ಸಂಚಾರ ನಿಯಮದಲ್ಲಿ ಬದಲಾವಣೆ ತಂದ ಮಂಗಳೂರು ಪೊಲೀಸ್ ಕಮಿಷನರ್: ಮಾರ್ಗಗಳ ವಿವರ ಇಲ್ಲಿದೆ
ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಅಧಿಕಾರವಹಿಸಿಕೊಂಡ ಬೆನ್ನಲ್ಲೇ ನಗರದ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಮುಂದಾಗಿದ್ದಾರೆ.
ಮಂಗಳೂರು, ಮಾರ್ಚ್, 06: ಮಂಗಳೂರಿನ ನೂತನ ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅವರು ಅಧಿಕಾರವಹಿಸಿಕೊಂಡ ಬೆನ್ನಲ್ಲೇ ನಗರದ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ತರಲು ಮುಂದಾಗಿದ್ದಾರೆ. ಮೊದಲ ಹಂತದಲ್ಲಿ ನಗರದ ಅತೀ ವಾಹನ ದಟ್ಟಣೆ ಇರುವ ಹಂಪನಕಟ್ಟೆ ವೃತ್ತದಲ್ಲಿ ಪ್ರಾಯೋಗಿಕವಾಗಿ ಬದಲಾವಣೆ ಮಾಡಿದ್ದಾರೆ.
ವಾಹನಗಳ ದಟ್ಟಣೆ ಕಡಿಮೆ ಮಾಡಲು ಮತ್ತು ಪಾದಚಾರಿಗಳ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಹಂಪನಕಟ್ಟ ಜಂಕ್ಷನ್ನ ಮಧ್ಯದಲ್ಲಿ ಬ್ಯಾರಿಕೇಡ್ ಅಳವಡಿಸಲಾಗಿದೆ. ಹಾಗೆಯೇ ಯಾವೆಲ್ಲ ಸಂಚಾರ ಮಾರ್ಗದಲ್ಲಿ ಪ್ರಾಯೋಗಿಕವಾಗಿ ಬದಲಾವಣೆ ಮಾಡಲಾಗಿದೆ ಎನ್ನುವುದನ್ನು ಇಲ್ಲಿ ಗಮನಿಸಿ.

ಯಾವೆಲ್ಲ ಮಾರ್ಗಗಳಲ್ಲಿ ಬದಲಾವಣೆ?
1. ಕ್ಲಾಕ್ ಟವರ್ ಕಡೆಯಿಂದ ಫಳ್ನೀರ್ ಕಡೆಗೆ ಹೋಗುವ ಎಲ್ಲಾ ವಾಹನಗಳು ಇನ್ಮುಂದೆ ಹಂಪನಕಟ್ಟ ಸರ್ಕಲ್ನಲ್ಲಿ ನೇರವಾಗಿ ಮೂಲ್ಕಿ ಸುಂದರ್ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಿಸಿ, ಹಾಗೆಯೇ ಜೋಸ್ ಅಲುಕಾಸ್ ಮುಂಭಾಗ ಯೂ ಟರ್ನ್ ಮಾಡಿಕೊಂಡು ಹೋಗಬೇಕಾಗುತ್ತದೆ. ಅಲ್ಲಿಂದ ವಾಪಾಸು ಹಂಪನಕಟ್ಟ ಜಂಕ್ಷನ್ಗೆ ಬಂದು ಎಡಕ್ಕೆ ತಿರುಗಿ ಫಳ್ನೀರ್ ರಸ್ತೆ ಕಡೆಗೆ ಸಂಚರಿಸಬಹುದಾಗಿದೆ.
2. ಫಳ್ನೀರ್ ರಸ್ತೆಯಿಂದ ನವಭಾರತ್ ಸರ್ಕಲ್ ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಸರ್ಕಲ್ನಲ್ಲಿ ಎಡಕ್ಕೆ ತಿರುಗಿ (ಫ್ರೀ ಲೆಫ್ಟ್) ಕ್ಲಾಕ್ ಟವರ್ ಕಡೆಗೆ ಚಲಿಸಬೇಕಾಗುತ್ತದೆ. ಕ್ಲಾಕ್ ಟವರ್ ಜಂಕ್ಷನ್ನಲ್ಲಿ ಯೂ ಟರ್ನ್ ತೆಗೆದುಕೊಂಡು ಹಂಪನಕಟ್ಟ ಜಂಕ್ಷನ್ಗೆ ಬಂದು ಎಡಕ್ಕೆ ತಿರುಗಿ ನವಭಾರತ್ ಸರ್ಕಲ್ ಕಡೆಗೆ ಸಂಚರಿಸಬಹುದಾಗಿದೆ.
3. ನವಭಾರತ್ ಸರ್ಕಲ್ನಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸುವ ಎಲ್ಲಾ ವಾಹನಗಳು ಪಿ.ಎಂ.ರಾವ್ ರಸ್ತೆಯ ಮೂಲಕ ಹೋಗಬೇಕಾಗುತ್ತದೆ. ಗಣಪತಿ ಹೈಸ್ಕೂಲ್ ರಸ್ತೆ ಮೂಲಕ ಕೃಷ್ಣಭವನಕಟ್ಟೆ ಜಂಕ್ಷನ್ ತಲುಪಿ, ಅಲ್ಲಿಂದ ಕ್ಲಾಕ್ ಟವರ್ ಕಡೆಗೆ ಸಂಚರಿಸಬಹುದು. ಅದೇ ರೀತಿ ನವಭಾರತ್ ಸರ್ಕಲ್ ಕಡೆಯಿಂದ ಫಳ್ನೀರ್ ರಸ್ತೆ ಕಡೆಗೆ ಹೋಗುವ ವಾಹನಗಳು ಹಂಪನಕಟ್ಟ ಜಂಕ್ಷನ್ನಲ್ಲಿ ಎಡ ತಿರುವು ಪಡೆಯಬೇಕಾಗುತ್ತದೆ. ಮುಲ್ಕಿ ಸುಂದರ್ರಾಮ್ ಶೆಟ್ಟಿ ರಸ್ತೆಯಲ್ಲಿ ಚಲಿಸಿ ಜೋಸ್ ಅಲುಕಾಸ್ ಎದುರು ಯೂ ಟರ್ನ್ ಪಡೆದು ಹಂಪನಕಟ್ಟ ಜಂಕ್ಷನ್ ಬಂದು ಎಡಕ್ಕೆ ತಿರುಗಬೇಕಾಗುತ್ತದೆ. ಆಗ ಫಳ್ನೀರ್ ಹಾಗೂ ನೇರವಾಗಿ ಕ್ಲಾಕ್ಟವರ್ ಕಡೆಗೆ ಸಂಚರಿಸಬಹುದು.

4. ಹಂಪನಕಟ್ಟ ಜಂಕ್ಷನ್ನಲ್ಲಿ ಪಾದಚಾರಿಗಳ ಸುರಕ್ಷಿತಾ ಸಂಚಾರಕ್ಕೆ ಪಾದಚಾರಿಗಳ ಮಾರ್ಗ (Zebra Cross)ಅನ್ನು ರಚಿಸಲಾಗಿದೆ. ಎಲ್ಲರೂ ಕಡ್ಡಾಯವಾಗಿ ಈ ಮಾರ್ಗವನ್ನು ಉಪಯೋಗಿಸುವುದು.
5. ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಲಾಗಿದ್ದು, ಸ್ಟೇಟ್ಬ್ಯಾಂಕ್ ಬಸ್ ನಿಲ್ದಾಣ ಹಾಗೂ ನಗರ ಸರ್ವಿಸ್ ಬಸ್ ನಿಲ್ದಾಣದಿಂದ ಹೊರಡುವ ಬಸ್ಸುಗಳಿಗೆ ಹತ್ತಲು ಪ್ರಯಾಣಿಕರಿಗೆ ಅನುವು ಮಾಡಿಕೊಡಲಾಗಿದೆ. ಕೃಷ್ಣಭವನಕಟ್ಟೆ ನಿಲ್ದಾಣದ ಬಳಿಕ ಜೋಸ್ ಅಲುಕಾಸ್ ಎದುರಿನ ನಿಲ್ದಾಣದಲ್ಲಿ ಪ್ರಯಾಣಿಕರು ಬಸ್ಸುಗಳನ್ನು ಹತ್ತಲು ಅನುವು ಮಾಡಿಕೊಡಲಾಗಿದೆ. ಆದ್ದರಿಂದ ಪ್ರಯಾಣಿಕರು ಈ ಬಸ್ಸು ನಿಲ್ದಾಣಗಳನ್ನು ಹೊರತುಪಡಿಸಿ, ಬೇರೆ ಯಾವುದೇ ಬಸ್ ನಿಲ್ದಾಣಗಳನ್ನು ಬಳಸಬಾರದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications