ಆಳ್ವಾಸ್ ನಲ್ಲಿ ಕ್ರಿಸ್ಮಸ್ ಸಂಭ್ರಮ:ವಿಭಿನ್ನ ರೀತಿಯ ದೀಪಾಲಂಕಾರ
ಮಂಗಳೂರು, ಡಿಸೆಂಬರ್ 21 : ದ್ವೇಷ ಮತ್ತು ಧರ್ಮ ಹೀಗೆ ವಿಭಜಿಸುವ ಗೋಡೆಗಳನ್ನು ಕಿತ್ತೆಸೆದು ಮಾನವೀಯತೆ ಬೆಸೆಯುವ, ಬಂಧುತ್ವವನ್ನು ಬೆಳೆಸುವುದು ಇಂದಿನ ಅಗತ್ಯವಾಗಿದೆ. ಬಂಧುತ್ವ ಎನ್ನುವುದು ಜಾತಿ, ಮತ ಧರ್ಮದ ಎಲ್ಲೆ ಮೀರಿದ ಸಂಬಂಧವಾಗಿದೆ ಎಂದು ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ.ಪೀಟರ್ ಪಾವ್ಲ್ ಸಲ್ದಾನ್ಹ ಹೇಳಿದರು.
ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಆಶ್ರಯದಲ್ಲಿ ಗುರುವಾರ ವಿದ್ಯಾಗಿರಿಯ ರತ್ನಾಕರವರ್ಣಿ ವೇದಿಕೆಯಲ್ಲಿ ನಡೆದ ಆಳ್ವಾಸ್ ಕ್ರಿಸ್ಮಸ್ ಸಂಭ್ರಮ 2018 ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದ ಅವರು ನಾವೆಲ್ಲರೂ ಆತ್ಮ ಸಾಕ್ಷಿಗೆ ಸ್ಪಂದಿಸಿ ಒಳಿತನ್ನುಂಟು ಮಾಡುವ ಮತ್ತು ಆ ಮೂಲಕ ಯಾರೂ ಕಸಿದುಕೊಳ್ಳಲಾಗದ ನಿಜವಾದ ಶಾಂತಿಯನ್ನು ಬದುಕಿನಲ್ಲಿ ಅನುಭವಿಸುವವರಾಗಬೇಕು. ನಮ್ಮ ನೆಲ, ಜಲ ಸಂರಕ್ಷಣೆ, ಪರಿಸರ ಪ್ರಿತಿ, ಶುದ್ಧತೆ ಸಂರಕ್ಷಣೆ ಎಲ್ಲರ ಆದ್ಯತೆಯಾಗಲಿ ಎಂದು ಹಾರೈಸಿದರು.
ಶಿರ್ವ ಡಾನ್ ಬೋಸ್ಕೊ ಸಿ.ಬಿ.ಎಸ್.ಸಿ ಸಂಸ್ಥೆಯ ಪ್ರಾಂಶುಪಾಲ ಮಹೇಶ್ ಡಿ'ಸೋಜ ಕ್ರಿಸ್ಮಸ್ ಸಂದೇಶ ನೀಡಿದರು. ಸ್ನೇಹಾಲಯ ಚಾರಿಟೇಬಲ್ ಟ್ರಸ್ಟ್ ನ ಸ್ಥಾಪಕ ಜೋಸೆಫ್ ಡಿ' ಸೋಜ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಡಾ.ಎಂ ಮೋಹನ ಆಳ್ವ ಅಧ್ಯಕ್ಷತೆವಹಿಸಿ ಮಾತನಾಡಿ, ಆರೋಗ್ಯ ಮತ್ತು ಶಿಕ್ಷಣ ಕ್ಷೆತ್ರದಲ್ಲಿ ಕ್ರೈಸ್ತರ ಕೊಡುಗೆ ಅನನ್ಯವಾದದ್ದು. ಮದರ್ ಥೆರೆಸಾ ಅವರಂತಹ ಸಂತರ ಕೊಡುಗೆ ನಮ್ಮೆಲ್ಲರಿಗೂ ಸ್ಫೂರ್ತಿಯಾದರೆ ಶಾಂತಿ, ಪ್ರೀತಿ, ಸಹಬಾಳ್ವೆಯನ್ನು ಮಾತು ಕೃತಿಯಲ್ಲಿ ಪಾಲಿಸುತ್ತಿರುವ ಕ್ರಿಸ್ತರ ಜೀವನ ಸಂದೇಶ ಅರ್ಥಪೂರ್ಣವಾದದ್ದು ಎಂದು ಹೇಳಿದರು.

ಕ್ರಿಸ್ಮಸ್ ಸಂಭ್ರಮದ ಪ್ರಯುಕ್ತ ವಿದ್ಯಾಗಿರಿಯಲ್ಲಿರುವ ನುಡಿಸಿರಿ ವೇದಿಕೆಯನ್ನು ರತ್ನಾಕರವರ್ಣಿ ನಕ್ಷತ್ರ, ವಿಭಿನ್ನ ರೀತಿಯ ವಿದ್ಯುತ್ ದೀಪಾಲಂಕಾರ, ಅಲಂಕಾರಿಕ ವಸ್ತುಗಳಿಂದ ಶೃಂಗರಿಸಲಾಗಿತ್ತು. ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕ್ರಿಸ್ಮಸ್ ವಿಶೇಷ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications