ಮಗುವಿಗೆ ರಕ್ತ ಕ್ಯಾನ್ಸರ್, ಹಣ ಸಹಾಯ ಮಾಡಿ

ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ತಾಲೂಕು, ಕೊಡಿಂಬಾಡಿ ಗ್ರಾಮದ ಹೊಸಗದ್ದೆಯಲ್ಲಿ ವಾಸವಿರುವ ಪ್ರಸಾದ್ ಹಾಗು ಪೂರ್ಣಿಮಾ ಅವರ ಮಗಳು ಪಲ್ಲವಿ ವಿದ್ಯಾನಗರದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೂರನೇ ತರಗತಿಯಲ್ಲಿ ಓದುತ್ತಿದ್ದಾಳೆ.
ಆಗಾಗ ಆರೋಗ್ಯದಲ್ಲಿ ಏರುಪೇರಾಗುತ್ತಿದ್ದರಿಂದ ಪುತ್ತೂರಿನ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ನಂತರ ಮಂಗಳೂರಿನ ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ರಕ್ತದ ಸ್ಯಾಂಪಲ್ ಪರೀಕ್ಷೆ ಮಾಡಿಸಿದಾಗ ರಕ್ತ ಕ್ಯಾನ್ಸರ್ ಇದೆ ಎಂದು ವೈದ್ಯರಾದ ಡಾ. ದಿನೇಶ್ ಶೇಠ್ ಅವರು ಪ್ರಮಾಣಪತ್ರ ನೀಡಿದ್ದಾರೆ.
ತಾವು ದಿನಗೂಲಿ ಮಾಡಿಕೊಂಡು ಜೀವನ ಸಾಗಿಸುತ್ತಿದ್ದು, ಗಂಡ ಕೂಡ ಹೃದಯ ಬೇನೆಯಿಂದ ಬಳಲುತ್ತಿರುವುದರಿಂದ ಮಗಳ ಚಿಕಿತ್ಸೆಗೆ ಹಣಕಾಸು ಸಹಾಯ ಮಾಡಬೇಕೆಂದು ಪೂರ್ಣಿಮಾ ಅವರು ಕೋರಿದ್ದಾರೆ. ಈಗಾಗಲೆ 60 ಸಾವಿರ ರು. ಖರ್ಚಾಗಿದ್ದು, ಉತ್ತಮ ಚಿಕಿತ್ಸೆ ನೀಡಿ ಸಂಪೂರ್ಣ ಗುಣಮುಖಳಾಗಲು 8 ಲಕ್ಷ ರು. ಹಣದ ಅಗತ್ಯವಿದೆ. ಇಷ್ಟೊಂದು ಮೊತ್ತ ಭರಿಸಲು ಬಡವರಾದ ತಮ್ಮಿಂದ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ.
ಆಸಕ್ತ ದಾನಿಗಳು ಮಗುವಿನ ಚಿಕಿತ್ಸೆಗಾಗಿ ಕೆಳಗೆ ನಮೂದಿಸಲಾಗಿರುವ ಬ್ಯಾಂಕ್ ವಿಳಾಸಕ್ಕೆ ಹಣ ವರ್ಗಾಯಿಸಬಹುದು. ಯಾವುದಕ್ಕೂ ಪೂರ್ಣಿಮಾ ಅವರೊಂದಿಗೆ ಮೊಬೈಲ್ ನಲ್ಲಿ ಮಾತನಾಡಿ ನಂತರ ಹಣ ನೀಡಬೇಕೆನಿಸಿದರೆ ನೀಡಬಹುದು.
ಹೆಸರು : ಪ್ರಸಾದ್
ಬ್ಯಾಂಕ್ : ಕರ್ನಾಟಕ ಬ್ಯಾಂಕ್ ಉಪ್ಪಿನಂಗಡಿ
ಉಳಿತಾಯ ಖಾತೆ ಸಂಖ್ಯೆ : 8082500100486101
IFSC code : KARB0000808
ಬ್ಯಾಂಕ್ ವಿಳಾಸ : ಕರ್ನಾಟಕ ಬ್ಯಾಂಕ್, ಶ್ರೀ ಲಕ್ಷ್ಮೀ ಆರ್ಕೇಡ್, ಉಪ್ಪಿನಂಗಡಿ - 574 242, ದಕ್ಷಿಣ ಕನ್ನಡ.
ಫೋನ್ : 74064 24145
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications