ವಿವಾಹೇತರ ಸಂಬಂಧದ ಬಗ್ಗೆ ಡಿಗ್ರಿ ಪಾಠ, ಸುದ್ದಿಯಲ್ಲಿದೆ ಮಂಗಳೂರು ವಿವಿ
ಮಂಗಳೂರು, ಜುಲೈ 10 : ಮಂಗಳೂರು ವಿಶ್ವವಿದ್ಯಾನಿಲಯವು ಪಠ್ಯಪುಸ್ತಕ ಪಾಠವೊಂದರ ವಿಚಾರದಲ್ಲಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದೆ. ದ್ವಿತೀಯ ಬಿಕಾಂ ವಿದ್ಯಾರ್ಥಿಗಳ ಕನ್ನಡ ಪಠ್ಯದಲ್ಲಿ ಅಶ್ಲೀಲತೆ ಬಿಂಬಿಸುವ ಕಥೆಯೊಂದನ್ನು ಪಠ್ಯವಾಗಿ ನೀಡಿದೆ ಎಂಬ ಆರೋಪ ಕೇಳಿ ಬಂದಿದ್ದು, ಭಾರೀ ವಿವಾದಕ್ಕೆ ಕಾರಣವಾಗಿದೆ.
ದ್ವಿತೀಯ ಬಿಕಾಂ ಪದವಿಗೆ ಅಳವಡಿಸಿರುವ ಕನ್ನಡ ಪಠ್ಯ ಪುಸ್ತಕ 'ನುಡಿ ನೂಪುರ'ದಲ್ಲಿ 'ಮಗುವಿನ ತಂದೆ ' ಎಂಬ ಪಾಠ ಈಗ ವಿವಾದಕ್ಕೆ ಗುರಿಯಾಗಿದೆ. ಇದರಲ್ಲಿ ಆಶ್ಲೀಲತೆಯನ್ನು ಬಿಂಬಿಸಲಾಗಿದೆ ಎಂದು ಭಾರೀ ಆಕ್ಷೇಪ ವ್ಯಕ್ತಪಡಿಸಲಾಗಿದೆ.
ಈ ಪಾಠದಲ್ಲಿ ಅಕ್ರಮ ಸಂಬಂಧದಲ್ಲಿ ತಪ್ಪಿಲ್ಲ ಎಂಬಂತೆ ಬಿಂಬಿಸುವ ಕಥೆಯನ್ನು ಸೇರಿಸಿರುವುದು ವಿವಾದಕ್ಕೆ ಕಾರಣವಾಗಿದೆ. ಅಲ್ಲದೆ, ಈ ಪಾಠದಲ್ಲಿ ವಿವಾಹೇತರ ಸಂಬಂಧವನ್ನು ಲಘು ಭಾಷೆಯಲ್ಲಿ ವಿವರಿಸಿದ್ದು, ಇದನ್ನು ಬೋಧಿಸುವ ಉಪನ್ಯಾಸಕರಿಗೆ ಮುಜುಗರ ಸೃಷ್ಟಿಸುವಂತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ .

ವೈದ್ಯರೊಬ್ಬರ ಪತ್ನಿಗೆ ಪತಿಯಿಂದ ಶಾರೀರಿಕ ಸುಖ ದೊರೆಯದ ಕಾರಣ ಅನ್ಯ ಯುವಕನೊಂದಿಗೆ ಅನೈತಿಕ ಸಂಬಂಧವನ್ನು ಹೊಂದುತ್ತಾಳೆ. ಬಳಿಕ ಈ ಅನೈತಿಕ ಸಂಬಂಧದಿಂದ ಮಗುವೊಂದನ್ನು ಪಡೆಯುತ್ತಾಳೆ. ಆ ಮಗು ತನ್ನ ಗಂಡನದೇ ಅಥವಾ ಅನೈತಿಕ ಸಂಬಂಧದಿಂದ ಹುಟ್ಟಿದ್ದೇ ಎನ್ನುವ ಗೊಂದಲದಲ್ಲಿರುವ ಹೆಣ್ಣಿನ ಕಥೆ ಇದಾಗಿದೆ.
ಈ ಕಥೆಯಲ್ಲಿ ಯುವಕ ಮತ್ತು ವೈದ್ಯನ ಪತ್ನಿ ಮಧ್ಯೆ ನಡೆಯುವ ಮಿಲನ ಕ್ರಿಯೆಯನ್ನು ಅಸಹ್ಯ ರೀತಿಯಲ್ಲಿ ವಿವರಿಸಲಾಗಿದೆ. ಹದಿಹರೆಯದ ವಿದ್ಯಾರ್ಥಿಗಳ ಮುಂದೆ ಇದನ್ನು ಪಾಠ ಮಾಡಬೇಕಾದ ಅನಿವಾರ್ಯ ಉಪನ್ಯಾಸಕರದ್ದಾಗಿದೆ. ಮಟ್ಟಾರು ವಿಠಲ ಹೆಗ್ಡೆ ಎಂಬುವವರು 1939ರಲ್ಲಿ ಬರೆದ ಈ ಕಥೆಯನ್ನು ಈಗ ಪಠ್ಯವಾಗಿ ಸೇರಿಸಿಕೊಂಡಿದ್ದರ ಉದ್ದೇಶವೇನು ಅನ್ನೋ ಪ್ರಶ್ನೆಯನ್ನು ಉಪನ್ಯಾಸಕರು ಮುಂದಿಟ್ಟಿದ್ದಾರೆ.
ವಿವಾಹೇತರ ಸಂಬಂಧದ ಚಿತ್ರಣ ತಿಳಿಸಿ, ಯಾವ ರೀತಿ ವಿಕೃತಿಯನ್ನು ವಿದ್ಯಾರ್ಥಿಗಳ ಮನಸ್ಸಿನ ಮೇಲೆ ಹೇರುತ್ತಿದ್ದಾರೆಂದು ಪ್ರಶ್ನಿಸಿದ್ದಾರೆ. ವಿಶ್ವ ವಿದ್ಯಾನಿಲಯದ ಪಠ್ಯ ಈಗಷ್ಟೆ ಮುದ್ರಣ ಆಗಿ ವಿದ್ಯಾರ್ಥಿಗಳ ಕೈ ಸೇರಿದ್ದು, ಕೂಡಲೇ ಅದನ್ನು ಹಿಂಪಡೆಯಬೇಕೆಂಬ ಆಗ್ರಹ ವ್ಯಕ್ತವಾಗಿದೆ.
ಗಂಡು- ಹೆಣ್ಣಿನ ಸಂಬಂಧದ ಚಿತ್ರಣದ ಜೊತೆಗೆ ಅಪರಿಚಿತನಿಂದ ಆದ ಗರ್ಭದಾನವನ್ನು ಒಬ್ಬ ವೈದ್ಯನಾಗಿ ಒಪ್ಪಿಕೊಳ್ಳುವ ಪ್ರಗತಿಪರ ಚಿಂತನೆ ಮತ್ತು ಆಧುನಿಕ ಮನೋಭಾವವನ್ನು ಲೇಖಕರು ವಿವರಿಸಿದ್ದಾರೆ ಎಂದು ಪುಸ್ತಕದಲ್ಲಿ ತಿಳಿಸಲಾಗಿದೆ.
ಈ ಹಿಂದೆ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ 'ಯುದ್ಧ' ಎನ್ನುವ ಲೇಖನವನ್ನು ಪಠ್ಯ ಪುಸ್ತಕದಲ್ಲಿ ಅಳವಡಿಸಲಾಗಿತ್ತು. ಅದರಲ್ಲಿ ಸೈನಿಕರನ್ನು ಶತ್ರುಗಳಂತೆ ಬಿಂಬಿಸಿದ ಆರೋಪ ಬಂದು, ಮಂಗಳೂರು ವಿಶ್ವವಿದ್ಯಾನಿಲಯ ವಿವಾದಕ್ಕೆ ಕಾರಣವಾಗಿತ್ತು. ಈಗ 'ಮಗುವಿನ ತಂದೆ' ಎಂಬ ಲೇಖನವನ್ನು ಪಠ್ಯವಾಗಿ ಅಳವಡಿಸಿ, ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ -
Gold Rate: ಬೆಂಗಳೂರಿನಲ್ಲಿ ಇಳಿಕೆಯಾಯ್ತು ಚಿನ್ನ-ಬೆಳ್ಳಿ ಬೆಲೆ; ಇಲ್ಲಿದೆ ದರ ಪಟ್ಟಿ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
Horoscope March 14: ಈ ರಾಶಿಯವರ ಆರ್ಥಿಕ ಸ್ಥಿತಿ ಸುಧಾರಣೆ, ದಾಂಪತ್ಯ ಜೀವನದಲ್ಲಿ ಸಂತಸ, ದಿನ ಭವಿಷ್ಯ -
BCCI: ಕರ್ನಾಟಕದ ಕ್ರಿಕೆಟ್ ದಿಗ್ಗಜರಾದ ರಾಹುಲ್ ದ್ರಾವಿಡ್, ರೋಜರ್ ಬಿನ್ನಿಗೆ ಬಿಸಿಸಿಐ ಅತ್ಯುನ್ನತ ಪ್ರಶಸ್ತಿ












Click it and Unblock the Notifications