ಕರಾವಳಿಯ ಪುಣ್ಯಕ್ಷೇತ್ರಗಳಲ್ಲಿ ಪೂಜೆ ಸಲ್ಲಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
ಮಂಗಳೂರು, ಜೂನ್ 28: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕರಾವಳಿಗೆ ಭೇಟಿ ನೀಡಿದ್ದಾರೆ. ನಿನ್ನೆ ರಾತ್ರಿ ಪುತ್ತೂರಿನಲ್ಲಿ ಉದ್ಯಮಿಯೊಬ್ಬರ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ದರ್ಶನ್ ಭಾಗವಹಿಸಿದ್ದರು. ಇಂದು ಮುಂಜಾನೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಹಲವು ಪುಣ್ಯಕ್ಷೇತ್ರಗಳಿಗೆ ದರ್ಶನ್ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಇಂದು ಮುಂಜಾನೆ ಪುತ್ತೂರಿನ ಇತಿಹಾಸ ಪ್ರಸಿದ್ಧ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಲಿಂಗೇಶ್ವರನಿಗೆ ಪೂಜೆ ಸಲ್ಲಿಸಿದರು. ಆ ಬಳಿಕ ಅವರು ಸೌತಡ್ಕ ಮಹಾಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿ ಮಹಾಗಣಪತಿಯ ದರ್ಶನ ಪಡೆದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಧರ್ಮಸ್ಥಳದಲ್ಲಿ ಮಂಜುನಾಥೇಶ್ವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ದರ್ಶನ್ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೂ ಬಂದು ಸುಬ್ರಹ್ಮಣ್ಯನ ಅನುಗ್ರಹ ಪಡೆದರು. ದರ್ಶನ್ ಜೊತೆಗೆ ಅವರ ಆಪ್ತ ವರ್ಗವೂ ಭಾಗಿಯಾಗಿತ್ತು.













Click it and Unblock the Notifications