ಮಂಗಳೂರಿನ ಆರ್ ಎಸ್ ಎಸ್ ಶಕ್ತಿ ಕೇಂದ್ರದಲ್ಲಿ ಏಕದಂತನಿಗೆ ಪೂಜೆ ಸಲ್ಲಿಸಿದ ಕ್ರೈಸ್ತ ಧರ್ಮಗುರು, ಭಗಿನಿಯರು
ಮಂಗಳೂರು, ಸೆಪ್ಟೆಂಬರ್.16: ಗಣೇಶ ಚತುರ್ಥಿ ಕೇವಲ ಹಿಂದೂಗಳ ಉತ್ಸವ ಮಾತ್ರವಾಗಿರದೇ ಸರ್ವ ಧರ್ಮಿಯರೂ ಸೇರಿ ವಿಜೃಂಭಣೆಯಿಂದ ಆಚರಿಸುವ ಹಲವಾರು ನಿದರ್ಶನಗಳ ನಮ್ಮ ಮುಂದಿದೆ. ಈ ಪಟ್ಟಿಗೆ ಇನ್ನೊಂದು ಹೆಸರು ಸೇರ್ಪಡೆಯಾಗಿದೆ.
ಮಂಗಳೂರಿನ ಸಂಘನಿಕೇತನದಲ್ಲಿ ಪೂಜಿಸಲಾಗುವ ಸಾರ್ವಜನಿಕ ಗಣೇಶೋತ್ಸವದಲ್ಲಿ ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಭಾಗವಹಿಸಿದ್ದಾರೆ.
ಆರ್ ಎಸ್ ಎಸ್ ನ ಶಕ್ತಿ ಕೇಂದ್ರ ಎಂದೇ ಹೇಳಲಾಗುವ ಸಂಘನಿಕೇತನದ ಗಣೇಶೋತ್ಸವ ಸೌಹಾರ್ದತೆಗೆ ವೇದಿಕೆಯಾಗುತ್ತಿದೆ. ಈ ಬಾರಿ ಕ್ರೈಸ್ತ ಧರ್ಮಗುರುಗಳು ಹಾಗು ಕ್ರೈಸ್ತ ಭಗಿನಿಯರು ಈ ಗಣೇಶನ ಪಾದತಲಕ್ಕೆ ಹಣ್ಣುಹಂಪಲು ಸಮರ್ಪಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಕಳೆದ ಬಾರಿಯೂ ಬಾಲ ಏಸು ಕ್ಷೇತ್ರದ ಧರ್ಮಗುರುಗಳು ಬಂದು ಗಣಪತಿಗೆ ಪೂಜೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದ್ದರು.
ಸಂಘನಿಕೇತನದ ವತಿಯಿಂದ ಈ ಬಾರಿ 71ನೇ ವರ್ಷದ ಗಣೇಶ ಚತುರ್ಥಿ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಂಘನಿಕೇತನ ಸಭಾಂಗಣದಲ್ಲಿ ಇರಿಸಲಾದ ಗಣೇಶನ ವಿಗ್ರಹಕ್ಕೆ ಮಂಗಳೂರಿನ ಕ್ಯಾಥೊಲಿಕ್ ಸಭಾ ಮತ್ತು ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರು ಬಂದು ಫಲಪುಷ್ಪ ಸಮರ್ಪಿಸಿ, ಪ್ರಾರ್ಥನೆಯನ್ನು ಸಲ್ಲಿಸಿದ್ದಾರೆ.
ಮಂಗಳೂರು ಕ್ಯಾಥೊಲಿಕ್ ಸಭಾದ ಕಾರ್ಯದರ್ಶಿ ಸೆಲೆಸ್ಟೀನ್ ಡಿಸೋಜಾ, ಸೈಂಟ್ ಜೋಸೆಫ್ ಕಾನ್ವೆಂಟ್ ನ ಭಗಿನಿಯರಾದ ಸಿಸ್ಟರ್ ಜ್ಯೋತಿ, ಸಿಸ್ಟರ್ ಮರಿಯಾ, ಸಿಸ್ಟರ್ ಅನಿತ, ಸಿಸ್ಟರ್ ರೋಸಾ, ಸಿಸ್ಟರ್ ಸುಜಾತ ಗಣೇಶನಿಗೆ ಪ್ರಾರ್ಥನೆ ಸಲ್ಲಿಸಿದರು.

ಹಲವು ವರ್ಷಗಳಿಂದ ಈ ಕ್ರೈಸ್ತ ಧರ್ಮಕೇಂದ್ರಗಳ ಧರ್ಮಗುರುಗಳು ಗಣೇಶೋತ್ಸವದಂದು ಸಂಘನಿಕೇತನಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಯಾವುದೇ ಜಾತಿ-ಧರ್ಮ ರಾಜಕೀಯವಿಲ್ಲದೆ ನಾವೆಲ್ಲರೂ ಒಂದಾಗಿ ಈ ಕಾರ್ಯಕ್ರಮದಲ್ಲಿ ಭಾಗಿಯಾಗುತ್ತಿದ್ದೇವೆ. ಮುಂದೆಯೂ ಇದೇ ರೀತಿ ಭಾಗಿಯಾಗಲು ದೇವರು ಅನುಗ್ರಹಿಸಲಿ ಎಂದು ಕ್ರೈಸ್ತ ಧರ್ಮಗುರುಗಳು ಹಾಗು ಭಗಿನಿಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications