ಭಕ್ತ ಸಾಗರದ ನಡುವೆ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ಚಂಪಾ ಷಷ್ಠಿಯ ಮಹಾರಥೋತ್ಸವ ಸಂಪನ್ನ
ಮಂಗಳೂರು, ಡಿಸೆಂಬರ್ 18: ದಕ್ಷಿಣ ಕನ್ನಡ ಜಿಲ್ಲೆಯ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಂಪನ್ನಗೊಂಡಿದೆ. ಮುಂಜಾನೆ 7.33 ರ ಧನುರ್ ಲಗ್ನದ ಮುಹೂರ್ತದಲ್ಲಿ ಸುಬ್ರಹ್ಮಣ್ಯ ಆದಿಯಾಗಿ ಉಮಾಮಹೇಶ್ವರ ದೇವರಿಗೆ ನಡೆದ ರಥೋತ್ಸವದಲ್ಲಿ ಸಾವಿರಾರು ಸಂಖ್ಯೆಯ ಭಕ್ತಾಧಿಗಳು ಪಾಲ್ಗೊಳ್ಳುವ ಮೂಲಕ ದೇವರ ದರ್ಶನ ಪಡೆದು ಕೃತಾರ್ಥರಾದರು.
ನಾಗಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವದ ಸಂಭ್ರಮದಲ್ಲಿ ಭಕ್ತಿಯ ಪರಾಕಾಷ್ಟೆ ಮುಗಿಲು ಮುಟ್ಟಿತ್ತು, ಎಲ್ಲರ ಬಾಯಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಜೈಕಾರ ಮೊಳಗುತ್ತಿತ್ತು. ಭಕ್ತರ ಸಾಗರವೇ ಕುಕ್ಕೆ ಸುಬ್ರಹ್ಮಣ್ಯನ ಆರಾಧನೆಯಲ್ಲಿ ಮುಳುಗಿರುವ ದೃಶ್ಯಗಳು ಕಂಡುಬಂದಿದೆ. ದಕ್ಷಿಣ ಭಾರತದ ಹೆಸರಾಂತ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾ ಷಷ್ಠಿಯ ಮಹಾರಥೋತ್ಸವ ಸಂಪನ್ನಗೊಂಡಿದೆ. ಹದಿನಾರು ದಿನಗಳ ಕಾಲ ನಡೆಯುವ ಜಾತ್ರೋತ್ಸವದ ಕಾರ್ಯಕ್ರಮಗಳಲ್ಲಿ ಕ್ಷೇತ್ರದಲ್ಲಿ ಮೂರು ದಿನಗಳ ಆಚರಣೆಗಳು ವಿಶಿಷ್ಟವಾಗಿರುತ್ತದೆ.

ಚೌತಿ, ಪಂಚಮಿ ಹಾಗೂ ಷಷ್ಠಿಯಂದು ಇಲ್ಲಿ ವಿಶೇಷ ಸೇವೆಯಾದ ಎಡೆಮಡಸ್ನಾನದ ಜೊತೆಗೆ ಕ್ಷೇತ್ರಾಧಿಪತಿಯಾದ ಸುಬ್ರಹ್ಮಣ್ಯ ಸ್ವಾಮಿ ಹಾಗೂ ಉಮಾಮಹೇಶ್ವರ ದೇವರಿಗೆ ರಥೋತ್ಸವವೂ ನಡೆಯುತ್ತದೆ. ಇಲ್ಲಿ ನಡೆಯುವ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವಕ್ಕೆ ವಿಶಿಷ್ಟ ಮಹತ್ವವೂ ಇದೆ. ರಾಜ್ಯದ ಅತ್ಯಂತ ದೊಡ್ಡ ರಥಗಳಲ್ಲಿ ಸುಬ್ರಹ್ಮಣ್ಯ ರಥವೂ ಒಂದಾಗಿದೆ.
ಚಂಪಾ ಷಷ್ಠಿಯ ದಿನದಂದು ಈ ರಥೋತ್ಸವ ನಡೆಯುತ್ತಿದ್ದು, ಈ ಬಾರಿ ಧನುರ್ ಲಗ್ನದ 7.33 ರ ಮುಹೂರ್ತದಲ್ಲಿ ಬ್ರಹ್ಮರಥೋತ್ಸವ ನಡೆಯಿತು. ದೇವಸ್ಥಾನದ ಪ್ರಾಂಗಣದಲ್ಲಿ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಬಳಿಕ ಮೊದಲಿಗೆ ಪಂಚಮಿ ರಥದಲ್ಲಿ ಉ.ಮಾಮಹೇಶ್ವರ ದೇವರ ರಥೋತ್ಸವ ನಡೆದರೆ, ಬಳಿಕ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ನಡೆಯುತ್ತದೆ. ರಥೋತ್ಸವ ನಡೆಯುವ ಸಂದರ್ಭದಲ್ಲಿ ಭಕ್ತಾಧಿಗಳು ರಥದ ಮೇಲೆ ಹೆಸರು ಕಾಳು, ಸಾಸಿವೆ ಕಾಳು ಮೊದಲಾದ ಪದಾರ್ಥಗಳನ್ನು ಎಸೆಯುವ ಮೂಲಕ ತಮ್ಮ ಹರಕೆಯನ್ನು ತೀರಿಸುವ ಸಂಪ್ರದಾಯವೂ ಇಲ್ಲಿದೆ.

ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆಯುವ ಈ ಜಾತ್ರಾ ಕಾರ್ಯಕ್ರಮಗಳನ್ನು ವೀಕ್ಷಿಸಲು ದೇಶ ಹಾಗೂ ವಿದೇಶಗಳಿಂದಲೂ ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತಾಧಿಗಳು ಇಲ್ಲಿಗೆ ಭೇಟಿ ನೀಡುತ್ತಾರೆ. ಮೊದಲ ಬಾರಿಗೆ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವ ನೋಡಿದ ಭಕ್ತಾಧಿಗಳಿಗೆ ಜೀವನದಲ್ಲಿ ಅದ್ಭುತ ಕ್ಷಣಗಳಿಗೆ ಸಾಕ್ಷಿಯಾದ ಅನುಭವನ್ನು ಪಡೆಯುತ್ತಾರೆ. ಸುಬ್ರಹ್ಮಣ್ಯ ಸ್ವಾಮಿಯ ವಿವಾಹದ ದ್ಯೂತಕವಾಗಿ ಸ್ವಾಮಿಗೆ ಈ ರಥೋತ್ಸವನ್ನು ನಡೆಸಲಾಗುತ್ತದೆ.
ರಥವನ್ನು ಇಲ್ಲಿ ಹಗ್ಗದ ಬದಲು ಬಿದಿರಿನಿಂದಲೇ ಎಳೆಯಲಾಗುತ್ತದೆ. ಹೀಗೆ ಎಳೆದ ಬಿದಿರನ್ನು ರಥೋತ್ಸವದ ಬಳಿಕ ಭಕ್ತಾಧಿಗಳಿಗೆ ಪ್ರಸಾದದ ರೂಪದಲ್ಲಿ ವಿತರಿಸಲಾಗುತ್ತದೆ. ಈ ಬಿದಿರನ್ನು ಮನೆಯಲ್ಲಿ ಇರಿಸಿದಲ್ಲಿ ನಾಗದೋಷ ನಿವಾರಣೆಯಾಗುತ್ತದೆ ಎನ್ನುವ ನಂಬಿಕೆ ಭಕ್ತರದ್ದಾಗಿದೆ. ಈ ಬಾರಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಅದ್ಧೂರಿಯಾಗಿ ನಡೆದಿದ್ದು, ಲಕ್ಷಾಂತರ ಭಕ್ತರು ಭಾಗಿಯಾಗಿದ್ದಾರೆ.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications