ಅಪಾಯಕಾರಿಯಾದ ಚಾರ್ಮಾಡಿ ಘಾಟ್ ರಸ್ತೆ: ಸಂಚರಿಸುವ ಮುನ್ನ ಎಚ್ಚರ!
Recommended Video

ಮಂಗಳೂರು, ಸೆಪ್ಟೆಂಬರ್ 21: ಮಂಗಳೂರು- ಬೆಂಗಳೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ರಸ್ತೆ ಸಂಪೂರ್ಣ ಕಿತ್ತುಹೋಗಿದೆ.
ಶಿರಾಡಿ ಘಾಟ್ ಹಾಗು ಸಂಪಾಜೆ ಘಾಟ್ ಘನ ವಾಹನಗಳ ಸಂಚಾರಕ್ಕೆ ಮುಕ್ತಗೊಳಿಸದಿರುವ ಕಾರಣ ಚಾರ್ಮಾಡಿ ಘಾಟ್ ರಸ್ತೆಯಲ್ಲೇ ವಾಹನ ದಟ್ಟಣೆ ಹೆಚ್ಚಾಗಿತ್ತು. ಈ ಹಿನ್ನೆಲೆಯಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟಿದ್ದು ಸಂಚಾರ ಅಪಾಯಕಾರಿ ಎನಿಸಿದೆ.
ಮಂಗಳೂರು-ಬೆಂಗಳೂರು ಸೇರಿದಂತೆ ಮೈಸೂರು ನಡುವೆ ಸಂಚರಿಸುವ ಪ್ರಯಾಣಿಕರಿಗೆ ಶಿರಾಡಿ ಘಾಟ್, ಮಾಣಿ ಮೈಸೂರು ಹೆದ್ದಾರಿ ಬಂದ್ ಆದ ಸಂದರ್ಭದಲ್ಲಿ ಚಾರ್ಮಾಡಿ ಘಾಟ್ ರಸ್ತೆಯೇ ಪರ್ಯಾಯವಾಗಿ ಉಳಿದಿತ್ತು. ಪರಿಣಾಮ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾರೀ ವಾಹನಗಳು ಸಂಚರಿಸಿ ರಸ್ತೆ ಈಗ ಸಂಪೂರ್ಣ ಹಾಳಾಗಿದೆ.

ಪ್ರತಿದಿನ ಹಗಲು ಇರುಳೆನ್ನದೆ ಸಾವಿರಾರು ಘನ ವಾಹನಗಳು ಈ ರಸ್ತೆಯಲ್ಲಿ ಸಂಚರಿಸಿದ ಪರಿಣಾಮ ರಸ್ತೆ ಕಿತ್ತು ಹೋಗಿದೆ. ಕೆಲವೆಡೆ ರಸ್ತೆ ತಿರುವಿನಲ್ಲಿ ತಡೆಗೋಡೆ ಕುಸಿದಿರುವ ಕಾರಣ ರಾತ್ರಿ ಹೊತ್ತು ಈ ತಿರುವುಗಳಲ್ಲಿ ವಾಹನ ಚಾಲನೆ ಅತ್ಯಂತ ಅಪಾಯಕಾರಿಯಾಗಿದೆ.
ಅತೀ ಅಪಾಯಕಾರಿ ತಿರುವುಗಳಲ್ಲಿ ಡಾಂಬರು ಕಿತ್ತು ಹೋಗಿ ಗುಂಡಿ ನಿರ್ಮಾಣವಾಗಿವೆ. ಅಪಾಯಕಾರಿಯಾಗಿ ಪರಿವರ್ತನೆಗೊಂಡಿರುವ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಪ್ರಯಾಣಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಿರಾಡಿ ಘಾಟ್ ನಲ್ಲಿ ಕೇವಲ ಲಘ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶವಿದೆ.

ಆದರೆ 6ಚಕ್ರದ ಘನ ವಾಹನಗಳು, ಕಂಟೇನರ್ , ಟ್ಯಾಂಕರ್ , ಬುಲೆಟ್ ಟ್ಯಾಂಕರ್ ಗಳು ಈ ಚಾರ್ಮಾಡಿ ಘಾಟ್ ರಸ್ತೆ ಮೂಲಕವೇ ಸಂಚರಿಸುತ್ತಿದೆ. ಇದರಿಂದ ಘಾಟ್ ರಸ್ತೆ ಅವ್ಯವಸ್ಥೆಯ ಆಗರವಾಗಿದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ರಸ್ತೆ ದುರಸ್ಥಿಗೆ ಮುಂದಾಗದೇ ಕಣ್ಮುಚ್ಚಿ ಕೂತಿದ್ದಾರೆ.

ಅಪಾಯ ಸಂಭವಿಸುವ ಮುನ್ನ ಕನಿಷ್ಠ ರಸ್ತೆಗೆ ತೇಪೆ ಹಾಕುವ ಕಾರ್ಯ ಮಾಡಬೇಕಿದೆ. ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಈ ರಸ್ತೆಯೂ ಬಂದ್ ಆಗುವ ಆತಂಕ ಕಾಡತೊಡಗಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications