ಮಂಗಳೂರಲ್ಲಿ ಕಳೆಕಟ್ಟಿದ ಕ್ರಿಸ್ ಮಸ್ ಸಂಭ್ರಮ, ಅದ್ಧೂರಿ ಸಿದ್ಧತೆ
ಮಂಗಳೂರು, ಡಿಸೆಂಬರ್ 23 : ಜಗತ್ತಿನೆಲ್ಲೆಡೆ ಕ್ರಿಸ್ ಮಸ್ ಆಚರಣೆಗೆ ಸಿದ್ಧತೆ ಆರಂಭವಾಗಿದ್ದು, ಮಂಗಳೂರಿನಲ್ಲಿಯೂ ಕ್ರಿಸ್ ಮಸ್ ಗೆ ಸಿದ್ಧತೆ ಜೋರಾಗಿಯೇ ನಡೆಯುತ್ತಿದೆ.
ಮಾರುಕಟ್ಟೆಗೆ ಬಗೆಬಗೆಯ ಅಲಂಕಾರಿಕ ಸಾಮಗ್ರಿಗಳು ಲಗ್ಗೆ ಇಟ್ಟಿದ್ದು, ನಗರದ ಅಂಗಡಿಗಳಲ್ಲಿ ಮಾರಾಟಕ್ಕಿಟ್ಟಿರುವ ನಕ್ಷತ್ರಗಳು, ಜಗಮಗಿಸುವ ಗೂಡುದೀಪಗಳು, ಕ್ರಿಬ್ಸ್ ಗೆ ಬೇಕಾದ ವಸ್ತುಗಳು, ಬೇಕರಿಗಳಲ್ಲಿ ಪ್ರದರ್ಶನಕ್ಕಿಟ್ಟಿರುವ ವಿವಿಧ ಆಕಾರದ ಕೇಕ್ ಗಳು ಹಾಗೂ ಬಗೆ-ಬಗೆಯ ತಿಂಡಿಗಳು ಯೇಸುವಿನ ಜನನದ ಆಗಮನವನ್ನು ಸಾರುತ್ತಿವೆ.
ಮಾರುಕಟ್ಟೆಯಲ್ಲಿ ಬಗೆಬಗೆಯ ನಕ್ಷತ್ರಗಳು, ಗೋದಳಲಿಗಳು, ಬಾಲ ಏಸು, ಮೇರಿ, ಜೋಸೆಫ್, ದೇವದೂತರು, ನಾಗರಿಕರು,ಕುರಿಗಾಹಿಗಳು, ಕುರಿ, ಒಂಟೆಗಳ ಪುಟ್ಟ ಪುಟ್ಟ ಗೊಂಬೆಗಳ ಮಾರಾಟ ಮತ್ತು ಖರೀದಿಯ ಭರಾಟೆ ಬಹಳ ಜೋರಾಗಿಯೇ ನಡೆಯುತ್ತಿದೆ.

ಕ್ರಿಸ್ಮಸ್ ಹಬ್ಬವನ್ನು ಬಡವರು ಶ್ರೀಮಂತರೆನ್ನದೆ ಎಲ್ಲಾ ಕ್ರಿಶ್ಚಿಯನ್ ಬಾಂಧವರು ಸಂಭ್ರಮದಿಂದ ಆಚರಣೆ ಮಾಡುತ್ತಾರೆ. ಆದ್ದರಿಂದ ಗೋದಳಿಯ ಸಾಮಾಗ್ರಿಗಳ ಖರೀದಿಯು ಜೋರಾಗಿ ನಡೆಯುತ್ತಿದ್ದು, ಅಂಗಡಿ ಮಾಲೀಕರು ಗ್ರಾಹಕರ ಗಮನಸೆಳೆಯುತ್ತಿದ್ದಾರೆ.
ಮಂಗಳೂರಿನ ಮಾರುಕಟ್ಟೆಯಲ್ಲಿ ರೆಡಿಮೆಡ್ ಗೋದಳಿ, ಹುರುಳಿ ಗದ್ದೆ, ಹೆಸರು ಗದ್ದೆ, ಹುಲ್ಲುಗಾವಲು, ಕ್ರಿಸ್ ಮಸ್ ಟ್ರೀಗಳೆಲ್ಲವೂ ಪ್ಲಾಸ್ಟಿಕ್ ಮೋಲ್ಡ್ ರೂಪದಲ್ಲಿ ದೊರೆಯುತ್ತಿವೆ. ಹೆಚ್ಚಿನ ಶ್ರಮವಿಲ್ಲದೇ ಕಡಿಮೆ ಸಮಯದಲ್ಲಿ ಇವುಗಳನ್ನು ಸುಲಭವಾಗಿ ಜೋಡಿಸಿ ಗೋದಳಿಯನ್ನು ನಿರ್ಮಾಣ ಮಾಡಬಹುದು ಎಂಬ ಕಾರಣಕ್ಕೆ ಈ ರೆಡಿಮೆಡ್ ವಸ್ತುಗಳಿಗೆ ಬೇಡಿಕೆ ಹೆಚ್ಚಿದೆ.

ಇದಲ್ಲದೆ ಸಾಂತಾ ಕ್ಲಾಸ್ ಗೊಂಬೆಗಳು ಮಾರುಕಟ್ಟೆಯಲ್ಲಿ ಲಭ್ಯವಿದೆ. ಈ ಎಲ್ಲಾ ಸಾಮಾಗ್ರಿಗಳು ಸಾಮಾನ್ಯವಾಗಿ ಕೈಗೆಟಕುವ ದರದಿಂದ ಹಿಡಿದು ದುಬಾರಿ ಬೆಲೆಗಳಲ್ಲಿಯೂ ದೊರೆಯುತ್ತವೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications