ಇದೆಲ್ಲಾ ಕೊಲೆ ಮಾಡಲು ನಡೆಸಿದ ವ್ಯವಸ್ಥಿತ ಷಡ್ಯಂತ್ರ:ಚೈತ್ರಾ ಕುಂದಾಪುರ
Recommended Video

ಮಂಗಳೂರು, ಅಕ್ಟೋಬರ್.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಕ್ಟೋಬರ್ 24, ಬುಧವಾರದಂದು ನಡೆದ ಎರಡು ಗುಂಪುಗಳ ಬೀದಿ ಕಾಳಗ ಹಾಗೂ ಹಲ್ಲೆ ಪ್ರಕರಣದ ಘಟನೆಯ ಕುರಿತು ಚೈತ್ರಾ ಕುಂದಾಪುರ ಮೊದಲ ಬಾರಿಗೆ ಸ್ಪಷ್ಟನೆ ನೀಡಿದ್ದಾರೆ.
"ಹಲ್ಲೆಗೊಳಗಾದ ಹಿಂದೂ ಜಾಗರಣ ವೇದಿಕೆ ಮುಖಂಡ ಗುರುಪ್ರಸಾದ್ ಪಂಜ ಹಾಗೂ ಆಶಿತ್ ಕಲ್ಲಾಜೆ ಎಂಬುವವರು ತಮ್ಮ ಫೇಸ್ ಬುಕ್ ಖಾತೆ ಯಲ್ಲಿ ನನ್ನ ಬಗ್ಗೆ ಅವಾಚ್ಯ ಶಬ್ದಗಳನ್ನು ಉಪಯೋಗಿಸಿ ಕೆಟ್ಟ ರೀತಿಯ ಕಮೆಂಟ್ ಗಳನ್ನು ಹಾಕಿದ್ದಾರೆ.
ಆದರೆ ನಾನು ಅದರ ಬಗ್ಗೆ ಯಾವುದೇ ತಕರಾರು ಎತ್ತಿಲ್ಲ. ಹಿಂದೂ ಜಾಗರಣ ವೇದಿಕೆ ಮುಖಂಡ ಗುರುಪ್ರಸಾದ್ ಒಬ್ಬ ರೌಡಿ ಶೀಟರ್ ಆಗಿದ್ದು, ಬುಧವಾರದಂದು ಸಂಪುಟ ನರಸಿಂಹ ಮಠಕ್ಕೆ ಬಂದ ಸಂದರ್ಭದಲ್ಲಿ ಗುರುಪ್ರಸಾದ್ ಪಂಜ ಆತನ ಸಹಚರರ ಜೊತೆ ನಮ್ಮ ಕಾರಿನ ಮೇಲೆ ದಾಳಿ ನಡೆಸಿದ್ದಾರೆ. ಕಾರ್ ನ ಗ್ಲಾಸ್ ಗಳನ್ನು ಒಡೆಯಲು ಪ್ರಯತ್ನಿಸಿದ್ದಾರೆ" ಎಂದು ಚೈತ್ರಾ ಕುಂದಾಪುರ ಆರೋಪಿಸಿದ್ದಾರೆ ಮುಂದೆ ಓದಿ...

ಆತ್ಮರಕ್ಷಣೆಗೋಸ್ಕರ ಮಾಡಿದೆ
ಅಂದು ಘಟನೆ ನಡೆದಾಗ ನನ್ನ ಆತ್ಮರಕ್ಷಣೆಗೋಸ್ಕರ ಗುರುಪ್ರಸಾದ್ ಪಂಜಾ ಅವರನ್ನು ಹಿಂದಕ್ಕೆ ತಳ್ಳಿದೆ. ಗುರುಪ್ರಸಾದ್ ಪಂಜ ಹಾಗೂ ಆಶಿತ್ ಕಲ್ಲಾಜೆ ನನ್ನ ಬಗ್ಗೆ ಫೇಸ್ ಬುಕ್ ನಲ್ಲಿ ಹಾಕಿರುವ ಕಮೆಂಟ್ ಗಳನ್ನ ಒಮ್ಮೆ ನೋಡಿ. ಇದೆಲ್ಲಾ ನನ್ನ ಕೊಲೆ ಮಾಡಲು ನಡೆಸಿದ ವ್ಯವಸ್ಥಿತ ಷಡ್ಯಂತ್ರ ಎಂದು ಚೈತ್ರಾ ಕುಂದಾಪುರ ದೂರಿದ್ದಾರೆ.

ಸ್ಪಷ್ಟನೆ ನೀಡಿದ ಚೈತ್ರಾ
ಗುರುಪ್ರಸಾದ್ ಪಂಜ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರ ಕುಂದಾಪುರ ಹಾಗೂ 6 ಮಂದಿ ಆರೋಪಿಗಳಿಗೆ ಸುಳ್ಯ ನ್ಯಾಯಾಲಯ ನವೆಂಬರ್ 3 ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಕಾರಾಗೃಹಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ ಚೈತ್ರಾ ಕುಂದಾಪುರ ಗಲಾಟೆ ಕುರಿತು ಸ್ಪಷ್ಟನೆ ನೀಡಿದ್ದಾರೆ.

ಪೊಲೀಸರಿಗೆ ಆದೇಶಿಸಿದ ನ್ಯಾಯಾಧೀಶರು
ಫೇಸ್ ಬುಕ್ ನಲ್ಲಿ ಚೈತ್ರಾ ಕುಂದಾಪುರ ಅವರ ವಿರುದ್ಧ ಪ್ರಕಟಿಸಿರುವ ಕಮೆಂಟ್ ಗಳಿಗೆ ಸುಳ್ಯದ ಜೆಎಂಎಫ್ ಸಿ ನ್ಯಾಯಾಲಯದ ನ್ಯಾಯಾಧೀಶರು ಅಸಮಾಧಾನ ವ್ಯಕ್ತಪಡಿಸಿದ್ದು, ಪೋಲಿಸರು ಈ ಬಗ್ಗೆ ನಿಗಾವಹಿಸಬೇಕು ಎಂದು ಸೂಚಿಸಿದ್ದಾರೆ.

ಮಧ್ಯ ಪ್ರವೇಶಿಸಿದ ಆರ್ ಎಸ್ಎಸ್
ಇದೆಲ್ಲದರ ನಡುವೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಹಾಗೂ ಸಂಪುಟ ನರಸಿಂಹ ಮಠದ ವಿವಾದ ಇತ್ಯರ್ಥಕ್ಕೆ ಆರ್ ಎಸ್ ಎಸ್ ತಂಡವೊಂದನ್ನು ರಚಿಸಿ ಮಾತುಕತೆಗೆ ಮುಂದಾಗಿದೆ. ಈ ಕುರಿತು ಆರ್.ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಪ್ರತಿಕ್ರಿಯಿಸಿದ್ದು, ಈ ವಿವಾದದ ಬಗ್ಗೆ ಮಾತುಕತೆ ನಡೆಸಲು ವಿಳಂಬವಾಗಿದೆ. ಹಿರಿಯರು ಕೂತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ ಎಂದು ತಿಳಿಸಿದ್ದಾರೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications