದ ಬ್ಯಾನರ್ವೊಂದು ವೈರಲ್ ಆಗುತ್ತಿದೆ.
ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 625ಕ್ಕೆ 300 ಅಂಕಗಳೊಂದಿಗೆ ಜಸ್ಟ್ ಪಾಸಾದ ಮಂಗಳೂರಿನ ವಿದ್ಯಾರ್ಥಿಯೊಬ್ಬನಿಗೆ ಆತನ ಸ್ನೇಹಿತರು ಬ್ಯಾನರ್ ಹಾಕಿ ಅಭಿನಂದಿಸಿ ಸಂಭ್ರಮಿಸಿದ್ದಾರೆ.

ನಗರದ ಪಚ್ಚನಾಡಿಯ ಹ್ಯಾಸ್ಲಿನ್ ಎಂಬ ಎಸ್ಎಸ್ಎಲ್ಸಿ ವಿದ್ಯಾರ್ಥಿ ಪರೀಕ್ಷೆಯಲ್ಲಿ ಪಾಸ್ ಆಗಿರುವುದನ್ನು ಆತನ ಸ್ನೇಹಿತರು ಸಂಭ್ರಮಿಸಿದ್ದಾರೆ. ಮೊದಲು ಆತ ಪರೀಕ್ಷೆ ಪಾಸಾಗುತ್ತಾನೋ ಇಲ್ಲವೋ ಎನ್ನುವ ಗೊಂದಲ ಇತ್ತು. ಆದರೆ ಫಲಿತಾಂಶದಲ್ಲಿ ಹ್ಯಾಸ್ಲಿನ್ 300 ಅಂಕಗಳೊಂದಿಗೆ ಪಾಸಾಗಿದ್ದಾನೆ.
ಅದೇ ಖುಷಿಯಲ್ಲಿ ಅವನ ಸ್ನೇಹಿತರು ಪಚ್ಚನಾಡಿಯ ಮಂಗಳಾನಗರದ ರಸ್ತೆ ಬದಿಯಲ್ಲಿ ದೊಡ್ಡ ಬ್ಯಾನರನ್ನೇ ಅಳವಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. ಸದ್ಯ ಈ ಬ್ಯಾನರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ನೋಡುಗರು ಹ್ಯಾಸ್ಲಿನ್ ಸ್ನೇಹಿತರ ಈ ಕಾರ್ಯಕ್ಕೆ ಅವರ ಸಂಭ್ರಮಕ್ಕೆ ಅಭಿನಂದನೆ ತಿಳಿಸಿದ್ದಾರೆ.
ವಿಶೇಷ ಬ್ಯಾನರ್ನಲ್ಲಿರುವುದೇನು..?
'ಅಪ್ಪ ಅಮ್ಮನ ಆಶೀರ್ವಾದದಿಂದ, ಊರವರ ಬೈಗುಳದಿಂದ, ಊರವರ ಪ್ರೋತ್ಸಾಹದಿಂದ, ಟ್ಯೂಷನ್ ಮಹಾತ್ಮೆಯಿಂದ, ಶಾಲೆಯ ಕಿರಿಕಿರಿಯಿಂದ, ಶಿಕ್ಷಕರ ಬೋಧನೆಯಿಂದ, ಸೈಕಲ್, ಕ್ರಾಕ್ಸ್, ಪಿಯುಸಿ ಆಮಿಷದಿಂದ ಎಲ್ಲರ ಕುತೂಹಲ, ಬ್ರೂಸ್ಲಿ (ಹ್ಯಾಸ್ಲಿನ್) ಪಾಸೋ ಫೇಲೋ, ಇಂದು ಆ ಚರ್ಚೆಗೆ ತೆರೆ ಬಿದ್ದಿದೆ. ತೋಚಿದ್ದು ಗೀಚಿ ಫೇಲ್ ಆಗುವವನು ಹರಕೆಯ ಬಲದಿಂದ, ಪ್ರಯತ್ನದ ಫಲದಿಂದ ಹೇಗೋ ಒಟ್ಟಾರೆ ನಮ್ಮ ಬ್ರೂಸ್ಲಿ ಜಸ್ಟ್ ಪಾಸಾಗಿರೋದೆ ನಮಗೆಲ್ಲ ಸಂಭ್ರಮ ಸಂಭ್ರಮ.. ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 300 ಅಂಕ ಪಡೆದು ಉತ್ತೀರ್ಣನಾದ ಹ್ಯಾಸ್ಲಿನ್ ನಿಮಗೆ ಅಭಿನಂದನೆಗಳು' ಎಂದು ಇತಿ ಹ್ಯಾಸ್ಲಿನ್ (ಬ್ರೂಸ್ಲಿ) ಹಿತೈಷಿಗಳು, ಯುವ ಫ್ರೆಂಡ್ಸ್ ಮಂಗಳಾನಗರ ಎಂದು ಬ್ಯಾನರ್ನಲ್ಲಿ ಬರೆಯಲಾಗಿದೆ.
-
CBSE 10ನೇ ತರಗತಿ ಫಲಿತಾಂಶ 2026: ಇಂದು ಸಂಜೆ 7 ಗಂಟೆ ಸುಮಾರಿಗೆ ಬೋರ್ಡ್ನಿಂದ ಅಧಿಕೃತ ಪತ್ರಿಕಾ ಪ್ರಕಟಣೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications