ಕುಕ್ಕೆ ಸುಬ್ರಹ್ಮಣ್ಯದಲ್ಲಿ 134 ಭಕ್ತರಿಂದ ಎಡೆ ಮಡೆ ಸ್ನಾನ ಸೇವೆ
ಮಂಗಳೂರು, ಡಿಸೆಂಬರ್ 12: ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಉತ್ಸವದ ಸಂದರ್ಭದಲ್ಲಿ ಎಡೆಮಡೆ ಸ್ನಾನವನ್ನು ನೂರಾರು ಭಕ್ತರು ನೆರವೇರಿಸಿದರು.
ನಿನ್ನೆ ಮಂಗಳವಾರ (ಡಿಸೆಂಬರ್ 11) ಚಂಪಾಷಷ್ಠಿಯ ಮೊದಲ ದಿನ 134 ಭಕ್ತರಿಂದ ಎಡೆಮಡೆ ಸ್ನಾನ ಉರುಳು ಸೇವೆ ನೆರವೇರಿದೆ. ದೇವರ ನೈವೇದ್ಯದ ಮೇಲೆ ಎಡೆಮಡೆ ಉರುಳು ಸೇವೆಯನ್ನು ಭಕ್ತರು ನೆರವೇರಿಸಿದ್ದಾರೆ.
ಆಗಮ ಪಂಡಿತರ ಮಾರ್ಗದರ್ಶನದಲ್ಲಿ ಎಡೆಮಡೆ ಸ್ನಾನ ನೆರವೇರಿದ್ದು, ಇಂದು ಮತ್ತು ನಾಳೆ ಕೂಡ ಎಡೆ ಮಡೆ ಸ್ನಾನ ಸೇವೆ ನಡೆಯಲಿದೆ. ಚೌತಿ, ಪಂಚಮಿ ಹಾಗೂ ಷಷ್ಟಿ ದಿನದಂದು ಸೇವೆ ನೆರವೇರಲಿದೆ.

ಕ್ಷೇತ್ರದಲ್ಲಿ ಅನಾದಿ ಕಾಲದಿಂದ ನಡೆದುಕೊಂಡು ಬರುತ್ತಿದ್ದಂತಹ ಮಡೆ ಸ್ನಾನಕ್ಕೆ ನ್ಯಾಯಾಲಯ ನಿಷೇಧ ಹೇರಿದೆ. ಬ್ರಾಹ್ಮಣರು ತಿಂದು ಉಳಿಸಿದಂತಹ ಎಲೆಯ ಮೇಲೆ ಭಕ್ತಾಧಿಗಳು ಈ ಸೇವೆಯನ್ನು ನೆರವೇರಿಸುತ್ತಿದ್ದರು. ಈ ಸೇವೆಗೆ ಇತ್ತೀಚಿನ ಕೆಲವು ವರ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು.
ಈ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಈ ಪದ್ಧತಿಯನ್ನು ನಿಷೇಧಗೊಳಿಸಿ ಆದೇಶ ಹೊರಡಿಸಿದ ಬಳಿಕ ಕ್ಷೇತ್ರದಲ್ಲಿ ದೇವರಿಗೆ ನೈವೇದ್ಯವಿಟ್ಟ ಅನ್ನವನ್ನು ಗೋವುಗಳಿಗೆ ತಿನ್ನಿಸಿದ ಬಳಿಕ ಆ ಎಲೆಯ ಮೇಲೆ ಭಕ್ತಾಧಿಗಳು ಉರುಳುಸೇವೆ ಮಾಡುವ ಎಡೆಮಡೆಸ್ನಾನ ಪದ್ಧತಿಯನ್ನು ಆರಂಭಿಸಲಾಗಿದೆ.
-
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ












Click it and Unblock the Notifications