ಪುರಾಣ ಪ್ರಸಿದ್ಧ ಅನಂತೇಶ್ವರ ದೇವಾಲಯದಲ್ಲಿ ಚಂಪಾಷಷ್ಠಿ ಉತ್ಸವಕ್ಕೆ ಸಾಕ್ಷಿಯಾದ ಲಕ್ಷಾಂತರ ಜನ
ಮಂಗಳೂರು, ಡಿಸೆಂಬರ್ 14: ತುಳುನಾಡಿನಲ್ಲಿ ಹಿಂದಿನಿಂದಲೂ ನಾಗ ದೇವರ ಆರಾಧನೆಯನ್ನು ಶ್ರದ್ಧಾ ಭಕ್ತಿಯಿಂದ ಆಚರಿಸಲಾಗುತ್ತದೆ. ಈ ಹಿನ್ನೆಲೆಯಲ್ಲಿ ಗಡಿನಾಡ ಪ್ರದೇಶ ಕೇರಳದ ಕಾಸರಗೋಡಿನ ಶ್ರೀ ಕ್ಷೇತ್ರ ಹದಿನೆಂಟು ಪೇಟೆಯ ದೇವಳವೆಂಬ ಖ್ಯಾತಿಯ ಮಂಜೇಶ್ವರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಚಂಪಾಷಷ್ಠಿ ಉತ್ಸವ ಸಂಪನ್ನಗೊಂಡಿದೆ.
ದೇವಳದ ರಥಬೀದಿಯಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ ನಡೆಯಿತು. ಅನಂತೇಶ್ವರ ದೇವಾಲಯದಲ್ಲಿ ಸಾವಿರಾರು ಭಕ್ತಾದಿಗಳು ಶ್ರದ್ಧಾ ಭಕ್ತಿಯಿಂದ ಚಂಪಾಷಷ್ಠಿ ಆಚರಿಸಿದರು. ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿ ವಿಶೇಷ ಪೂಜೆ ಸಲ್ಲಿಸಿದರು.
ಕೋಟ್ಯಾಂತರ ಭಕ್ತರ ಆರಾಧ್ಯದೈವ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬ್ರಹ್ಮರಥದಲ್ಲಿ ರಥಾರೂಡನಾಗಿ ಭಕ್ತರಿಗೆ ದರ್ಶನ ನೀಡಿದ್ದು, ಲಕ್ಷಾಂತರ ಭಕ್ತರು ಅಪರೂಪದ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಮುಂಜಾನೆ ಶ್ರೀ ದೇವಳದಲ್ಲಿ ಪಂಚಾಮೃತ , ಕ್ಷೀರಾಭಿಷೇಕ, ಶತ ಕಲಶಾಭಿಷೇಕಗಳು ದೇವಳದಲ್ಲಿ ನೆರವೇರಿದವು.

ಬಳಿಕ ಸಾಯಂಕಾಲ ಭದ್ರ ನರಸಿಂಹ ಹಾಗೂ ಸುಬ್ರಹ್ಮಣ್ಯ ದೇವರು ಬೆಳ್ಳಿ ಪಲ್ಲಕಿಯಲ್ಲಿ ಭುಜ ಸೇವೆಯ ಮೂಲಕ ರಥಾರೂಢವಾಗಿದ್ದು ವೈಭವ ಪೂರ್ಣವಾಗಿ ತೇರು ಉತ್ಸವ ನಡೆಯಿತು. ದೇವಸ್ಥಾನದ ಎದುರಿನ ರಥಬೀದಿಯಲ್ಲಿ ಅಸಂಖ್ಯಾತ ಭಕ್ತರಿಗೆ ದರ್ಶನ ನೀಡಿದ್ದಾನೆ. ಲಕ್ಷಾಂತರ ಮಂದಿ ಭಕ್ತರು ಸುಬ್ರಹ್ಮಣ್ಯನ ಐತಿಹಾಸಿಕ ವಾರ್ಷಿಕ ಉತ್ಸವಕ್ಕೆ ಸಾಕ್ಷಿಯಾಗಿದ್ದಾರೆ.
ಪುರಾಣ ಪ್ರಸಿದ್ಧ ಈ ಅನಂತೇಶ್ವರ ದೇವಾಲಯಕ್ಕೆ ಚಂಪಾಷಷ್ಠಿ ಉತ್ಸವದ ಹಿನ್ನೆಲೆಯಲ್ಲಿ ಮಂಗಳೂರು, ಉಡುಪಿ ,ಕುಂದಾಪುರ , ಪುತ್ತೂರು , ಹಾಸನ, ಮಡಿಕೇರಿ, ಮುಂಬೈ , ಬೆಂಗಳೂರು , ಚೆನೈ ಮುಂತಾದ ಜಿಲ್ಲೆಗಳಿಂದ ಸಾವಿರಾರು ಭಕ್ತರು ಆಗಮಿಸಿದ್ದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications